ಬರೋಡ ಬಗ್ಗುಬಡಿದು ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ಲಗ್ಗೆ

Suvarna News   | Asianet News
Published : Feb 14, 2020, 06:06 PM IST
ಬರೋಡ ಬಗ್ಗುಬಡಿದು ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ಲಗ್ಗೆ

ಸಾರಾಂಶ

ರಣಜಿ ಟೂರ್ನಿಯಲ್ಲಿ ಕರುಣ್ ನಾಯರ್ ನೇತೃತ್ವದ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಬರೋಡ ವಿರುದ್ಧ ರಾಜ್ಯ ತಂಡ 8 ವಿಕೆಟ್‌ಗಳ ಜಯ ದಾಖಲಿಸಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಬೆಂಗಳೂರು(ಫೆ.14): ರಣಜಿ ಟ್ರೋಫಿ ಪಂದ್ಯದಲ್ಲಿ ಬರೋಡ ವಿರುದ್ಧ ಸಂಘಟಿತ ಪ್ರದರ್ಶನ ತೋರಿದ ಕರ್ನಾಟಕ ತಂಡ ಇನ್ನೊಂದು ದಿನ ಬಾಕಿ ಇರುವಾಗಲೇ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದೆ. 

ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 149 ರನ್‌ಗಳ ಗುರಿ

ಇಲ್ಲಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಗುಂಪುಹಂತದ ಕೊನೆಯ ಪಂದ್ಯದಲ್ಲಿ ಕರ್ನಾಟಕ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿತ್ತು. ಗೆಲ್ಲಲು 149 ರನ್‌ಗಳ ಗುರಿ ಪಡೆದ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿತಾದರೂ ಆ ಬಳಿಕ 3ನೇ ವಿಕೆಟ್‌ಗೆ ಕರುಣ್ ನಾಯರ್ ಹಾಗೂ ಕೆ. ಸಿದ್ಧಾರ್ಥ್ 92 ರನ್‌ಗಳ ಮುರಿಯದ ಜತೆಯಾಟದ ನೆರವಿನಿಂದ ಭರ್ಜರಿ ಜಯ ದಾಖಲಿಸಿತು. ನಾಯಕ್ ಕರುಣ್ ನಾಯರ್ 126 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 71 ರನ್ ಬಾರಿಸಿದರೆ, ಸಿದ್ಧಾರ್ಥ್ 68 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 29 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

ರಣಜಿ ಪಂದ್ಯದಲ್ಲಿ ಹಿಂದಿ ಹೇರಿಕೆ: ಗ್ರಾಚಾರ ಬಿಡಿಸಿದ ಕನ್ನಡಿಗರು

2ನೇ ದಿನದಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳೊಂದಿಗೆ ಮೂರನೇ ದಿನದಾಟ ಆರಂಭಿಸಿದ ಬರೋಡ ತಂಡ 296 ರನ್‌ಗಳಿಗೆ ಸರ್ವಪತನ ಕಂಡಿತು. ಅಭಿಮನ್ಯು ರಜಪೂತ್ 52 ಹಾಗೂ ಪಾರ್ಥ್ ಕೊಹ್ಲಿ 42 ರನ್ ಬಾರಿಸುವ ಮೂಲಕ ಕರ್ನಾಟಕ ವಿರುದ್ಧ ಪ್ರತಿರೋಧ ತೋರಿದರು. ಇದರ ಹೊರತಾಗಿಯೂ ಪ್ರಸಿದ್ಧ್ ಕೃಷ್ಣ ಮಾರಕ ದಾಳಿಗೆ ತತ್ತರಿಸಿ ಹೋಯಿತು. 

ಮೊದಲ ಇನಿಂಗ್ಸ್‌ನಲ್ಲಿ 47 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 71 ರನ್ ಬಾರಿಸಿದ ನಾಯಕ ಕರುಣ್ ನಾಯರ್ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ಗುಂಪು ಹಂತದಲ್ಲಿ 4 ಗೆಲುವು ಹಾಗೂ 4 ಡ್ರಾದೊಂದಿಗೆ ಒಟ್ಟು 31 ಅಂಕಗಳೊಂದಿಗೆ ಎ ಮತ್ತು ಬಿ ಗುಂಪಿನಲ್ಲಿ ಮೂರನೇ ಸ್ಥಾನಕ್ಕೇರಿದೆ. ಇನ್ನು ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕ ತಂಡವು ಜಮ್ಮು-ಕಾಶ್ಮೀರ ತಂಡವನ್ನು ಎದುರಿಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ