ಐತಿಹಾಸಿಕ, ಸಾರ್ಥಕ ದಿನ: ರಾಮ ಮಂದಿರ ನಿರ್ಮಾಣ ಕೊಂಡಾಡಿದ ಪಾಕ್ ಕ್ರಿಕೆಟಿಗ ಕನೇರಿಯಾ!

Published : Aug 06, 2020, 12:13 PM ISTUpdated : Aug 06, 2020, 12:33 PM IST
ಐತಿಹಾಸಿಕ, ಸಾರ್ಥಕ ದಿನ: ರಾಮ ಮಂದಿರ ನಿರ್ಮಾಣ ಕೊಂಡಾಡಿದ ಪಾಕ್ ಕ್ರಿಕೆಟಿಗ ಕನೇರಿಯಾ!

ಸಾರಾಂಶ

ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಆದರ್ಶ ಪುರುಷ ಶ್ರೀರಾಮ ಭವ್ಯ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಭಾರತ ಮಾತ್ರವಲ್ಲ ವಿಶ್ವದೆಲ್ಲೆಡೆ ಸಂಭ್ರಮಿಸಲಾಗುತ್ತಿದೆ. ಇದೀಗ ಪಾಕಿಸ್ತಾನದ ವಿವಾದಿತ ಕ್ರಿಕೆಟಿಗ ದಾನಿಶ್ ಕನೇರಿಯಾ ಸಂತಸ ಹಂಚಿಕೊಂಡಿದ್ದಾರೆ.

ಕರಾಚಿ(ಆ.06): ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಕೊರೋನಾ ವೈರಸ್ ಕಾರಣ 200 ಮಂದಿ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಸಂಪೂರ್ಣ ಭಾರತವೇ ಐತಿಹಾಸಿಕದ ದಿನವನ್ನು ಸಂಭ್ರಮಿಸಿತ್ತು. 500 ವರ್ಷಗಳಿಂದ ಬಂಧಿಯಾಗಿದ್ದ ರಾಮನನ್ನು ಭವ್ಯ ಮಂದಿರದಲ್ಲಿ ಪ್ರತಿಷ್ಠಾಪಿಸಲು ಕೆಲಸ ಕಾರ್ಯಗಳು ನಡೆಯುತ್ತಿದೆ. ವಿಶ್ವದೆಲ್ಲೆಡೆ ಈ ವಿಶೇಷ ದಿನವನ್ನು ಸಂಭ್ರಮಿಸಲಾಗಿದೆ. ಇದೀಗ ಪಾಕಿಸ್ತಾನದ ಹಿಂದೂ ಕ್ರಿಕೆಟಿಗ ದಾನಿಶ್ ಕನೇರಿಯಾ, ಶ್ರೀ ರಾಮ ಮಂದಿರ ಭೂಮಿ ಪೂಜೆಯನ್ನು ಐತಿಹಾಸಿಕ ಹಾಗೂ ಸಾರ್ಥಕ ದಿನ ಎಂದು ಬಣ್ಣಿಸಿದ್ದಾರೆ.

ಕಿರುಕುಳ ಕೊಟ್ಟರೂ ಹಿಂದು ಧರ್ಮ ತ್ಯಜಿಸಲು ಮನಸ್ಸಾಗಲಿಲ್ಲ: ಪಾಕ್ ಕ್ರಿಕೆಟಿಗ

ರಾಮ ಮಂದಿರ ಭೂಮಿ ಪೂಜೆ ದಿನ ಐತಿಹಾಸಿಕ ದಿನವಾಗಿದೆ. ವಿಶ್ವದಲ್ಲಿರುವ ಎಲ್ಲಾ ಹಿಂದುಗಳಿಗೆ ಶ್ರೀ ರಾಮ ಆದರ್ಶ. ಶ್ರೀ ರಾಮನ ಭಕ್ತಿ ಸೌಂದರ್ಯ ಅಡಗಿರುವುದು ಹೆಸರಿನಲ್ಲಿ ಮಾತ್ರವಲ್ಲ, ಜೊತೆಗೆ ವ್ಯಕ್ತಿತ್ವದಲ್ಲಿ. ಶ್ರೀ ರಾಮ ಗೆಲುವಿನ ಸಂಕೇತ. ಇಡೀ ವಿಶ್ವದಲ್ಲೇ ಶ್ರೀ ರಾಮನ ಸಂತಸ ಅಲೆ ಕಾಣುತ್ತಿದ್ದೇವೆ. ಇದು ಸಾರ್ಥಕತೆಯ ದಿನ ಎಂದು ಪಾಕಿಸ್ತಾನ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಟ್ವಿಟರ್ ಮೂಲಕ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

 

ಹಿಂದೂ ಅನ್ನೋ ಕಾರಣಕ್ಕೆ ತುಳಿದರು, ಪ್ರಧಾನಿಗೆ ಮನವಿ ಮಾಡಿದ ಪಾಕ್ ಕ್ರಿಕೆಟಿಗ ಕನೇರಿಯಾ!

ಭಾರತ, ಭಾರತೀಯರು, ಹಿಂದುತ್ವದ ಬಗ್ಗೆ ಅಪಾರ ಗೌರವವಿರುವ ದಾನಿಶ್ ಕನೆರಿಯಾ ಇತ್ತೀಚೆಗೆ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ತಿರುಗೇಟು ನೀಡಿದ್ದರು. ಆಫ್ರಿದಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಡಿದ ಮಾತುಗಳನ್ನು ಕನೇರಿಯಾ ಖಂಡಿಸಿದ್ದರು. ಅಫ್ರಿದಿ ಮಾತನಾಡುವ ಮುನ್ನ ಯೋಚಿಸಬೇಕು. ಅಸಂಬದ್ದ ಹೇಳಿಕೆಗಳಿಂದ ಪಾಕಿಸ್ತಾನ ಕ್ರಿಕೆಟ್‌ಗೆ ಧಕ್ಕೆಯಾಗಲಿದೆ ಎಂದು ಕನೇರಿಯಾ ಹೇಳಿದ್ದರು.

ಪಾಕಿಸ್ತಾನದಲ್ಲಿರುವ ಹಲವು ಹಿಂದೂಗಳು ರಾಮ ಮಂದಿರ ಭೂಮಿ ಪೂಜೆಯನ್ನು ಕೊಂಡಾಡಿದ್ದಾರೆ. ಭಾರತದಲ್ಲಿರುವ ಪಾಕ್ ಹಿಂದೂ ನಿರಾಶ್ರಿತರು ಕೂಡ ಶ್ರೀ ರಾಮ ಮಂದಿರ ಭೂಮಿ ಪೂಜೆಯ ವೇಳೆ ನಾವು ಭಾರತದಲ್ಲಿದ್ದೇವೆ ಅನ್ನೋ ಹೆಮ್ಮೆ ಇದೆ. ನಮ್ಮ ಜನ್ಮ ಸಾರ್ಥಕ ಎಂದು ಸಂತಸ ಹಂಚಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿವೀಸ್ ಸರಣಿ: ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಮತ್ತಷ್ಟು ತಡ; ಈ ಆಟಗಾರನಿಗೆ ಚಾನ್ಸ್?
2025ರಲ್ಲಿ ಅತೀ ಹೆಚ್ಚು ಗೂಗಲ್‌ ಹುಡುಕಾಟದಲ್ಲಿ ಇವರೇ ಟಾಪ್! ಕ್ರಿಕೆಟ್ ಲೋಕದ ಅಚ್ಚರಿಯ ಮುಖಗಳಿವು