Ranji Trophy ಮುಂಬೈ ಎದುರು ರಣಜಿ ಟ್ರೋಫಿ ಗೆಲ್ಲಲು ಮಧ್ಯಪ್ರದೇಶಕ್ಕೆ 108 ರನ್‌ ಗುರಿ..!

Published : Jun 26, 2022, 01:03 PM ISTUpdated : Jun 26, 2022, 01:04 PM IST
Ranji Trophy ಮುಂಬೈ ಎದುರು ರಣಜಿ ಟ್ರೋಫಿ ಗೆಲ್ಲಲು ಮಧ್ಯಪ್ರದೇಶಕ್ಕೆ 108 ರನ್‌ ಗುರಿ..!

ಸಾರಾಂಶ

* ರಣಜಿ ಟ್ರೋಫಿ ಫೈನಲ್‌ನಲ್ಲಿ ಗೆಲುವಿನ ಹೊಸ್ತಿಲಲ್ಲಿ ಮಧ್ಯಪ್ರದೇಶ * ಮುಂಬೈ ಎದುರು ಗೆಲ್ಲಲು ಮಧ್ಯಪ್ರದೇಶಕ್ಕೆ 108 ರನ್‌ಗಳ ಗುರಿ * ಎರಡನೇ ಇನಿಂಗ್ಸ್‌ನಲ್ಲಿ 269 ರನ್‌ಗಳಿಗೆ ಸರ್ವಪತನ ಕಂಡ ಮುಂಬೈ

ಬೆಂಗಳೂರು(ಜೂ.26): 2022ನೇ ಸಾಲಿನ ರಣಜಿ ಟ್ರೋಫಿ ಫೈನಲ್‌ (Ranji Trophy Final) ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಮುಂಬೈ ಕ್ರಿಕೆಟ್ ತಂಡವು 269 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಮಧ್ಯಪ್ರದೇಶ ತಂಡವು ರಣಜಿ ಟ್ರೋಫಿ ಗೆಲ್ಲಲು 108 ರನ್‌ಗಳ ಸಾಧಾರಣ ಗುರಿ ನೀಡಿದೆ. ವೇಗಿ ಕುಮಾರ ಕಾರ್ತಿಕೇಯ 4 ವಿಕೆಟ್ ಕಬಳಿಸುವ ಮೂಲಕ ಮುಂಬೈ ತಂಡವನ್ನು ದೊಡ್ಡ ಮೊತ್ತ ಕಲೆಹಾಕದಂತೆ ನೋಡಿಕೊಂಡರು.

ಇಲ್ಲಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ನಾಲ್ಕನೇ ದಿನದಾಟದಂತ್ಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 113 ರನ್‌ಗಳಿಸಿದ್ದ ಮುಂಬೈ ತಂಡವು ಐದನೇ ದಿನದಾಟದ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಆಘಾತಕ್ಕೊಳಗಾಯಿತು. ಇದಾದ ಬಳಿಕ ಸುವೆದ್ ಪಾರ್ಕರ್‌ ಹಾಗೂ ಸರ್ಫರಾಜ್ ಖಾನ್‌ ಆಕರ್ಷಕ ಜತೆಯಾಟವಾಡುವ ಮೂಲಕ ತಂಡದ ಮೊತ್ತ ಇನ್ನೂರರ ಗಡಿ ದಾಟಲು ನೆರವಾದರು. ಸುವೆದ್ ಪಾರ್ಕರ್‌ ಸ್ಪೋಟಕ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಸುವೇದ್ ಪಾರ್ಕರ್ 58 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಹಿತ 51 ರನ್‌ ಬಾರಿಸಿ ಕುಮಾರ್ ಕಾರ್ತಿಕೇಯ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಈ ಬಾರಿರ ರಣಜಿ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಸರ್ಫರಾಜ್ ಖಾನ್ 48 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 45 ರನ್ ಬಾರಿಸಿ ಪಾರ್ಥ್ ಸಹಾನಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ದಿಢೀರ್ ಕುಸಿದ ಮುಂಬೈ: 232 ರನ್‌ಗಳವರೆಗೂ ಕೇವಲ 5 ವಿಕೆಟ್ ಕಳೆದುಕೊಂಡು ಬೃಹತ್ ಮೊತ್ತದತ್ತ ದಾಪುಗಾಲು ಹಾಕುತ್ತಿದ್ದ ಮುಂಬೈ ತಂಡವು ಸರ್ಫರಾಜ್ ಖಾನ್ ವಿಕೆಟ್ ಪತನವಾಗುತ್ತಿದ್ದಂತೆಯೇ ನಾಟಕೀಯ ಕುಸಿತ ಕಂಡಿತು. ಮುಂಬೈ ತಂಡವು ತನ್ನ ಖಾತೆಗೆ 37 ರನ್ ಸೇರಿಸುವಷ್ಟರಲ್ಲಿ ಇನ್ನುಳಿದ ಐದು ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯಿತು. ಮುಂಬೈ ತಂಡವು ಕೇವಲ 269 ರನ್‌ಗಳಿಸಿ ಸರ್ವಪತನ ಕಾಣುವ ಮೂಲಕ ಎರಡನೇ ಇನಿಂಗ್ಸ್‌ನಲ್ಲಿ 107 ರನ್‌ಗಳ ಮುನ್ನಡೆ ಸಾಧಿಸಿದೆ.

Ranji Trophy ಚೊಚ್ಚಲ ರಣಜಿ ಟ್ರೋಫಿ ಕಿರೀಟ ಧರಿಸುವತ್ತ ಮಧ್ಯಪ್ರದೇಶ..!

ಮಧ್ಯಪ್ರದೇಶ ಕ್ರಿಕೆಟ್ ತಂಡದ ಪರ ವೇಗಿ ಕುಮಾರ ಕಾರ್ತಿಕೇಯ 98 ರನ್‌ ನೀಡಿ 4 ವಿಕೆಟ್ ಪಡೆದರು. ಇನ್ನು ಗೌರವ್ ಯಾದವ್ ಹಾಗೂ ಪಾರ್ಥ್‌ ಸಹಾನಿ ತಲಾ 2 ವಿಕೆಟ್‌ ಪಡೆದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?