
ರಾಜ್ಕೋಟ್(ಮಾ.09): 2019-20ರ ರಣಜಿ ಟ್ರೋಫಿ ಫೈನಲ್ ಪಂದ್ಯ ಸೋಮವಾರದಿಂದ ಇಲ್ಲಿ ಆರಂಭವಾಗಿದ್ದು, ಬಂಗಾಳ ಎದುರು ಟಾಸ್ ಗೆದ್ದ ಸೌರಾಷ್ಟ್ರ ಬ್ಯಾಟಿಂಗ್ ಆಯ್ದುಕೊಂಡಿದೆ. 14 ಓವರ್ ಮುಕ್ತಾಯದ ವೇಳೆಗೆ ಸೌರಾಷ್ಟ್ರ ವಿಕೆಟ್ ನಷ್ಟವಿಲ್ಲದೇ 39 ರನ್ ಗಳಿಸಿದೆ.
ರಣಜಿ ಟ್ರೋಫಿ: ಕರ್ನಾಟಕ ಮಣಿಸಿ ಫೈನಲ್ಗೆ ಲಗ್ಗೆಯಿಟ್ಟ ಬಂಗಾಳ
1989-90ರಲ್ಲಿ ಕೊನೆ ಬಾರಿಗೆ ಪ್ರಶಸ್ತಿ ಜಯಿಸಿದ್ದ ಬಂಗಾಳ, ಸೆಮಿಫೈನಲ್ನಲ್ಲಿ ಕರ್ನಾಟಕ ವಿರುದ್ಧ ತೋರಿದ ಪ್ರದರ್ಶನವನ್ನೇ ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ 2013-14ರಿಂದ ಈ ವರೆಗೂ 4 ಬಾರಿ ಫೈನಲ್ ಪ್ರವೇಶಿಸಿರುವ ಸೌರಾಷ್ಟ್ರ, ಈ ಬಾರಿ ಟ್ರೋಫಿ ಎತ್ತಿಹಿಡಿಯಲು ಕಾತರಿಸುತ್ತಿದೆ.
ಚೇತೇಶ್ವರ್ ಪೂಜಾರ ಸೌರಾಷ್ಟ್ರದ ಬಲ ಹೆಚ್ಚಿಸಲಿದ್ದು, ವೃದ್ಧಿಮಾನ್ ಸಾಹ ಸೇರ್ಪಡೆ ಬಂಗಾಳದ ಆತ್ಮವಿಶ್ವಾಸ ವೃದ್ಧಿಸಿದೆ. ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಸೆಮಿಫೈನಲ್ನಲ್ಲಿ 7 ವಿಕೆಟ್ ಕಬಳಿಸಿ ಮಿಂಚಿದ್ದರು. ತಂಡ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಿದೆ. ಬಂಗಾಳ ತನ್ನ ಹಿರಿಯ ಬ್ಯಾಟ್ಸ್ಮನ್ಗಳಾದ ಮನೋಜ್ ತಿವಾರಿ ಹಾಗೂ ಅನುಸ್ತೂಪ್ ಮಜುಂದಾರ್ರನ್ನು ನೆಚ್ಚಿಕೊಂಡಿದೆ.
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.