ಕರ್ನಾಟಕಕ್ಕೆ ಜಮ್ಮು ಎದುರಾಳಿ; ಪಂದ್ಯ ಬೆಂಗಳೂರಿಗೆ ವರ್ಗಾಯಾಸಿಲು ಮನವಿ!

Suvarna News   | Asianet News
Published : Feb 16, 2020, 11:02 AM IST
ಕರ್ನಾಟಕಕ್ಕೆ ಜಮ್ಮು ಎದುರಾಳಿ; ಪಂದ್ಯ ಬೆಂಗಳೂರಿಗೆ ವರ್ಗಾಯಾಸಿಲು ಮನವಿ!

ಸಾರಾಂಶ

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಂತಕ್ಕೆ ತಲುಪಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಕರ್ನಾಟಕ, ಜಮ್ಮು ಕಾಶ್ಮೀರ ವಿರುದ್ದ ಹೋರಾಟ ನಡೆಸಲಿದೆ. ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪಂದ್ಯವನ್ನು ಬೆಂಗಳೂರಿಗೆ ವರ್ಗಾಯಿಸಲು ಬಿಸಿಸಿಐಗೆ ಮನವಿ ಸಲ್ಲಿಸಲಾಗಿದೆ . 

ಬೆಂಗಳೂರು(ಫೆ.16): 2019-20ರ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ನಾಕೌಟ್‌ ಹಂತ ಪ್ರವೇಶಿಸಿದೆ. ಕ್ವಾರ್ಟರ್‌ಫೈನಲ್‌ ಪಂದ್ಯಗಳ ವೇಳಾಪಟ್ಟಿಯೂ ಅಧಿಕೃತವಾಗಿದ್ದು, ನಿರೀಕ್ಷೆಯಂತೆಯೇ ಕರ್ನಾಟಕಕ್ಕೆ ಜಮ್ಮುಕಾಶ್ಮೀರ ಎದುರಾಳಿಯಾಗಿದೆ. ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಕರ್ನಾಟಕ ಆಡಿದ 8 ಪಂದ್ಯಗಳಲ್ಲಿ 4ರಲ್ಲಿ ಗೆಲುವು, 4ರಲ್ಲಿ ಡ್ರಾ ಸಾಧಿಸಿದೆ. ಸೋಲರಿಯದ ತಂಡವಾಗಿರುವ ಕರ್ನಾಟಕ ತಂಡ 31 ಅಂಕಗಳಿಂದ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಬರೋಡ ಬಗ್ಗುಬಡಿದು ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ಲಗ್ಗೆ

ರಣಜಿ ಟ್ರೋಫಿಯ ಗುಂಪು ಹಂತದಲ್ಲಿ ಈ ಬಾರಿ 38 ತಂಡಗಳು ಕಣಕ್ಕಿಳಿದಿದ್ದವು. ಇದರಲ್ಲಿ 8 ತಂಡಗಳು ನಾಕೌಟ್‌ ಹಂತಕ್ಕೇರಿವೆ. ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಅಗ್ರ ಸ್ಥಾನಗಳಿಸಿರುವ 5 ತಂಡಗಳಾದ ಗುಜರಾತ್‌, ಬಂಗಾಳ, ಕರ್ನಾಟಕ, ಸೌರಾಷ್ಟ್ರ ಹಾಗೂ ಆಂಧ್ರಪ್ರದೇಶ, ‘ಸಿ’ ಗುಂಪಿನಲ್ಲಿರುವ ಅಗ್ರ 2 ತಂಡಗಳಾದ ಜಮ್ಮು-ಕಾಶ್ಮೀರ, ಒಡಿಶಾ ಹಾಗೂ ಪ್ಲೇಟ್‌ ಗುಂಪಿನಲ್ಲಿ ಮೊದಲ ಸ್ಥಾನ ಪಡೆದಿರುವ ಗೋವಾ ತಂಡ ಕ್ವಾರ್ಟರ್‌ಫೈನಲ್‌ ಹಂತಕ್ಕೆ ತೇರ್ಗಡೆ ಹೊಂದಿವೆ.

ಇದನ್ನೂ ಓದಿ: ರಣಜಿ ಟ್ರೋಫಿ: ಯುವಿ ರೀತಿಯಲ್ಲೇ ಕ್ಯಾನ್ಸರ್ ಗೆದ್ದು ಶತಕ ಸಿಡಿಸಿದ 18ರ ಪೋರ!

ಇದರಲ್ಲಿ ‘ಎ’ ಮತ್ತು ‘ಬಿ’ ಗುಂಪಿನಲ್ಲಿ 35 ಅಂಕಗಳಿಸಿ ಮೊದಲ ಸ್ಥಾನದಲ್ಲಿರುವ ಗುಜರಾತ್‌ ಪ್ಲೇಟ್‌ ಗುಂಪಿನ ಅಗ್ರಸ್ಥಾನಿ ಗೋವಾ ತಂಡವನ್ನು ಮೊದಲ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಎದುರಿಸಲಿದೆ. ‘ಎ’ ಮತ್ತು ‘ಬಿ’ ಗುಂಪಿನಲ್ಲಿ 32 ಅಂಕಗಳಿಂದ 2ನೇ ಸ್ಥಾನದಲ್ಲಿರುವ ಬಂಗಾಳ ‘ಸಿ’ ಗುಂಪಿನಲ್ಲಿ 38 ಅಂಕಗಳಿಂದ 2ನೇ ಸ್ಥಾನಿಯಾಗಿರುವ ಒಡಿಶಾ ಎದುರು 2ನೇ ಕ್ವಾರ್ಟರ್‌ ಪಂದ್ಯದಲ್ಲಿ ಸೆಣಸಲಿದೆ. ಅದರಂತೆ ಕರ್ನಾಟಕ ‘ಸಿ’ ಗುಂಪಿನಲ್ಲಿ 39 ಅಂಕಗಳಿಸಿರುವ ಜಮ್ಮು-ಕಾಶ್ಮೀರ ತಂಡದ ಎದುರು 3ನೇ ಕ್ವಾರ್ಟರ್‌ನಲ್ಲಿ ಕಾದಾಟ ನಡೆಸಲಿದೆ. 31 ಅಂಕಗಳಿಸಿರುವ ಸೌರಾಷ್ಟ್ರ, 27 ಅಂಕಗಳಿಸಿರುವ ಆಂಧ್ರಪ್ರದೇಶ ತಂಡವನ್ನು 4ನೇ ಕ್ವಾರ್ಟರ್‌ನಲ್ಲಿ ಎದುರಿಸಲಿದೆ.

ಬಿಸಿಸಿಐಗೆ ಮನವಿ
ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯ ನಡೆಯುವ ಸ್ಥಳಗಳನ್ನು ಈಗಾಗಲೇ ನಿಗದಿಪಡಿಸಲಾಗಿದೆ. ಕರ್ನಾಟಕ-ಜಮ್ಮುಕಾಶ್ಮೀರ ನಡುವಿನ ಕ್ವಾರ್ಟರ್‌ ಪಂದ್ಯ ಜಮ್ಮುವಿನಲ್ಲಿ ನಡೆಯಲಿದೆ. ಆದರೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಕರ್ನಾಟಕ-ಜಮ್ಮುಕಾಶ್ಮೀರ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಯೋಜಿಸುವುದಾಗಿ ಹೇಳಿದೆ. ಈ ಸಂಬಂಧ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಮನವಿ ಮಾಡುವುದಾಗಿ ಕೆಎಸ್‌ಸಿಎ ಖಜಾಂಚಿ ವಿನಯ್‌ ಮೃತ್ಯುಂಜಯ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಕ್ವಾರ್ಟರ್‌ಫೈನಲ್‌ ವೇಳಾಪಟ್ಟಿ
ಫೆ.20 ಗುಜರಾತ್‌-ಗೋವಾ ಗುಜರಾತ್‌
ಫೆ.20 ಬಂಗಾಳ-ಒಡಿಶಾ ಒಡಿಶಾ
ಫೆ.20 ಕರ್ನಾಟಕ-ಜಮ್ಮುಕಾಶ್ಮೀರ ಜಮ್ಮುಕಾಶ್ಮೀರ
ಫೆ.20 ಸೌರಾಷ್ಟ್ರ-ಆಂಧ್ರಪ್ರದೇಶ ಆಂಧ್ರಪ್ರದೇಶ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?