ರಣಜಿ ಟ್ರೋಫಿ: ಕರ್ನಾಟಕ ಆಲೌಟ್ @206

Suvarna News   | Asianet News
Published : Feb 22, 2020, 03:48 PM IST
ರಣಜಿ ಟ್ರೋಫಿ: ಕರ್ನಾಟಕ ಆಲೌಟ್ @206

ಸಾರಾಂಶ

ರಣಜಿ ಟ್ರೋಫಿ ಕಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 206 ರನ್‌ಗಳಿಗೆ ಆಲೌಟ್ ಆಗಿದೆ. ಈ ಕುರಿತಾದ ವಿವರ ಇಲ್ಲಿದೆ.

ಜಮ್ಮು(ಫೆ.22): ಕೃಷ್ಣಮೂರ್ತಿ ಸಿದ್ಧಾರ್ಥ್(76), ಮನೀಶ್ ಪಾಂಡೆ(37) ಸಮಯೋಚಿತ ಬ್ಯಾಟಿಂಗ್ ಹೊರತಾಗಿಯೂ ಕರ್ನಾಟಕ ತಂಡವು ಮೊದಲ ಇನಿಂಗ್ಸ್‌ನಲ್ಲಿ 206 ರನ್‌ಗಳಿಗೆ ಸರ್ವಪತನ ಕಂಡಿದೆ. ರಣಜಿ ಟ್ರೋಫಿ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಜಮ್ಮು ಮತ್ತು ಕಾಶ್ಮೀರ ತಂಡವನ್ನು 200 ರನ್‌ಗಳೊಳಗಾಗಿ ನಿಯಂತ್ರಿಸ ಬೇಕಿದೆ.

ಇಲ್ಲಿನ ಗಾಂಧಿ ಮೆಮೋರಿಯಲ್ ಸೈನ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಕರ್ನಾಟಕ-ಜಮ್ಮು ಮತ್ತು ಕಾಶ್ಮೀರ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನ ಕೇವಲ 6 ಓವರ್ ಬೌಲಿಂಗ್ ಮಾಡಲಷ್ಟೇ ಸಾಧ್ಯವಾಗಿತ್ತು. ಮೊದಲ ದಿನ ಕರ್ನಾಟಕ 2 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿತ್ತು ಇನ್ನು ಎರಡನೇ ದಿನ ಒಂದೂ ಎಸೆತ ಕಾಣದೇ ಮುಕ್ತಾಯವಾಗಿತ್ತು. ಮೂರನೇ ದಿನದಲ್ಲಿ ಮನೀಶ್ ಪಾಂಡೆ(37), ಕೃಷ್ಣಮೂರ್ತಿ ಸಿದ್ಧಾರ್ಥ್(76) ಆಕರ್ಷಕ ಅರ್ಧಶತಕ ತಂಡಕ್ಕೆ ಆಸರೆಯಾಯಿತು. 

ರಣಜಿ ಟ್ರೋಫಿ: ಮೊನ್ನೆ ಸುರಿದ ಮಳೆಗೆ ನಿನ್ನೆ ಇಡೀ ದಿನದಾಟ ಬಲಿ!

ಜಮ್ಮು ಪರ ಆಕೀಬ್ ನಬೀ, ಯೂಸುಫ್ ಹಾಗೂ ಫರ್ವೇಜ್ ರಸೆಲ್ ತಲಾ 3 ವಿಕೆಟ್ ಪಡೆದರು. ಇನ್ನು ಆಬೀದ್ ಮುಷ್ತಾಕ್ ಒಂದು ವಿಕೆಟ್ ಪಡೆದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?