
ನವದೆಹಲಿ[ಡಿ.24]: ಅನುಭವಿ ಕೋಚ್ ಬಳಿ ತರಬೇತಿ ಸಿಕ್ಕಲ್ಲಿ ರಿಷಭ್ ಪಂತ್ ಉತ್ತಮ ವಿಕೆಟ್ ಕೀಪರ್ ಆಗಿ ಬೆಳೆಯುವುದರಲ್ಲಿ ಯಾವುದೇ ಸಂದೇಹ ಇಲ್ಲ. ಅವರಲ್ಲಿ ವಿಕೆಟ್ ಕೀಪರ್ಗೆ ಬೇಕಾದ ಎಲ್ಲಾ ಪ್ರತಿಭೆ ಇದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿದ್ದಾರೆ.
L ಶಿವರಾಮಕೃಷ್ಣ BCCI ನೂತನ ಆಯ್ಕೆಗಾರ?
ಭಾರತದ ಅತ್ಯಂತ ಯಶಸ್ವಿ ವಿಕೆಟ್ ಕೀಪರ್’ಗಳಲ್ಲಿ ಒಬ್ಬರು ಎನಿಸಿಕೊಂಡಿದ್ದ ಕಿರಣ್ ಮೋರೆ ಗರಡಿಯಲ್ಲಿ ಪಳಗಿರುವ ಪಂತ್ ಈಗಾಗಲೇ ಸ್ವಲ್ಪ ಅನುಭವ ಹೊಂದಿದ್ದಾರೆ. ಅವರಿಗೆ ಇನ್ನಷ್ಟು ಉತ್ತಮ ತರಬೇತಿ ಅಗತ್ಯವಿದೆ ಎಂದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಆಟವನ್ನೇ ಪ್ರದರ್ಶಿಸಿದ ಪಂತ್ ವಿಕೆಟ್ ಕೀಪಿಂಗ್ನಲ್ಲಿ ಕೊಂಚ ಎಡವಿದ್ದರು. ಇದಕ್ಕೆ ಅಭಿಮಾನಿ ವಲಯದಿಂದ ಟೀಕೆಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಎಂ.ಎಸ್.ಕೆ. ಪ್ರಸಾದ್ ಅವರು ಪಂತ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಅವರ ವಿಕೆಟ್ ಕೀಪಿಂಗ್ ಸುಧಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅನುಭವಿ ಕೋಚ್ಗಳಿಂದಲೇ ರಿಷಭ್ ಪಂತ್ ಅವರಿಗೆ ತರಬೇತಿ ಕೊಡಿಸಲಾಗುವುದು ಎಂದಿದ್ದಾರೆ.
ಧೋನಿ ನಿವೃತ್ತಿ ಸುದ್ದಿ; BCCI ಆಯ್ಕೆ ಸಮಿತಿ ಸ್ಪಷ್ಟನೆ!
21(22) ವರ್ಷದ ರಿಷಭ್ ಪಂತ್ ಅನಗತ್ಯವಾದ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ನಾನು 21 ವರ್ಷದವನಿದ್ದಾಗ ನನಗೆ ಯಾವ ಒತ್ತಡವೂ ಇರಲಿಲ್ಲ. ಆಗ ಸುಮ್ಮನೆ ಕೂರುತ್ತಿದ್ದೆ, ಇಲ್ಲವೇ ಸರ್ ವಿವಿನ್ ರಿಚರ್ಡ್ಸ್ ಬೂಟ್ ಕ್ಲೀನ್ ಸ್ವಚ್ಚ ಮಾಡುತ್ತಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಜ್ಜಾಗುತ್ತಿದ್ದೆ ಎಂದು ವಿಂಡೀಸ್ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಹೇಳಿದ್ದಾರೆ.
ಈ ಹಿಂದೆ ತಿರುವನಂತಪುರಂನಲ್ಲಿ ಪಂತ್ ವಿಕೆಟ್ ಕೀಪಿಂಗ್ ಮಾಡುವ ಸಂದರ್ಭದಲ್ಲಿ ಕ್ಯಾಚ್ ಬಿಟ್ಟಾಗ, ಪ್ರೇಕ್ಷಕರು ಧೋನಿ, ಧೋನಿ ಎಂದು ಕೂಗಿದ್ದರು. ಈ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.