ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 126 ರನ್ ಟಾರ್ಗೆಟ್ ನೀಡಿದ ಮುಂಬೈ

Suvarna News   | Asianet News
Published : Jan 05, 2020, 11:09 AM IST
ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 126 ರನ್ ಟಾರ್ಗೆಟ್ ನೀಡಿದ ಮುಂಬೈ

ಸಾರಾಂಶ

ಪ್ರತೀಕ್ ಜೈನ್ ಮಾರಕ ದಾಳಿಗೆ ತತ್ತರಿಸಿರುವ ಮುಂಬೈ ತಂಡ ಕೇವಲ 149 ರನ್‌ಗಳಿಗೆ ಆಟ ಮುಗಿಸಿದೆ. ಪ್ರತೀಕ್ 4 ವಿಕೆಟ್ ಕಬಳಿಸಿ ಮುಂಬೈ ಪತನಕ್ಕೆ ನಾಂದಿ ಹಾಡಿದರು. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಮುಂಬೈ[ಜ.05]: ಪ್ರತೀಕ್ ಜೈನ್ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಎರಡನೇ ಇನಿಂಗ್ಸ್’ನಲ್ಲಿ 9 ವಿಕೆಟ್ ಕಳೆದುಕೊಂಡು 149 ರನ್ ಬಾರಿಸಿ ಆಟ ಮುಗಿಸಿದೆ. ಇದೀಗ ಕರ್ನಾಟಕಕ್ಕೆ ಗೆಲ್ಲಲು 126 ರನ್’ಗಳ ಗುರಿ ನೀಡಿದೆ.

ಎರಡನೇ ದಿನದಂತ್ಯಕ್ಕೆ ಮುಂಬೈ ತಂಡ 5 ವಿಕೆಟ್ ಕಳೆದುಕೊಂಡು 109 ರನ್ ಬಾರಿಸಿತ್ತು. ಮೂರನೇ ದಿನದಾಟದ ಆರಂಭದಲ್ಲೇ ತನ್ನ ಖಾತೆಗೆ 40 ರನ್ ಜೋಡಿಸಲಷ್ಟೇ ಶಕ್ತವಾಯಿತು. ಇನ್ನು ಭುಜದ ಗಾಯಕ್ಕೆ ತುತ್ತಾಗಿರುವ ಪೃಥ್ವಿ ಶಾ ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಲಿಲ್ಲ. ಹೀಗಾಗಿ ಕರ್ನಾಟಕಕ್ಕೆ ಸಾಧಾರಣ ಗುರಿ ಸಿಕ್ಕಿದೆ. ಪ್ರತೀಕ್ ಜೈನ್ ಕೇವಲ 11 ರನ್ ನೀಡಿ ಮುಂಬೈನ 4 ವಿಕೆಟ್ ಕಬಳಿಸಿ ಮಿಂಚಿದರು.

ರಣಜಿ ಟ್ರೋಫಿ: ಮುಂಬೈ ಮೇಲೆ ಬಿಗಿ ಹಿಡಿತ ಸಾಧಿಸಿದ ಕರ್ನಾಟಕ

ಮುಂಬೈ ಪರ ಎರಡನೇ ದಿನದಾಟದಂತ್ಯಕ್ಕೆ 53 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಸರ್ಫರಾಜ್ ಖಾನ್, ಮೂರನೇ ದಿನವೂ ಕರ್ನಾಟಕ ಬೌಲರ್’ಗಳೆದುರು ಪ್ರತಿರೋಧ ತೋರಿದರು. ಸರ್ಫರಾಜ್ 140 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 71 ರನ್ ಬಾರಿಸಿದರು. 

ಕರ್ನಾಟಕ ಪರ ಪ್ರತೀಕ್ ಜೈನ್ 4 ವಿಕೆಟ್ ಕಬಳಿಸಿದರೆ, ಅಭಿಮನ್ಯು ಮಿಥುನ್ 3 ಹಾಗೂ ವಿ. ಕೌಶಿಕ್ 2 ವಿಕೆಟ್ ಕಬಳಿಸಿ ಮಿಂಚಿದರು. 

ಸಂಕ್ಷಿಪ್ತ ಸ್ಕೋರ್:

ಮುಂಬೈ: 194& 149/9
ಕರ್ನಾಟಕ: 218/10

[* ಮುಂಬೈ ಬ್ಯಾಟಿಂಗ್ ಮುಕ್ತಾಯದ ವೇಳೆಗೆ]
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ