ರಾಂಚಿ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ ಬೇಕು ಜಸ್ಟ್ 2 ವಿಕೆಟ್

Published : Oct 21, 2019, 05:33 PM IST
ರಾಂಚಿ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ ಬೇಕು ಜಸ್ಟ್ 2 ವಿಕೆಟ್

ಸಾರಾಂಶ

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡುವುದರೊಂದಿಗೆ ಇತಿಹಾಸ ನಿರ್ಮಿಸುವ ಹೊಸ್ತಿಲಲ್ಲಿದೆ. ಹರಿಣಗಳ ಇನ್ನೆರಡು ವಿಕೆಟ್ ಕಬಳಿಸಿದರೆ, ಭಾರತ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಜಯಿಸಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 

ರಾಂಚಿ[ಅ.21]: ಟೀಂ ಇಂಡಿಯಾ ಬೌಲರ್’ಗಳ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಇದೀಗ ಮತ್ತೊಂದು ಇನಿಂಗ್ಸ್ ಸೋಲಿನ ಭೀತಿ ಎದುರಿಸುತ್ತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ಕಳೆದುಕೊಂಡು 132 ರನ್ ಬಾರಿಸಿದ್ದು, ಇನ್ನೂ 203 ರನ್’ಗಳ ಹಿನ್ನಡೆಯಲ್ಲಿದೆ. ಈಗಾಗಲೇ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿರುವ ವಿರಾಟ್ ಪಡೆ, ರಾಂಚಿ ಟೆಸ್ಟ್ ಪಂದ್ಯವನ್ನು ಗೆಲ್ಲುವುದರ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ಬರೆಯುವ ತವಕದಲ್ಲಿದೆ. 

ರಾಂಚಿ ಟೆಸ್ಟ್: ದಕ್ಷಿಣ ಆಫ್ರಿಕಾ ಆಲೌಟ್ @162, ಫಾಲೋ ಆನ್’ಗೆ ಸಿಲುಕಿದ ಹರಿಣಗಳು

9 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಮೂರನೇ ದಿನದಾಟ ಆರಂಭಿಸಿದ ಆಫ್ರಿಕಾ ತಂಡ ಮೊದಲ ಓವರ್’ನಲ್ಲೇ ನಾಯಕ ಡುಪ್ಲೆಸಿಸ್ ವಿಕೆಟ್ ಕಳೆದುಕೊಂಡಿತು.  ತೆಂಬ ಬವುಮಾ-ಜುಬೇರ್ ಹಮ್ಜಾ 91 ದಿಟ್ಟ ಹೋರಾಟ ನಡೆಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸ್’ಮನ್’ಗಳು ಹೆಚ್ಚು ಹೊತ್ತು ಬ್ಯಾಟ್ ಬೀಸಲು ಭಾರತೀಯ ಬೌಲರ್’ಗಳು ಅವಕಾಶ ನೀಡಲಿಲ್ಲ. ಪರಿಣಾಮ 162 ರನ್’ಗಳಿಗೆ ಆಲೌಟ್ ಆಗುವ ಮೂಲಕ ಫಾಲೋ ಆನ್’ಗೆ ಸಿಲುಕಿತು.

ಬಾಂಗ್ಲಾ ಟಿ20 ಸರಣಿಯಿಂದ ಈ ಕ್ರಿಕೆಟಿಗನಿಗೆ ಗೇಟ್ ಪಾಸ್..?

ಇನ್ನು 335 ರನ್’ಗಳ ಹಿನ್ನಡೆಯೊಂದಿಗೆ ಫಾಲೋ ಆನ್ ಹೇರಿಸಿಕೊಂಡು ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮತ್ತೊಮ್ಮೆ ಉಮೇಶ್ ಯಾದವ್ ತಾವೆಸೆದ ಮೊದಲ ಓವರ್’ನಲ್ಲೇ ಆಘಾತ ನೀಡಿದರು. ಡಿಕಾಕ್ 5 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮೊದಲ ಇನಿಂಗ್ಸ್’ನಲ್ಲಿ ಅರ್ಧಶತಕ ಬಾರಿಸಿದ್ದ ಹಮ್ಜಾ ಶೂನ್ಯ ಸುತ್ತಿ ಶಮಿಗೆ ವಿಕೆಟ್ ಒಪ್ಪಿಸಿದರು. ಇನ್ನು ಡುಪ್ಲೆಸಿಸ್ ಆಟ 4 ರನ್’ಗೆ ಸೀಮಿತವಾದರೆ, ಬವುಮಾ ಸೊನ್ನೆ ಸುತ್ತಿ ಪೆವಿಲಿಯನ್ ಹಾದಿ ಹಿಡಿದರು. ಡೀನ್ ಎಲ್ಗಾರ್[16] ಗಾಯಗೊಂಡು ರಿಟೈರ್ಡ್ ಹರ್ಟ್ ಆದರು. ಎಲ್ಗಾರ್ ಹೊರತು ಪಡಿಸಿ ಅಗ್ರ ಐವರು ಬ್ಯಾಟ್ಸ್’ಮನ್’ಗಳು ಎರಡಂಕಿ ಮೊತ್ತ ದಾಖಲಿಸಲು ವಿಫಲರಾದರು. 

ಜಾರ್ಜ್ ಲಿಂಡೆ[27], ಡಿ ಬೃಯಾನ್ 30* ಹಾಗೂ ರಬಾಡ 12 ಕೆಲಕಾಲ ಪ್ರತಿರೋಧ ತೋರಿದರು. ಭಾರತ ಪರ ಶಮಿ 3 ವಿಕೆಟ್ ಪಡೆದರೆ, ಉಮೇಶ್ ಯಾದವ್ 2, ಜಡೇಜಾ ಹಾಗೂ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.  

ಸಂಕ್ಷಿಪ್ತ ಸ್ಕೋರ್:
ಭಾರತ: 497/9 ಡಿಕ್ಲೇರ್
ದಕ್ಷಿಣ ಆಫ್ರಿಕಾ: 162 ಹಾಗೂ 132/8
[* ಮೂರನೇ ದಿನದಾಟದ ಅಂತ್ಯಕ್ಕೆ]

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ತವರಿನ ಪಂದ್ಯದ ಟಿಕೆಟ್‌ ಹಿಂದೆಂದಿಗಿಂತ ದುಬಾರಿ! ಗರಿಷ್ಠ ಟಿಕೆಟ್ ಬೆಲೆ ಕೇವಲ ₹47,000
Royal Challengers Bengaluru: 2026ರ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಿಗೆ ಸೇರಲಿವೆಯಾ ಏಳು ಮಹಾ ದಾಖಲೆಗಳು