
ನವದೆಹಲಿ(ಫೆ.02): ವಿಜಯ್ ಹಜಾರೆ ಏಕದಿನ ಟೂರ್ನಿಗಾಗಿ 22 ಆಟಗಾರರ ಕರ್ನಾಟಕ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಆರ್. ಸಮರ್ಥ ತಂಡದ ನಾಯಕರಾಗಿದ್ದಾರೆ. ಉಳಿದಂತೆ ಮುಷ್ತಾಕ್ ಅಲಿ ಟೂರ್ನಿಗೆ ಸ್ಥಾನ ಪಡೆದಿದ್ದ ಬಹುತೇಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.
ಫೆಬ್ರವರಿ 18 ರಿಂದ ವಿಜಯ್ ಹಜಾರೆ ಟೂರ್ನಿಯನ್ನು ಆರಂಭಿಸಲು ಬಿಸಿಸಿಐ ಸಿದ್ಧತೆ ಮಾಡಿಕೊಂಡಿದೆ. ಎಲ್ಲಿ ಪಂದ್ಯಗಳು ನಡೆಯಲಿವೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ವಿಜಯ್ ಹಜಾರೆ ಟ್ರೋಫಿ: ಮುಂಬೈ ಸಂಭಾವ್ಯರ ಪಟ್ಟಿಯಲ್ಲಿ 104 ಕ್ರಿಕೆಟಿಗರು!
ನಾಯಕತ್ವದಿಂದ ಕರುಣ್ಗೆ ಕೊಕ್
ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕಳಪೆ ಫಾರ್ಮ್ನಿಂದ ಕಂಗೆಟ್ಟಿದ್ದ ಕರುಣ್ ನಾಯರ್ರನ್ನು ನಾಯಕತ್ವದಿಂದ ಕೆಳಕ್ಕಿಳಿಸಲಾಗಿದೆ. ವಿಜಯ್ ಹಜಾರೆ ಏಕದಿನ ಟೂರ್ನಿಗೆ ಆರ್. ಸಮರ್ಥಗೆ ನಾಯಕತ್ವ ಜವಾಬ್ದಾರಿ ವಹಿಸಲಾಗಿದೆ.
ತಂಡ: ಸಮರ್ಥ (ನಾಯಕ), ಪಡಿಕ್ಕಲ್, ರೋಹನ್, ನಿಶ್ಚಲ್, ಕರುಣ್, ಶ್ರಿಜಿತ್, ಶರತ್, ರಕ್ಷಿತ್, ಅನಿರುದ್ಧ, ಸಿದ್ಧಾರ್ಥ್, ನಿಕ್ಕಿನ್, ಶ್ರೇಯಸ್, ಗೌತಮ್, ಸುಚಿತ್, ಆದಿತ್ಯ, ಶುಭಾಂಗ್, ಮಿಥುನ್, ಪ್ರಸಿದ್ಧ್, ರೋನಿತ್, ವೈಶಾಕ್, ಮನೋಜ್, ದರ್ಶನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.