
ಬೆಂಗಳೂರು (ಏ.15): ತವರಿನ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಲ್ರೌಂಡ್ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಅಧಿಕಾರಯುತ ಜಯ ಸಾಧಿಸಿದೆ. ಮೊದಲು ಬೌಲರ್ಗಳ ಸಂಘಟಿತ ದಾಳಿಯಿಂದ ಲಕ್ನೋ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರೆ, ನಂತರ ಬ್ಯಾಟರ್ಗಳ ಸ್ಫೋಟಕ ಆಟದಿಂದ 5 ವಿಕೆಟ್ಗೆ ಸುಲಭವಾಗಿ ಗುರಿ ತಲುಪಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ಸಿಬಿ ನಿರ್ಧಾರವನ್ನು ಬೌಲರ್ಗಳು ಸರಿ ಎಂದು ಸಾಬೀತುಪಡಿಸಿದರು. ರಸಿಕ್ ದರ್ (4 ವಿಕೆಟ್) ಅವರ ಮಾರಕ ದಾಳಿ ಮತ್ತು ಅನುಭವಿ ಭುವನೇಶ್ವರ್ ಕುಮಾರ್ , ಜೋಸ್ ಹ್ಯಾಸಲ್ವುಡ್ ಅವರ ಚಾಣಾಕ್ಷ ಬೌಲಿಂಗ್ಗೆ ಲಕ್ನೋ ಬ್ಯಾಟರ್ಗಳು ತತ್ತರಿಸಿದರು. ಅಂತಿಮವಾಗಿ ಲಕ್ನೋ 20 ಓವರ್ಗಳಲ್ಲಿ ಕೇವಲ 146 ರನ್ಗಳ ಸಾಧಾರಣ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.
147 ರನ್ಗಳ ಸುಲಭ ಗುರಿ ಬೆನ್ನಟ್ಟಿದ ಆರ್ಸಿಬಿ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮೊರೆಹೋಯಿತು. ರನ್ ಮಷೀನ್ ವಿರಾಟ್ ಕೊಹ್ಲಿ ಕೇವಲ 34 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 49 ರನ್ ಸಿಡಿಸಿ ಜಯದ ಹಾದಿಯನ್ನು ಸುಗಮಗೊಳಿಸಿದರು. ಕೇವಲ ಒಂದು ರನ್ನಿಂದ ಅರ್ಧಶತಕ ವಂಚಿತರಾದರೂ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಕೇವಲ 13 ಎಸೆತಗಳಲ್ಲಿ 27 ರನ್ (3 ಸಿಕ್ಸರ್) ಚಚ್ಚಿದರೆ, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೇವಲ 9 ಎಸೆತಗಳಲ್ಲಿ 23 ರನ್ ಸಿಡಿಸಿ ಪಂದ್ಯವನ್ನು ಸಂಪೂರ್ಣವಾಗಿ ಬೆಂಗಳೂರಿನ ಕಡೆಗೆ ತಿರುಗಿಸಿದರು. ಅಂತಿಮವಾಗಿ ಆರ್ಸಿಬಿ 15.1 ಓವರ್ನಲ್ಲಿ 5 ವಿಕೆಟ್ಗೆ 149 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ಕ್ರೀಸ್ನಲ್ಲಿ ಉಳಿದು ತಂಡವನ್ನು ಜಯದ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಆರ್ಸಿಬಿ ಈ ಸೀಸನ್ನಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲೂ ಸುಧಾರಣೆ ಕಂಡಿರುವುದು ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.