Ranji Trophy Final: ಮುಂಬೈ ಎದುರು ಸೋಲು ತಪ್ಪಿಸಲು ವಿದರ್ಭ ಹೋರಾಟ

Published : Mar 14, 2024, 08:59 AM IST
Ranji Trophy Final: ಮುಂಬೈ ಎದುರು ಸೋಲು ತಪ್ಪಿಸಲು ವಿದರ್ಭ ಹೋರಾಟ

ಸಾರಾಂಶ

ಸದ್ಯ ವಿದರ್ಭದ ಮುಂದೆ ಗೆಲುವಿನ ಆಯ್ಕೆ ಮಾತ್ರ ಇದೆ. ಇದಕ್ಕಾಗಿ ತಂಡ ಕೊನೆ ದಿನ ಅಸಾಧಾರಣ ಪ್ರದರ್ಶನ ನೀಡಬೇಕಿದೆ. ತಂಡ ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿರುವ ಕಾರಣ ಪಂದ್ಯ ಡ್ರಾ ಗೊಂಡರೂ ಇನ್ನಿಂಗ್ಸ್‌ ಮುನ್ನಡೆ ಅಧಾರದಲ್ಲಿ ಮುಂಬೈ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

ಮುಂಬೈ(ಮಾ.14): 41 ಬಾರಿ ಚಾಂಪಿಯನ್‌ ಮುಂಬೈ ತಂಡ ಈ ಬಾರಿ ರಣಜಿ ಟ್ರೋಫಿ ಫೈನಲ್‌ನಲ್ಲಿ ವಿದರ್ಭ ವಿರುದ್ಧ ಗೆಲುವಿನ ಸನಿಹಕ್ಕೆ ತಲುಪಿದೆ. ಪಂದ್ಯದಲ್ಲಿ ಮುಂಬೈ ಸಂಪೂರ್ಣ ಅಧಿಪತ್ಯ ಸಾಧಿಸಿದ ಹೊರತಾಗಿಯೂ ಸೋಲು ತಪ್ಪಿಸಲು 2 ಬಾರಿ ಚಾಂಪಿಯನ್‌ ವಿದರ್ಭ ಹೋರಾಡುತ್ತಿದ್ದು, ಕೊನೆ ಕ್ಷಣದ ಕ್ಲೈಮ್ಯಾಕ್ಸ್‌ ಮಾತ್ರ ಬಾಕಿ ಇದೆ. ವಿದರ್ಭಕ್ಕೆ ಕೊನೆ ದಿನವಾದ ಗುರುವಾರ 290 ರನ್‌ ಅಗತ್ಯವಿದ್ದು, ಮುಂಬೈ ಗೆಲುವಿಗೆ 5 ವಿಕೆಟ್‌ ಪಡೆಯಬೇಕಿದೆ.

ಸದ್ಯ ವಿದರ್ಭದ ಮುಂದೆ ಗೆಲುವಿನ ಆಯ್ಕೆ ಮಾತ್ರ ಇದೆ. ಇದಕ್ಕಾಗಿ ತಂಡ ಕೊನೆ ದಿನ ಅಸಾಧಾರಣ ಪ್ರದರ್ಶನ ನೀಡಬೇಕಿದೆ. ತಂಡ ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿರುವ ಕಾರಣ ಪಂದ್ಯ ಡ್ರಾ ಗೊಂಡರೂ ಇನ್ನಿಂಗ್ಸ್‌ ಮುನ್ನಡೆ ಅಧಾರದಲ್ಲಿ ಮುಂಬೈ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

ಉತ್ತರ ಪ್ರದೇಶ ಮೇಲೆ ಬ್ಯಾಟಿಂಗ್‌ ಪ್ರಹಾರ, ಸಿಕೆ ನಾಯ್ಡು ಟ್ರೋಫಿ ಗೆದ್ದ ಕರ್ನಾಟಕ

538 ರನ್‌ಗಳ ಹಿಮಾಲಯದೆತ್ತರದ ಗುರಿ ಪಡೆದಿರುವ ವಿದರ್ಭ 4ನೇ ದಿನದಂತ್ಯಕ್ಕೆ 5 ವಿಕೆಟ್‌ಗೆ 248 ರನ್‌ ಕಲೆಹಾಕಿದೆ. ಮೊದಲ ವಿಕೆಟ್‌ಗೆ ಅಥರ್ವ ತೈಡೆ(32) ಹಾಗೂ ಧ್ರುವ್‌ ಶೋರೆ(28) 64 ರನ್‌ ಜೊತೆಯಾಟವಾಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಮುನ್ಸೂಚನೆ ನೀಡಿದ್ದರು. ಆದರೆ ಇಬ್ಬರೂ 3 ಎಸೆತಗಳ ಅಂತರದಲ್ಲಿ ಪೆವಿಲಿಯನ್‌ ಸೇರಿದರು. ಅಥರ್ವಗೆ ಶಮ್ಸ್‌ ಮುಲಾನಿ ಪೆವಿಲಿಯನ್ ಹಾದಿ ತೋರಿದರೆ, ಧ್ರುವ್‌ ಅವರು ತನುಶ್‌ ಕೋಟ್ಯಾನ್‌ ಎಸೆತದಲ್ಲಿ ಬೌಲ್ಡ್‌ ಆದರು. ಇವರಿಬ್ಬರ ನಿರ್ಗಮನದೊಂದಿಗೆ ವಿದರ್ಭ ಮತ್ತೆ ಅಪಾಯಕ್ಕೆ ಸಿಲುಕಿತು.

ಬಳಿಕ ಕ್ರೀಸ್‌ಗೆ ಬಂದ ಅಮನ್ ಮೋಖಡೆ 32, ಯಶ್‌ ರಾಥೋಡ್‌ 7 ರನ್‌ಗೆ ವಿಕೆಟ್‌ ಒಪ್ಪಿಸಿದರು. 133ಕ್ಕೆ 4 ವಿಕೆಟ್ ಕಳೆದುಕೊಂಡ ಬಳಿಕ ಕರುಣ್‌ ನಾಯರ್‌(74), ನಾಯಕ ಅಕ್ಷಯ್‌ ವಾಡ್ಕರ್‌(ಔಟಾಗದೆ 56 ರನ್‌) ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಸದ್ಯ ಅಕ್ಷರ್‌ ಅವರು ಹರ್ಷ್‌ ದುಬೆ(ಔಟಾಗದೆ 11) ಜೊತೆ ಕೊನೆ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದು, ತಂಡವನ್ನು ಸೋಲಿನಿಂದ ಪಾರು ಮಾಡಿ 3ನೇ ಬಾರಿ ಪ್ರಶಸ್ತಿ ಗೆಲ್ಲಲು ನೆರವಾಗಲಿದ್ದಾರೊ ಎಂಬ ಕುತೂಹಲವಿದೆ.

ಫಿಟ್‌ನೆಸ್‌ ಟೆಸ್ಟ್‌ನಲ್ಲಿ ರಿಷಭ್‌ ಪಾಸ್‌: ಐಪಿಎಲ್‌ನಲ್ಲಿ ಕಣಕ್ಕೆ..! ಟಿ20 ವಿಶ್ವಕಪ್‌ಗೂ ಆಯ್ಕೆ?

2ನೇ ಇನ್ನಿಂಗ್ಸ್‌ನ ಶತಕ ವೀರ ಮುಶೀರ್‌ ಖಾನ್‌ ಬೌಲಿಂಗ್‌ನಲ್ಲೂ ಮಿಂಚಿ 2 ವಿಕೆಟ್‌ ಪಡೆದರು. ತನುಶ್‌ ಕೋಟ್ಯಾನ್‌ ಕೂಡಾ 2 ವಿಕೆಟ್‌ ಪಡೆದಿದ್ದು, ಮತ್ತೊಂದು ವಿಕೆಟ್‌ ಶಮ್ಸ್‌ ಮುಲಾನಿ ಪಾಲಾಯಿತು.

ಸ್ಕೋರ್‌: ಮುಂಬೈ 224/10 ಮತ್ತು 418/10, ವಿದರ್ಭ 105/10 ಮತ್ತು 248/5 (4ನೇ ದಿನದಂತ್ಯಕ್ಕೆ) (ಕರುಣ್‌ 74, ಅಕ್ಷಯ್‌ ಔಟಾಗದೆ 56, ಮುಶೀರ್‌ 2-38, ತನುಶ್‌ 2-56)
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!