
ಜಮ್ಮು(ಫೆ.24): ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೃಷ್ಣಮೂರ್ತಿ ಸಿದ್ದಾರ್ಥ್(98) ಶತಕ ವಂಚಿತ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ಎರಡನೇ ಇನಿಂಗ್ಸ್ನಲ್ಲಿ 316 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಜಮ್ಮು & ಕಾಶ್ಮೀರ ತಂಡಕ್ಕೆ ಗೆಲ್ಲಲು 331 ರನ್ಗಳ ಗುರಿ ನೀಡಿದೆ.
ನಾಲ್ಕನೇ ದಿನದಾಟದಂತ್ಯಕ್ಕೆ ಕರ್ನಾಟಕ ತಂಡವು 4 ವಿಕೆಟ್ ಕಳೆದುಕೊಂಡು 245 ರನ್ ಬಾರಿಸಿ ಒಟ್ಟಾರೆ 259 ರನ್ಗಳ ಮುನ್ನಡೆ ಸಾಧಿಸಿತ್ತು. ಇನ್ನು ನಾಲ್ಕನೇ ದಿನದಾಟದಲ್ಲೂ ಕರ್ನಾಟಕ ತನ್ನ ಖಾತೆಗೆ 30 ಸೇರಿಸಿತು. ಈ ವೇಳೆ ಶತಕದ ಹೊಸ್ತಿಲಲ್ಲಿ ಸಿದ್ಧಾರ್ಥ್(98) ಆಬೀದ್ ಮುಷ್ತಾಕ್ಗೆ ವಿಕೆಟ್ ಒಪ್ಪಿಸಿದರು. ಸಿದ್ಧಾರ್ಥ್ 177 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 98 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 275 ರನ್ಗಳಿಗೆ ಕೇವಲ 4 ವಿಕೆಟ್ ಕಳೆದುಕೊಂಡಿದ್ದ ಕರ್ನಾಟಕ, ಸಿದ್ಧಾರ್ಥ್ ವಿಕೆಟ್ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಕೇವಲ 41 ರನ್ಗಳ ಅಂತರದಲ್ಲಿ ಕರ್ನಾಟಕ ತಂಡವು 6 ವಿಕೆಟ್ ಕಳೆದುಕೊಂಡಿತು.
ರಣಜಿ ಟ್ರೋಫಿ: ಕರ್ನಾಟಕಕ್ಕೆ ರೋಚಕ 14 ರನ್ಗಳ ಇನಿಂಗ್ಸ್ ಮುನ್ನಡೆ
ಜಮ್ಮು&ಕಾಶ್ಮೀರ ಪರ ಆಬೀದ್ ಮುಷ್ತಾಕ್ 6 ವಿಕೆಟ್ ಪಡೆದರೆ, ನಾಯಕ ಫರ್ವೇಜ್ ರಸೂಲ್ 3 ಹಾಗೂ ಮುಜ್ತಾಬ್ ಯೂಸುಫ್ ಒಂದು ವಿಕೆಟ್ ಪಡೆದರು. ಜಮ್ಮು&ಕಾಶ್ಮೀರ ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಬೇಕಿದ್ದರೆ ಇನ್ನುಳಿದ 65 ಓವರ್ಗಳಲ್ಲಿ 330 ರನ್ ಬಾರಿಸಬೇಕಿದೆ.
ಕರ್ನಾಟಕ ತಂಡವು ಈಗಾಗಲೇ ಮೊದಲ ಇನಿಂಗ್ಸ್ನಲ್ಲಿ 14 ರನ್ಗಳ ಮುನ್ನಡೆ ಪಡೆದಿದೆ. ಒಂದು ವೇಳೆ ಪಂದ್ಯ ಡ್ರಾ ಆದರೂ ಕರ್ನಾಟಕ ತಂಡವೇ ಸೆಮಿಫೈನಲ್ ಪ್ರವೇಶಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.