
ಬೆಂಗಳೂರು(ಫೆ.28): ಟೀಂ ಇಂಡಿಯಾ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಫಾರ್ಮ್ಗೆ ಮರಳಿರುವುದು ಕನ್ನಡಿಗರಲ್ಲಿ ಸಂತಸ ಮೂಡಿಸಿದೆ. ಆಸ್ಟ್ರೇಲಿಯಾ ಪ್ರವಾಸದ ವೇಳೆ ಕಾಫಿ ವಿತ್ ಕರಣ್ ಶೋನಲ್ಲಿನ ವಿವಾದ ರಾಹುಲ್ ಕರಿಯರ್ಗೆ ಕಪ್ಪು ಚುಕ್ಕೆ ಇಟ್ಟಿತು. ಅಮಾನತು ಶಿಕ್ಷೆಯಿಂದ ತವರಿಗೆ ವಾಪಾಸಾದ ರಾಹುಲ್ಗೆ ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನ ನೆರವಾಗಿದೆ ಎಂದು ರಾಹುಲ್ ಹೇಳಿದ್ದಾರೆ.
ಇದನ್ನೂ ಓದಿ: ಐಸಿಸಿ ಟಿ20 ರ್ಯಾಂಕಿಂಗ್ ಪ್ರಕಟ- ಕೊಹ್ಲಿ, ಧೋನಿಗೆ ಬಡ್ತಿ!
ಅಮಾನತು ಶಿಕ್ಷೆ ಹಿಂಪಡೆ ಬಿಸಿಸಿಐ ರಾಹುಲ್ಗೆ ಭಾರತ ಎ ತಂಡದಲ್ಲಿ ಆಡಲು ಅವಕಾಶ ಮಾಡಿಕೊಟ್ಟಿತು. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕೆ.ಎಲ್.ರಾಹುಲ್ ಆರಂಭದಲ್ಲಿ ಎಡವಿದ್ದರೂ ಬಳಿಕ ಉತ್ತಮ ಪ್ರದರ್ಶನ ನೀಡಿದರು. ಇಷ್ಟೇ ಅಲ್ಲ ರಾಹುಲ್ ನೀಡಿರುವ ಸಲಹೆ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಲು ನೆರವಾಯ್ತು ಎಂದು ರಾಹುಲ್ ಹೇಳಿದ್ದಾರೆ.
"
ಇದನ್ನೂ ಓದಿ: ಪಂದ್ಯದಲ್ಲಿ ಮುಗ್ಗರಿಸಿದರೂ ಧೋನಿ ಶ್ಲಾಘಿಸಿದ ಬಿಸಿಸಿಐ !
ಆಸ್ಟ್ರೇಲಿಯಾ ವಿರುದ್ಧದ 2 ಪಂದ್ಯದ ಟಿ20 ಸರಣಿಯಲ್ಲಿ ರಾಹುಲ್ 90 ರನ್ ಸಿಡಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ರಾಹುಲ್, ದ್ವಿತೀಯ ಪಂದ್ಯದಲ್ಲಿ 47 ರನ್ ಭಾರಿಸಿದ್ದರು. ಈ ಮೂಲಕ ಟೀಂ ಇಂಡಿಯಾಗೆ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.