Ranji Trophy: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್‌

Published : Feb 16, 2024, 09:20 AM IST
Ranji Trophy: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್‌

ಸಾರಾಂಶ

ಮಯಾಂಕ್ ಅಗರ್‌ವಾಲ್‌ ನಾಯಕತ್ವದ ರಾಜ್ಯ ತಂಡ ಎಲೈಟ್‌ ‘ಸಿ’ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದು, 1ರಲ್ಲಿ ಸೋತು, 2ರಲ್ಲಿ ಡ್ರಾ ಸಾಧಿಸಿದೆ. ತಂಡ ಸದ್ಯ 24 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಹುಬ್ಬಳ್ಳಿ(ಫೆ.16): ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದ್ದು, ನಾಕೌಟ್‌ಗೇರಲು ಗೆಲುವು ಅನಿವಾರ್ಯ. ಪಂದ್ಯಕ್ಕೆ ಹುಬ್ಬಳ್ಳಿ ಕೆಎಸ್‌ಸಿಎ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಮಯಾಂಕ್ ಅಗರ್‌ವಾಲ್‌ ನಾಯಕತ್ವದ ರಾಜ್ಯ ತಂಡ ಎಲೈಟ್‌ ‘ಸಿ’ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದು, 1ರಲ್ಲಿ ಸೋತು, 2ರಲ್ಲಿ ಡ್ರಾ ಸಾಧಿಸಿದೆ. ತಂಡ ಸದ್ಯ 24 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ತಂಡ ಈ ಪಂದ್ಯದಲ್ಲಿ ಗೆದ್ದರೆ ಗುಂಪಿನಲ್ಲಿ ಅಗ್ರಸ್ಥಾನಿಯಾಗಿಯೇ ನಾಕೌಟ್‌ ಹಂತ ಪ್ರವೇಶಿಸಲಿದೆ. ತಂಡಕ್ಕೆ ನಾಕೌಟ್‌ಗೇರಬೇಕಿದ್ದರೆ ಮೊದಲ ಇನ್ನಿಂಗ್ಸ್‌ ಮುನ್ನಡೆ ಪಡೆದು ಡ್ರಾ ಸಾಧಿಸಿದರೂ ಸಾಕು. ಒಂದು ವೇಳೆ ಸೋತರೆ ಆಗ ತಂಡದ ಭವಿಷ್ಯ ಇತರ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ತಮಿಳುನಾಡು 22, ಗುಜರಾತ್‌ 19, ರೈಲ್ವೇಸ್‌ 18, ತ್ರಿಪುರಾ 17 ಅಂಕ ಹೊಂದಿದ್ದು, ಈ ಎಲ್ಲಾ ತಂಡಗಳಿಗೂ ಕ್ವಾರ್ಟರ್‌ಗೇರುವ ಅವಕಾಶ ಇರುವ ಕಾರಣ ರಾಜ್ಯ ತಂಡ ಗೆಲ್ಲುವುದು ಅನಿವಾರ್ಯ.

ಮತ್ತೊಂದೆಡೆ ಚಂಡೀಗಢ ಆಡಿರುವ 6 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. 1 ಪಂದ್ಯ ಸೋತು, 5ರಲ್ಲಿ ಡ್ರಾ ಸಾಧಿಸಿರುವ ತಂಡ 5 ಅಂಕದೊಂದಿಗೆ ಗುಂಪಿನಲ್ಲಿ 7ನೇ ಸ್ಥಾನದಲ್ಲಿದೆ.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ

ಕಿವೀಸ್‌ಗೆ 267 ರನ್ ಗುರಿ

ಹ್ಯಾಮಿಲ್ಟನ್‌ (ನ್ಯೂಜಿಲೆಂಡ್‌): ಡೇವಿಡ್‌ ಬೆಡಿಂಗ್‌ಹ್ಯಾಮ್‌ ಶತಕ ನೆರವಿಂದ 2ನೇ ಇನ್ನಿಂಗ್ಸ್‌ನಲ್ಲಿ 235 ರನ್‌ ಗಳಿಸಿರುವ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ಗೆಲುವಿಗೆ 267 ರನ್‌ ಗುರಿ ನೀಡಿದೆ. 3ನೇ ದಿನದಂತ್ಯಕ್ಕೆ 1 ವಿಕೆಟ್‌ಗೆ 41 ರನ್‌ ಗಳಿಸಿರುವ ಕಿವೀಸ್‌ಗೆ ಗೆಲುವು ಸಾಧಿಸಲು ಇನ್ನೂ 227 ರನ್‌ ಅವಶ್ಯಕತೆಯಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!
ವೆಂಕಟೇಶ್ ಅಯ್ಯರ್‌ಗೆ ನಂ.3 ಸ್ಲಾಟ್ ಫಿಕ್ಸ್; ಮುಂಬರುವ ಐಪಿಎಲ್‌ಗೆ ಆರ್‌ಸಿಬಿ ಬಲಿಷ್ಠ ಆಡುವ ಹನ್ನೊಂದರ ಬಳಗ ಹೀಗಿರಲಿದೆ!