
ಬೆಂಗಳೂರು(ಫೆ.14): ಕರ್ನಾಟಕ-ಬರೋಡಾ ರಣಜಿ ಪಂದ್ಯದ 2ನೇ ದಿನವಾದ ಗುರುವಾರ ವೀಕ್ಷಕ ವಿವರಣೆಗಾರ ಸುಶೀಲ್ ದೋಶಿ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 149 ರನ್ಗಳ ಗುರಿ
ಸಹ ವೀಕ್ಷಕ ವಿವರಣೆಗಾರ, ‘ಗವಾಸ್ಕರ್ ಹಿಂದಿಯಲ್ಲಿ ಕಾಮೆಂಟ್ರಿ ಮಾಡುವುದನ್ನು ಕೇಳುವುದಕ್ಕೆ ಖುಷಿಯಾಗುತ್ತದೆ’ ಎಂದಿದ್ದಕ್ಕೆ ಸುಶೀಲ್, ‘ಪ್ರತಿಯೊಬ್ಬ ಭಾರತೀಯನು ಹಿಂದಿ ಕಲಿಯಬೇಕು. ಅದು ನಮ್ಮ ಮಾತೃ ಭಾಷೆ. ಹಿಂದಿಗಿಂತ ಉತ್ತಮ ಭಾಷೆ ಮತ್ತೊಂದಿಲ್ಲ. ನಾವು ಕ್ರಿಕೆಟಿಗರು, ನಾವಿನ್ನೂ ಹಿಂದಿಯಲ್ಲಿ ಮಾತನಾಡಬೇಕೆ ಎಂದು ವರ್ತಿಸುವವರನ್ನು ಕಂಡರೆ ನನಗೆ ಸಿಟ್ಟು ಬರುತ್ತದೆ. ಅವರಿಗೆ ನೀವು ಭಾರತದಲ್ಲಿ ಇದ್ದೀರಿ, ಇಲ್ಲಿನ ಮಾತೃಭಾಷೆ ಮಾತನಾಡಿ ಎಂದು ಹೇಳಲು ಇಚ್ಛಿಸುತ್ತೇನೆ’ ಎಂದರು.
ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಬಿಸಿಸಿಐ ಹಾಗೂ ಪಂದ್ಯ ಪ್ರಸಾರ ಮಾಡುತ್ತಿರುವ ಸ್ಟಾರ್ ಸ್ಪೋರ್ಟ್ಸ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಕರ್ನಾಟಕದ ಅಭಿಮಾನಿಗಳು ಟ್ವೀಟ್ಗಳನ್ನು ಮಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮದೇ ಆದ ಭಾಷೆಯನ್ನು ಹೊಂದಿದೆ. ಭಾರತದಲ್ಲಿ ಯಾವುದೇ ರಾಷ್ಟ್ರ ಭಾಷೆ ಅಂತ ಇಲ್ಲ ಎಂದು ಟ್ವಿಟರ್ನಲ್ಲೇ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಿವೀಸ್ ನೆಲದಲ್ಲಿ ಕನ್ನಡ ಕಲರವ: ರಾಹುಲ್-ಪಾಂಡೆ ಮಾತಿಗೆ ಫ್ಯಾನ್ಸ್ ಫುಲ್ ಖುಷ್
ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಹಾಗೂ ಮನೀಶ್ ಪಾಂಡೆ ಜೋಡಿ 5ನೇ ವಿಕೆಟ್ಗೆ 107 ರನ್ಗಳ ಜತೆಯಾಟವಾಡಿದ್ದರು. ರಾಹುಲ್-ಮನೀಶ್ ಜೋಡಿ ಬ್ಯಾಟಿಂಗ್ ಮಾಡುವ ವೇಳೆ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದಿದ್ದರು. ಆ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಓಡಿ-ಓಡಿ ಬಾ, ಬರ್ತೀರಾ?, ಬೇಡ-ಬೇಡ, ಬಾ-ಬಾ ಎನ್ನುವಂತಹ ಮಾತುಗಳು ಸ್ಟಂಪ್ಸ್ ಮೈಕ್ನಲ್ಲಿ ಸ್ಪಷ್ಟವಾಗಿ ಕೇಳಿಸಿದ್ದವು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.