Ranji Trophy: ತಮಿಳುನಾಡು ಮಣಿಸಿ 48ನೇ ಬಾರಿ ಫೈನಲ್‌ಗೆ ಮುಂಬೈ..!

Published : Mar 05, 2024, 09:09 AM IST
Ranji Trophy: ತಮಿಳುನಾಡು ಮಣಿಸಿ 48ನೇ ಬಾರಿ ಫೈನಲ್‌ಗೆ ಮುಂಬೈ..!

ಸಾರಾಂಶ

ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ಹಂತದಲ್ಲಿ ಮುನ್ನಡೆಯ ನಿರೀಕ್ಷೆಯಲ್ಲಿದ್ದ ತಮಿಳುನಾಡು ಆ ಬಳಿಕ ಮುಂಬೈನ ಚಾಂಪಿಯನ್‌ ಆಟದ ಮುಂದೆ ಮಂಡಿಯೂರಿತು. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲೂ ಫಸ್ಟ್‌ ಕ್ಲಾಸ್‌ ಪ್ರದರ್ಶನ ನೀಡಿದ ಮುಂಬೈ ಅರ್ಹವಾಗಿಯೇ ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು.

ಮುಂಬೈ(ಮಾ.05): ರಣಜಿ ಟ್ರೋಫಿ ದೇಸಿ ಪ್ರಥಮ ದರ್ಜೆ ಕ್ರಿಕೆಟ್‌ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಮುಂಬೈ ಟೂರ್ನಿಯ ಇತಿಹಾಸದಲ್ಲೇ 48ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯುದ್ದಕ್ಕೂ ಅಭೂತಪೂರ್ವ ಪ್ರದರ್ಶನ ತೋರಿರುವ 41 ಬಾರಿ ಚಾಂಪಿಯನ್‌ ಮುಂಬೈ ತಂಡ ಸೆಮಿಫೈನಲ್‌ನಲ್ಲಿ ತಮಿಳುನಾಡು ವಿರುದ್ಧ ಇನ್ನಿಂಗ್ಸ್‌ ಹಾಗೂ 70 ರನ್‌ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ಹಂತದಲ್ಲಿ ಮುನ್ನಡೆಯ ನಿರೀಕ್ಷೆಯಲ್ಲಿದ್ದ ತಮಿಳುನಾಡು ಆ ಬಳಿಕ ಮುಂಬೈನ ಚಾಂಪಿಯನ್‌ ಆಟದ ಮುಂದೆ ಮಂಡಿಯೂರಿತು. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲೂ ಫಸ್ಟ್‌ ಕ್ಲಾಸ್‌ ಪ್ರದರ್ಶನ ನೀಡಿದ ಮುಂಬೈ ಅರ್ಹವಾಗಿಯೇ ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು.

ತಮಿಳುನಾಡಿನ 146 ರನ್‌ಗೆ ಉತ್ತರವಾಗಿ 2ನೇ ದಿನದಂತ್ಯಕ್ಕೆ 9 ವಿಕೆಟ್‌ಗೆ 353 ರನ್ ಕಲೆಹಾಕಿದ್ದ ಮುಂಬೈ ಸೋಮವಾರ ಇನ್ನೂ 25 ರನ್‌ ಸೇರಿಸಿ, 378ಕ್ಕೆ ಸರ್ವಪತನ ಕಂಡಿತು. ತುಷಾರ್‌ ದೇಶಪಾಂಡೆ(26) ಔಟಾಗುವುದರೊಂದಿಗೆ ಮುಂಬೈ ಇನ್ನಿಂಗ್ಸ್‌ಗೆ ತೆರೆಬಿತ್ತು. ತನುಶ್‌ ಕೋಟ್ಯಾನ್‌ 89 ರನ್‌ ಸಿಡಿಸಿ ಔಟಾಗದೆ ಉಳಿದರು.

'ಹಣ ಗಳಿಸಿ, ಆದ್ರೆ ಈ ರೀತಿಯಲ್ಲಿ ಅಲ್ಲ..': ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮೇಲೆ ಮಾಜಿ ವೇಗಿ ಸಿಡಿಮಿಡಿ

ಬ್ಯಾಟಿಂಗ್‌ ವೈಫಲ್ಯ: ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಆಟವಾಡಿದ್ದ ತಮಿಳುನಾಡಿಗೆ 2ನೇ ಇನ್ನಿಂಗ್ಸ್‌ನಲ್ಲೂ ಸುಧಾರಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. 10 ರನ್‌ ಗಳಿಸುವಷ್ಟರಲ್ಲೇ ಸಾಯಿ ಸುದರ್ಶನ್‌(05), ಜಗದೀಶನ್‌(00), ವಾಷಿಂಗ್ಟನ್‌ ಸುಂದರ್‌(04) ವಿಕೆಟ್‌ ಕಳೆದುಕೊಂಡ ತಂಡ ಬಳಿಕ ಚೇತರಿಸಿಕೊಳ್ಳಲಿಲ್ಲ. ಈ ನಡುವೆ ಬಾಬಾ ಇಂದ್ರಜಿತ್‌ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಇಂದ್ರಜಿತ್‌ 70 ರನ್‌ಗೆ ನಿರ್ಗಮಿಸಿದರೆ, ರಂಜನ್‌ ಪಾಲ್‌ 25, ವಿಜಯ್‌ ಶಂಕರ್‌ 24, ನಾಯಕ ಸಾಯಿ ಕಿಶೋರ್‌ 21 ರನ್‌ ಗಳಿಸಲಷ್ಟೇ ಶಕ್ತರಾದರು. ಮತ್ತೆ ತನ್ನ ಸ್ಪಿನ್‌ ಕೈಚಳಕ ಪ್ರದರ್ಶಿಸಿದ ಶಮ್ಸ್‌ ಮುಲಾನಿ 4 ವಿಕೆಟ್‌ ಕಿತ್ತರೆ, ಶಾರ್ದೂಲ್‌ ಠಾಕೂರ್‌, ಮೋಹಿತ್‌ ಅವಸ್ತಿ, ತನುಶ್ ತಲಾ 2 ವಿಕೆಟ್‌ ಕಬಳಿಸಿದರು.

IPL 2024 Breaking: RCB ಎದುರಿನ ಉದ್ಘಾಟನಾ ಪಂದ್ಯಕ್ಕೂ ಮುನ್ನ CSK ಪಡೆಗೆ ಬಿಗ್‌ ಶಾಕ್..!

ಸ್ಕೋರ್‌: ತಮಿಳುನಾಡು 146/10 ಮತ್ತು 162/10(ಇಂದ್ರಜಿತ್‌ 70, ಮುಲಾನಿ 4-53, ಶಾರ್ದೂಲ್‌ 2-16), ಮುಂಬೈ 378/10.

ಗೆಲುವಿಗಾಗಿ ವಿದರ್ಭ ಹೋರಾಟ

ನಾಗ್ಪುರ: ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಹೊರತಾಗಿಯೂ ಮಧ್ಯಪ್ರದೇಶ ವಿರುದ್ಧದ ಸೆಮಿಫೈನಲ್‌ನ 2ನೇ ಇನ್ನಿಂಗ್ಸಲ್ಲಿ ವಿದರ್ಭ ದೊಡ್ಡ ಮೊತ್ತ ಕಲೆಹಾಕಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 82 ರನ್‌ ಹಿನ್ನಡೆ ಅನುಭವಿಸಿದ್ದ ವಿದರ್ಭ 2ನೇ ಇನ್ನಿಂಗ್ಸಲ್ಲಿ 3ನೇ ದಿನದಂತ್ಯಕ್ಕೆ 6 ವಿಕೆಟ್‌ ಕಳೆದುಕೊಂಡು 346 ರನ್‌ ಗಳಿಸಿದ್ದು, ಒಟ್ಟಾರೆ 261 ರನ್‌ ಮುನ್ನಡೆಯಲ್ಲಿದೆ. ಅಥರ್ವ ತೈಡೆ(02), ಅಕ್ಷಯ್‌(01) ತಂಡದ ಮೊತ್ತ 17 ರನ್‌ ಆಗುವಷ್ಟರಲ್ಲೇ ಪೆವಿಲಿಯನ್‌ ಸೇರಿದರು. ಆದರೆ ಧ್ರುವ್‌ ಶೋರೆ 40, ಅಮನ್‌ ಮೊಖಾಡೆ 59, ಕರುಣ್‌ ನಾಯರ್ 38 ರನ್‌ ಸಿಡಿಸಿ ತಂಡವನ್ನು ಮೇಲೆತ್ತಿದರು. ಆದರೂ 161ಕ್ಕೆ 5 ವಿಕೆಟ್‌ ಕಳೆದುಕೊಂಡ ಬಳಿಕ ಯಶ್‌ ರಾಥೋಡ್‌(ಔಟಾಗದೆ 97) ಹಾಗೂ ಅಕ್ಷಯ್‌ ವಾಡ್ಕರ್‌(77) 168 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದಾರೆ.

ಫೈನಲ್‌ಗೆ ವಾಂಖೇಡೆ ಆತಿಥ್ಯ: ಟೂರ್ನಿಯ ಫೈನಲ್‌ ಪಂದ್ಯ ಮಾ.10ಕ್ಕೆ ಆರಂಭಗೊಳ್ಳಲಿದ್ದು, ಮುಂಬೈನ ಪ್ರಸಿದ್ಧ ವಾಂಖೇಡೆ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?