
"
ರಾಜ್ಕೋಟ್(ನ.07): ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. 2ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಭರ್ಜರಿ 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯನ್ನು 1-1 ಅಂತರದಲ್ಲಿ ಸಮಬಲ ಮಾಡಿ ಜೀವಂತವಾಗಿರಿಸಿದೆ.
ಇದನ್ನೂ ಓದಿ: 23 ಎಸೆತದಲ್ಲಿ ಅರ್ಧಶತಕ; 100ನೇ ಪಂದ್ಯದಲ್ಲಿ ರೋಹಿತ್ ದಾಖಲೆ!
ಗೆಲುವಿಗೆ 154 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ, ದಿಟ್ಟ ತಿರುಗೇಟು ನೀಡಲು ಕಣಕ್ಕಿಳಿಯಿತು. 100ನೇ ಟಿ20 ಪಂದ್ಯವಾಡಿದ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದರು. ಕೇವಲ 23 ಎಸೆತದಲ್ಲಿ ರೋಹಿತ್ ಅರ್ಧಶತಕ ಪೂರೈಸಿದರು.
ರೋಹಿತ್ ಶರ್ಮಾಗೆ ಮತ್ತೋರ್ವ ಆರಂಭಿಕ ಶಿಖರ್ ಧವನ್ ಉತ್ತಮ ಸಾಥ್ ನೀಡಿದರು. ಧವನ್ 27 ಎಸೆತದಲ್ಲಿ 31 ರನ್ ಸಿಡಿಸಿ ಔಟಾದರು. ರೋಹಿತ್ ಶರ್ಮಾ 43 ಎಸೆತದಲ್ಲಿ 6 ಸಿಕ್ಸರ್ ಹಾಗೂ 6 ಬೌಂಡರಿ ನೆರವಿನಿಂದ 85 ರನ್ ಸಿಡಿಸಿ ಔಟಾದರು. ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಜೊತೆಯಾಟದಿಂದ ಭಾರತ ಸುಲಭವಾಗಿ ಗುರಿ ತಲುಪಿತು. ಭಾರತ 15.4 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಶ್ರೇಯಸ್ ಅಯ್ಯರ್ ಅಜೇಯ 24 ರನ್ ಹಾಗೂ ರಾಹುಲ್ ಅಜೇಯ 8 ರನ್ ಸಿಡಿಸಿದರು.
3 ಪಂದ್ಯಗಳ ಟಿ20 ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಇದೀಗ ನವೆಂಬರ್ 10 ರಂದು ನಾಗ್ಪುರದಲ್ಲಿ ನಡೆಯಲಿರುವ 3ನೇ ಹಾಗೂ ಅಂತಿಮ ಟಿ20 ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.