
ಲಂಡನ್(ಫೆ.15): ಐಪಿಎಲ್ ಟೂರ್ನಿಗೆ 8 ಫ್ರಾಂಚೈಸಿಗಳು ತಯಾರಿ ಆರಂಭಿಸಿದೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ಲೋಗೋ ಅನಾವರಣ ಮಾಡಿದೆ. ನೂತನ ಲೋಗೋ ಕುರಿತು RCB ತಂಡದ ಮಾಜಿ ಬಾಸ್ ವಿಜಯ್ ಮಲ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: IPL ಟೂರ್ನಿಗೂ ಮುನ್ನ ಹೊಸ ಲೋಗೋ ಅನಾವರಣ ಮಾಡಿದ RCB
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಲೋಗೋ ಅನಾವರಣ ಬೆನ್ನಲ್ಲೇ ತಂಡಕ್ಕೆ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಲೋಗೋ ತಂಡದ ಅದೃಷ್ಠ ಬದಲಿಸಲಿ. ನೂತನ ಲೋಗೋ ಪ್ರಶಸ್ತಿ ಗೆಲುವಿಗೆ ಸಹಕಾರಿಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: RCB ಹೊಸ ಲೋಗೋ ಟ್ರೋಲ್ ಮಾಡಿದ ಜಸ್ಪ್ರೀತ್ ಬುಮ್ರಾ
ಇನ್ನು ನಾಯಕ ವಿರಾಟ್ ಕೊಹ್ಲಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲು ಮಲ್ಯ ಸಲಹೆ ನೀಡಿದ್ದಾರೆ. ಅಂಡರ್ 19 ತಂಡದಲ್ಲಿದ್ದ ವಿರಾಟ್ ಕೊಹ್ಲಿ ಆರ್ಸಿಬಿ ತಂಡ ಸೇರಿಕೊಂಡರು . ಇದೀಗ ವಿರಾಟ್ ಕೊಹ್ಲಿ ಭಾರತ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಕೊಹ್ಲಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಬೇಕಿದೆ. ಎಲ್ಲಾ ಆರ್ಸಿಬಿ ಅಭಿಮಾನಿಗಳು ಪ್ರಶಸ್ತಿ ಕೊರಗನ್ನು ನೀಗಿಸಲು ಬಯಸುತ್ತಿದ್ದಾರೆ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೈ ಮುತ್ತೂಟ್ ಫಿನ್ಕಾರ್ಪ್ ಜೊತೆ ಒಪ್ಪಂದ ಮಾಡಿಕೊಂಡಿದೆ. 3 ವರ್ಷಗಳ ಕಾಲ ಮುತ್ತೂಟ್ ಜೊತೆ ಟೈಟಲ್ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.