
ಅಹಮ್ಮದಾಬಾದ್ (ಮೇ.31) ಐಪಿಎಲ್ ಫೈನಲ್ ಪಂದ್ಯದ ಕುತೂಹಲ ತೀವ್ರಗೊಳ್ಳುತ್ತಿದೆ. ಅಹಮ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಹೋರಾಟ ನಡೆಸಲಿದೆ. ಗುಜರಾತ್ ತಂಡಕ್ಕೆ ತವರಿನ ಕ್ರೀಡಾಂಗಣ. ಆದರೆ ಇದೇ ಕ್ರೀಡಾಂಗಣದಲ್ಲಿ 2025ರಲ್ಲಿ ಆರ್ಸಿಬಿ ಟ್ರೋಫಿ ಗೆದ್ದು ಸಂಭ್ರಮಿಸಿದೆ. ಹಲವು ಮಾಜಿ ಕ್ರಿಕೆಟಿಗರು ಇಂದಿನ ಫೈನಲ್ ಪಂದ್ಯದ ಭವಿಷ್ಯ ನುಡಿದಿದ್ದಾರೆ. ಇದೀಗ ಆರ್ಸಿಬಿ ಮಾಜಿ ಆಟಗಾರ, ಸೌತ್ ಆಫ್ರಿಕನ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ 2026 ಫೈನಲ್ ಪಂದ್ಯದಲ್ಲಿನ ಮೂರು ಭವಿಷ್ಯವನ್ನು ಎಬಿ ಡಿವಿಲಿಯರ್ಸ್ ನುಡಿದಿದ್ದಾರೆ.
ಮೂರು ಭವಿಷ್ಯವನ್ನು ಎಬಿ ಡಿವಿಲಿಯರ್ಸ್ ನೀಡಿದ್ದಾರೆ. ಆರ್ಸಿಬಿ ಗೆಲುವು ಹಾಗೂ ನಾಯಕ ರಜತ್ ಪಾಟೀದಾರ್ಗೆ ಮ್ಯಾನ್ ಆಫ್ ದಿ ಮ್ಯಾಚ್ ಎಂದು ಎಬಿ ಭವಿಷ್ಯ ನುಡಿದಿದ್ದಾರೆ. ಗುಜರಾತ್ ಟೈಟಾನ್ಸ್ ಪರ ರಶೀದ್ ಖಾನ್ ಉತ್ತಮ ಪ್ರದರ್ಶನದ ಭವಿಷ್ಯ ಹೇಳಿದ್ದಾರೆ.
ಹಲವು ದಿಗ್ಗಜ ಕ್ರಿಕೆಟಿಗರು ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಆರ್ಸಿಬಿ ಹಾಗು ಗುಜರಾತ್ ಟೈಟಾನ್ಸ್ಗೆ ಹಲವು ಸಲಹೆ ನೀಡಿದ್ದಾರೆ. ಇದೇ ವೇಳೆ ಆರ್ಸಿಬಿ ಆರಂಭಿಕ ವೆಂಕಟೇಶ್ ಅಯ್ಯರ್ ಇಂದು ಸಂಪೂರ್ಣ ವಿಫಲರಾಗುತ್ತಾರೆ ಎಂದಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ಒತ್ತಡ ಬೀಳಲಿದೆ. ದೇವದತ್ ಪಡಿಕ್ಕಲ್ ಆಟ ಇವತ್ತು ಮಹತ್ವದ್ದಾಗಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಎರಡೂ ತಂಡಕ್ಕೆ ಉತ್ತಮ ಅವಕಾಶವಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
ಇದೇ ವೇಳೆ ಇರ್ಫಾನ್ ಪಠಾಣ್, ಆರ್ಸಿಬಿ ತಂಡಕ್ಕೆ ಕೆಲ ಸಲಹೆ ನೀಡಿದ್ದಾರೆ. ಗುಜರಾತ್ ಟೈಟಾನ್ಸ್ ಬೌಲರ್ಸ್ ಹೆಚ್ಚು ಬೌನ್ಸರ್ ಎಸೆಯಲಿದ್ದಾರೆ. ಹೀಗಾಗಿ ಆರ್ಸಿಬಿ ಅನಗತ್ಯ ರಿಸ್ಕ್ ತೆಗೆದುಕೊಳ್ಳದೇ ಆಡಬೇಕು ಎಂದಿದ್ದಾರೆ. ಇತ್ತ ಗುಜರಾತ್ ಆರಂಭಿಕರಿಗೆ ಶಾರ್ಟ್ ಬಾಲ್ ಹಾಕಬಾರದು ಎಂದು ಸಲಹೆ ನೀಡಿದ್ದಾರೆ. ಸಾಯಿ ಸುದರ್ಶನ್ಗೆ ವಿಕೆಟ್ ಟು ವಿಕೆಟ್ ಬೌಲಿಂಗ್ ಮಾಡಬೇಕು. ಅಹಮ್ಮದಾಬಾದ್ ಕಂಡೀಷನ್ಗೆ ಅನುಗುಣವಾಗಿ ಬಾಲ್ ಸ್ವಿಂಗ್ ಮಾಡಿದರೆ ಗುಜರಾತ್ ಬ್ಯಾಟರ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಬಹುದು ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.