ಕಳೆದ ವರ್ಷ ಅನ್‌ಸೋಲ್ಡ್ ಆಗಿದ್ದ ಸಂದೀಪ್ ಶರ್ಮಾ, ಈಗ ಐಪಿಎಲ್ ಹೀರೋ..! ಕಮ್‌ಬ್ಯಾಕ್ ಅಂದ್ರೆ ಇದೇ ಅಲ್ವಾ?

By Naveen KodaseFirst Published Apr 23, 2024, 1:41 PM IST
Highlights

ಇನ್ನು ಕಳೆದ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಅನುಭವಿ ವೇಗಿ ಸಂದೀಪ್ ಶರ್ಮಾ ಅನ್‌ಸೋಲ್ಡ್ ಆಗಿದ್ದರು. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೃಷ್ಣ ಐಪಿಎಲ್‌ನಿಂದ ಹೊರಬಿದ್ದ ಹಿನ್ನಲೆಯಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಪ್ರಸಿದ್ಧ್‌ಗೆ ಬದಲಿ ಆಟಗಾರನಾಗಿ ಸಂದೀಪ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು.

ಜೈಪುರ(ಏ.23): ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಸೋಮವಾರ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವು 9 ವಿಕೆಟ್ ಭರ್ಜರಿ ಗೆಲುವು ಸಾಧಿಸುವ ಮೂಲಕ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್‌ಗೆ ಒಂದು ಹೆಜ್ಜೆಯಿಟ್ಟಾಗಿದೆ. ಈ ಸಂದೀಪ್ ಶರ್ಮಾ ಮಿಂಚಿನ ಬೌಲಿಂಗ್ ಹಾಗೂ ಯಶಸ್ವಿ ಜೈಸ್ವಾಲ್ ಅಜೇಯ ಶತಕದ ನೆರವಿನಿಂದು ಸಂಜು ಸ್ಯಾಮ್ಸನ್ ಪಡೆ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು ಕಳೆದ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಅನುಭವಿ ವೇಗಿ ಸಂದೀಪ್ ಶರ್ಮಾ ಅನ್‌ಸೋಲ್ಡ್ ಆಗಿದ್ದರು. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೃಷ್ಣ ಐಪಿಎಲ್‌ನಿಂದ ಹೊರಬಿದ್ದ ಹಿನ್ನಲೆಯಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಪ್ರಸಿದ್ಧ್‌ಗೆ ಬದಲಿ ಆಟಗಾರನಾಗಿ ಸಂದೀಪ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಇದೀಗ ಮುಂಬೈ ಇಂಡಿಯನ್ಸ್ ಎದುರು ಶಿಸ್ತುಬದ್ಧ ದಾಳಿ ನಡೆಸಿ 5 ವಿಕೆಟ್ ಕಬಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಸಂದೀಪ್ ಶರ್ಮಾ ಬಗ್ಗೆ ನಾಯಕ ಸಂಜು ಸ್ಯಾಮ್ಸನ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇನ್ನು ಮುಂದೆ ಸಂದೀಪ್ ಶರ್ಮಾ ಅವರ ಆಡುವ ಪ್ರತಿ ಮ್ಯಾಚ್ ಕೂಡಾ ನಮಗೆ ಬೋನಸ್ ಇದ್ದ ಹಾಗೆ ಎಂದಿದ್ದಾರೆ.

For his terrific five-wicket haul in the first innings, Sandeep Sharma bags the Player of the Match award 🏆

Rajasthan Royals finish Jaipur leg on a high with a comprehensive win 👏👏

Scorecard ▶️ https://t.co/Mb1gd0UfgA | pic.twitter.com/5wEmcX61RR

— IndianPremierLeague (@IPL)

ICC T20 World Cup 2024: ಭಾರತ ಸಂಭಾವ್ಯ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಸಂದೀಪ್ ಶರ್ಮಾ ಮುಂಬೈ ಇಂಡಿಯನ್ಸ್ ಎದುರು ಕೇವಲ 18 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ, ಐಪಿಎಲ್ ಇತಿಹಾಸದಲ್ಲೇ ರಾಜಸ್ಥಾನ ರಾಯಲ್ಸ್ ಪರ ಮೂರನೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡಿ ಗಮನ ಸೆಳೆದಿದ್ದಾರೆ.  ಈ ಮೊದಲು ಸೋಹೆಲ್ ತನ್ವೀರ್ ಹಾಗೂ ಜೇಮ್ಸ್ ಫಾಕ್ನರ್ ರಾಜಸ್ಥಾನ ರಾಯಲ್ಸ್ ಪರ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

ಸಂದೀಪ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಅಪಾಯಕಾರಿ ಬ್ಯಾಟರ್‌ಗಳಾದ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್ ಹಾಗೂ ಗೆರಾಲ್ಡ್ ಕೋಟ್ಜೀ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ರಾಜಸ್ಥಾನ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಪಡೆಯನ್ನು ಕೇವಲ 179 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡವು ಕೇವಲ ಒಂದು ವಿಕೆಟ್ ಕಳೆದುಕೊಂಡು, ಇನ್ನೂ 8 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. 

click me!