ಆಗಸ್ಟ್‌ಗೆ ಮುಗಿಯಲಿದೆ ನಿಷೇಧ; ಕ್ರಿಕೆಟ್‌ಗೆ ಮರಳಲು ಶ್ರೀಶಾಂತ್ ಅಭ್ಯಾಸ ಶುರು!

Suvarna News   | Asianet News
Published : Jun 21, 2020, 08:18 PM ISTUpdated : Jun 21, 2020, 08:19 PM IST
ಆಗಸ್ಟ್‌ಗೆ ಮುಗಿಯಲಿದೆ ನಿಷೇಧ; ಕ್ರಿಕೆಟ್‌ಗೆ ಮರಳಲು ಶ್ರೀಶಾಂತ್ ಅಭ್ಯಾಸ ಶುರು!

ಸಾರಾಂಶ

ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಖ್ಯಾತ ಎನ್‌ಬಿಎ ಪಟು ಮೈಕಲ್ ಜೋರ್ಡನ್  ಮಾಜಿ ತರಬೇತಿದಾರರ ಬಳಿ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಆಗಸ್ಟ್ ತಿಂಗಳಿಗೆ ಶ್ರೀಶಾಂತ್ ನಿಷೇಧ ಶಿಕ್ಷೆ ಅಂತ್ಯವಾಗಲಿದೆ. ಕೇರಳ ರಣಜಿ ತಂಡಕ್ಕೆ ಆಡಲು ಶ್ರೀಶಾಂತ್ ಸಜ್ಜಾಗಿದ್ದಾರೆ.

ಕೇರಳ(ಜೂ.21):  ಸ್ಫಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ಅಜೀವ ನಿಷೇದಕ್ಕೊಳಗಾದ್ದ ಟೀಂ ಇಂಡಿಯಾ ವೇಗಿ ಶ್ರೀಶಾಂತ್‌ ಶಿಕ್ಷೆಯನ್ನ ಬಳಿಕ 7 ವರ್ಷಕ್ಕೆ ಕಡಿತಗೊಳಿಸಲಾಗಿತ್ತು. ಇದೀಗ ಇದೇ ಆಗಸ್ಟ್ ತಿಂಗಳಿಗೆ ಶ್ರೀಶಾಂತ್ ಶಿಕ್ಷೆ ಅಂತ್ಯವಾಗಲಿದೆ. ಕಳೆದ 6 ತಿಂಗಳಿಂದ ಅಭ್ಯಾಸ ಆರಂಭಿಸಿದ್ದ ಶ್ರೀಶಾಂತ್ ಇದೀಗ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ಇದಕ್ಕಾಗೆ ಖ್ಯಾತ ಎನ್‌ಬಿಎ ಪಟು ಮೈಕಲ್ ಜೋರ್ಡನ್ ಮಾಜಿ ತರಬೇತು ದಾರ ಟಿಮ್ ಗ್ರೋವರ್ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಶ್ರೀಶಾಂತ್‍‌ಗೆ ಬಿಗ್ ರಿಲೀಫ್; ನಿಷೇಧ ಕಡಿತಗೊಳಿಸಿದ BCCI!

ಶ್ರೀಶಾಂತ್ ವಾರಕ್ಕೆ ಮೂರು ಬಾರಿ ಬೆಳಗ್ಗೆ 5 ಗಂಟೆ ಯಿಂದ 8.30ರ ವರೆಗೆ ಟಿಮ್ ಗ್ರೋವರ್ ಆನ್‌ಲೈನ್ ಸೆಶೆನ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. NBA ಆಟಗಾರರ ಮೆಂಟಲ್ ಹಾಗೂ ಫಿಸಿಕಲ್ ಟ್ರೈನರ್ ಆಗಿರುವ ಟಿಮ್ ಗ್ರೋವರ್, ಟ್ರೈನಿಂಗ್ ಸೆಶನ್ ಉಪಯುಕ್ತವಾಗಿದೆ. ಬೆಳಗಿನ ಆನ್‌ಲೈನ್ ಸೆಶನ್ ಬಳಿಕ ಮಧ್ಯಾಹ್ನ 1.30 ರಿಂದ 6 ಗಂಟೆ ವರೆಗೆ ಇಂಡೋರ್ ಅಭ್ಯಾಸ ನಡೆಸುತ್ತಿದ್ದೇನೆ ಎಂದು ಶ್ರೀಶಾಂತ್ ಹೇಳಿದ್ದಾರೆ.

ಪೇಸ್ 42ರಲ್ಲಿ ಗ್ರ್ಯಾಂಡ್ ಸ್ಲಾಂ ಗೆಲ್ಲೋದಾದ್ರೆ ನಾನ್ಯಾಕೆ ಕ್ರಿಕೆಟ್ ಆಡಬಾರದು: ಶ್ರೀಶಾಂತ್!

ಎರ್ನಾಕುಲಂನಲ್ಲಿರುವ ಇಂಡೋರ್ ನೆಟ್ ಅಭ್ಯಾಸದಲ್ಲಿ ಕೇರಳದ ಅಂಡರ್ 23 ಆಟಗಾರರು, ಕೇರಳ ರಣಜಿ ತಂಡದ ಸಚಿನ್ ಬೇಬಿ ಸೇರಿದಂತೆ ಹಲವು ಕ್ರಿಕೆಟಿಗರ ಜೊತೆ ಅಭ್ಯಾಸ ಮಾಡುತ್ತಿದ್ದೇನೆ. ಮೊದಲು ಕೇರಳ ರಣಜಿ ತಂಡಕ್ಕೆ ಆಡಬೇಕಿದೆ. ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾದಲ್ಲಿ 2021ರ ಐಪಿಎಲ್ ಹರಾಜಿಗೆ ಹೆಸರು ನೀಡಲಿದ್ದೇನೆ ಎಂದು ಶ್ರೀಶಾಂತ್ ಹೇಳಿದ್ದಾರೆ.

ವಾರದ 6 ದಿನ ಬೌಲಿಂಗ್ ಅಭ್ಯಾಸ ಮಾಡುತ್ತಿದ್ದೇನೆ. ಪ್ರತಿ ದಿನ 3 ಗಂಟೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿದ್ದೇನೆ. ಆರಂಭಿಕ 2 ಗಂಟೆ ರೆಡ್ ಬಾಲ್ ಹಾಗೂ ಅಂತಿಮ 1 ಗಂಟೆ ವೈಟ್ ಬಾಲ್‌ನಲ್ಲಿ ಅಭ್ಯಾಸ ಮಾಡುತ್ತಿದ್ದೇನೆ. ಪ್ರತಿ ದಿನ ಸರಾಸರಿ 12 ಓವರ್ ಬೌಲಿಂಗ್ ಮಾಡುತ್ತಿದ್ದೇನೆ. ಈ ಮೂಲಕ ನನ್ನ ಸಾಮರ್ಥ್ಯ ಹೆಚ್ಚಿಸುತ್ತಿದ್ದೇನೆ ಎಂದು ಶ್ರೀಶಾಂತ್ ಹೇಳಿದ್ದಾರೆ. 

2013ರ ಐಪಿಎಲ್ ಟೂರ್ನಿಯಲ್ಲಿ ಸ್ಫಾಟ್ ಫಿಕ್ಸಿಂಗ್ ನಡೆಸಿದ್ದಾರೆ ಅನ್ನೋ ಆರೋಪದ ಮೇಲೆ ಶ್ರೀಶಾಂತ್‌ಗೆ ಬಿಸಿಸಿಐ ಅಜೀವ ನಿಷೇಧ ಶಿಕ್ಷೆ ನೀಡಿತ್ತು. ಆದರೆ ಕೋರ್ಟ್ ಶ್ರೀಶಾಂತ್ ಮೇಲಿನ ಆರೋಪ ತಳ್ಳಿ ಹಾಕಿತ್ತು. ಆದರೆ ಬಿಸಿಸಿಐ ನಿಷೇಧದ ಶಿಕ್ಷೆ ತೆರವು ಮಾಡಿರಲಿಲ್ಲ. ಶ್ರೀಶಾಂತ್ ಇದರ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದರು. ಬಳಿಕ ಬಿಸಿಸಿಐ ಶಿಕ್ಷೆಯನ್ನು 7 ವರ್ಷಕ್ಕೆ ಕಡಿತಗೊಳಿಸಿತ್ತು. ಇದೀಗ 2020ರ ಆಗಸ್ಟ್ ತಿಂಗಳಿಗೆ ಶ್ರೀಶಾಂತ್ ಶಿಕ್ಷೆ ಅಂತ್ಯವಾಗಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ