
ಕೋಲ್ಕತಾ(ಡಿ.27): ಅನಧಿಕೃತವಾಗಿ ಪಶ್ಚಿಮ ಬಂಗಾಳ ತಂಡದ ಡ್ರೆಸಿಂಗ್ ಕೊಠಡಿಗೆ ಪ್ರವೇಶಿಸಿದ್ದಕ್ಕಾಗಿ ರಾಷ್ಟ್ರೀಯ ಆಯ್ಕೆ ಸಮಿತಿ ಸದಸ್ಯ ದೇವಾಂಗ್ ಗಾಂಧಿ ಅವರನ್ನು ಹೊರ ಕಳುಹಿಸಿದ ಘಟನೆ ಗುರುವಾರ ನಡೆದಿದೆ. ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ನಡುವಣ ರಣಜಿ ಪಂದ್ಯದ ವೇಳೆ ಈ ಅನುಮತಿ ಇಲ್ಲದೇ ಗಾಂಧಿ ಡ್ರೆಸಿಂಗ್ ಕೊಠಡಿ ಒಳ ಪ್ರವೇಶಿಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ತೆಂಡುಲ್ಕರ್ ಭದ್ರತೆ ಇಳಿಸಿ ಆದಿತ್ಯ ಠಾಕ್ರೆ ಭದ್ರತೆ ಹೆಚ್ಚಿಸಿದ ಮಹಾ ಸರ್ಕಾರ.
ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಅಧಿಕಾರಿ ಸೌಮೆನ್ ಕರ್ಮಾಕರ್, ಗಾಂಧಿ ಅವರನ್ನು ತೆರಳುವಂತೆ ಸೂಚಿಸಿದ್ದಾರೆ. ಈ ವೇಳೆ ತಂಡದ ಫಿಸಿಯೋ ಅವರನ್ನು ಕಾಣಲು ಬಂದಿರುವುದಾಗಿ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಮಾಜಿ ನಾಯಕ ಮನೋಜ್ ತಿವಾರಿ ಪ್ರಶ್ನಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತಾದ ಮಾಹಿತಿ ಈಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ತಲುಪಿದೆ.
ಇದನ್ನೂ ಓದಿ: ಕೋಚ್ಗೆ ಬೈದು ತಂಡದಿಂದಲೇ ಕಿಕೌಟ್ ಆದ ಅಶೋಕ್ ದಿಂಡಾ!.
ವೈದ್ಯಕೀಯ ಚಿಕಿತ್ಸೆಗಾಗಿ ಗಾಂಧಿ ಅವರು ಆಟಗಾರರ ಡ್ರೆಸಿಂಗ್ ಕೊಠಡಿಗೆ ಆಗಮಿಸಿದ್ದರು. ಈ ಬಗ್ಗೆ ಸಂಬಂಧಿಸಿದವರ ಗಮನಕ್ಕೂ ತರಲಾಗಿತ್ತು. ಪ್ರವೇಶಕ್ಕೆ ಅಧಿಕೃತ ಪರವಾನಗಿ ನೀಡಿದ ಬಳಿಕವೇ ಪ್ರವೇಶಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.