ಕೊರೋನಾ ನರಕ ದರ್ಶನ ಮಾಡಿಸಿದ ಅಶ್ವಿನ್ ಪತ್ನಿ ಪ್ರೀತಿ

Suvarna News   | Asianet News
Published : May 01, 2021, 02:14 PM ISTUpdated : May 01, 2021, 02:20 PM IST
ಕೊರೋನಾ ನರಕ ದರ್ಶನ ಮಾಡಿಸಿದ ಅಶ್ವಿನ್ ಪತ್ನಿ ಪ್ರೀತಿ

ಸಾರಾಂಶ

ಒಂದೇ ವಾರದಲ್ಲಿ ತಮ್ಮ ಕುಟುಂಬದ 10 ಮಂದಿಗೆ ಕೋವಿಡ್ ದೃಢಪಟ್ಟ ಆ ಭೀಕರ ಕ್ಷಣವನ್ನು ರವಿಚಂದ್ರನ್ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್ ಟ್ವೀಟ್ ಮೂಲಕ ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ  

ಚೆನ್ನೈ(ಮೇ.01): ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್‌ ಕುಟುಂಬ ಕೋವಿಡ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು, ಒಂದು ವಾರದ ಅವಧಿಯಲ್ಲಿ ಅಶ್ವಿನ್‌ ಕುಟುಂಬದ 10 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಆ ಭೀಕರ ಕ್ಷಣಗಳನ್ನು ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್‌ ಬಿಚ್ಚಿಟ್ಟಿದ್ದಾರೆ.

ಕೋವಿಡ್ 19 ಎರಡನೇ ಅಲೆ ಭಾರತವನ್ನು ಬೆಚ್ಚಿಬೀಳಿಸಿದೆ. ಕಳೆದೊಂದು ವಾರದಲ್ಲಿ ಭಾರತದಲ್ಲಿ ಪ್ರತಿನಿತ್ಯ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ 19 ಬಿಸಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೂ ತಟ್ಟಿದೆ. ಕೆಲ ದಿನಗಳ ಹಿಂದಷ್ಟೇ ಡೆಲ್ಲಿ ಕ್ಯಾಪಿಟಲ್ಸ್‌ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಿಢೀರ್ ಎನ್ನುವಂತೆ ಐಪಿಎಲ್‌ನಿಂದ ಹಿಂದೆ ಸರಿದಿದ್ದರು.

ಕುಟುಂಬ ಸದಸ್ಯರಿಗೆ ಕೊರೋನಾ: IPLನಿಂದ ಹೊರ ಬಂದ ಅಶ್ವಿನ್

ಇದೀಗ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್ ಸರಣಿ ಟ್ವೀಟ್‌ಗಳ ಮೂಲಕ ಕಳೆದೊಂದು ವಾರದಲ್ಲಿ ತಮ್ಮ ಕುಟುಂಬ ಅನುಭವಿಸಿದ ಕರಾಳ ದಿನಗಳನ್ನು ಮೆಲುಕು ಹಾಕಿದ್ದಾರೆ. ಒಂದೇ ವಾರದಲ್ಲಿ 6 ವಯಸ್ಕರು ಹಾಗೂ 4 ಮಕ್ಕಳಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಎಲ್ಲರೂ ವಿವಿಧ ನಗರಗಳ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದಷ್ಟು ಎಲ್ಲರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ. ಇದೊಂದೆ ಕೋವಿಡ್ ವಿರುದ್ದ ಹೋರಾಡುವ ಅಸ್ತ್ರ ಎಂದು ಪ್ರೀತಿ ಕರೆಕೊಟ್ಟಿದ್ದಾರೆ.

ನನಗನಿಸುತ್ತೆ, ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯ. ಕಳೆದ 5 ರಿಂದ 8 ದಿನಗಳು ನನ್ನ ಪಾಲಿಗೆ ಅತ್ಯಂತ ಕ್ಲಿಷ್ಟಕರವಾಗಿತ್ತು. ಎಲ್ಲರೂ ಇದ್ದೂ, ಎಲ್ಲಾ ರೀತಿಯ ಸಹಾಯ ಮಾಡಿದರೂ, ಯಾರೊಬ್ಬರು ಜತೆಗಿರಲಿಲ್ಲ. ಇದೊಂದು ಅತ್ಯಂತ ಕೆಟ್ಟ ಐಸೋಲೆಷನ್‌ ರೋಗ ಎಂದು ಪ್ರೀತಿ ಟ್ವೀಟ್ ಮಾಡಿದ್ದಾರೆ.

ರವಿಚಂದ್ರನ್ ಅಶ್ವಿನ್ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ 5 ಪಂದ್ಯವನ್ನಾಡಿದ್ದರು. ಇದಾದ ಬಳಿಕ ತಮ್ಮ ಕುಟುಂಬಸ್ಥರಿಗೆ ಕೋವಿಡ್ 19 ವೈರಸ್ ತಗುಲಿರುವ ವಿಚಾರ ತಿಳಿಯುತ್ತಿದ್ದಂಯೇ ಬಯೋ ಬಬಲ್ ತೊರೆದು ಮನಗೆ ವಾಪಾಸಾಗಿದ್ದರು

2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅಶ್ವಿನ್ ಭಾರತ ಪರ 78 ಟೆಸ್ಟ್, 111 ಏಕದಿನ ಹಾಗೂ 46 ಟಿ20 ಪಂದ್ಯಗಳನ್ನಾಡಿದ್ದಾರೆ. ಇನ್ನು 159 ಐಪಿಎಲ್ ಪಂದ್ಯಗಳನ್ನಾಡಿರುವ ಅನುಭವಿ ಆಫ್‌ಸ್ಪಿನ್ನರ್ 139 ವಿಕೆಟ್ ಕಬಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?
ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!