ನಿವೃತ್ತಿಯಿಂದ ಹೊರಬಂದ ಸಚಿನ್ ತೆಂಡುಲ್ಕರ್; ಮೊದಲ ಎಸೆತದಲ್ಲೇ ಬೌಂಡರಿ!

Suvarna News   | Asianet News
Published : Feb 09, 2020, 07:37 PM IST
ನಿವೃತ್ತಿಯಿಂದ ಹೊರಬಂದ ಸಚಿನ್ ತೆಂಡುಲ್ಕರ್; ಮೊದಲ ಎಸೆತದಲ್ಲೇ ಬೌಂಡರಿ!

ಸಾರಾಂಶ

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಬ್ಯಾಟಿಂಗ್ ನೋಡಬೇಕೆಂಬ ಹಂಬಲ ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲಿ ಇದೆ. ಆದರೆ ಸಚಿನ್ ಕ್ರಿಕೆಟ್‌ಗೆ ವಿದಾಯ ಹೇಳಿ ಐದೂವರೆ ವರ್ಷಗಳೇ ಉರುಳಿವೆ. ಸಚಿನ್ ನೆನಪಲ್ಲಿ ಕ್ರಿಕೆಟ್ ಪಂದ್ಯ ನೋಡಲು ಹೋದ ಅಭಿಮಾನಿಗಳಿಗೆ ಅಚ್ಚರಿ ಕಾದಿತ್ತು. ಕಾರಣ ಸಚಿನ್ ಬ್ಯಾಟ್ ಹಿಡಿದು ಕ್ರೀಸ್‌ಗೆ ಆಗಮಿಸಿದ್ದರು. ಇಷ್ಟೇ ಅಲ್ಲ ಮೊದಲ ಎಸೆತವನ್ನು ಬೌಂಡರಿಗಟ್ಟಿ ಮತ್ತೆ ಖದರ್ ತೋರಿದ್ದರು.

ಮೆಲ್ಬರ್ನ್(ಫೆ.09): ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಕ್ರಿಕೆಟ್‌ಗೆ ವಿದಾಯ ಹೇಳಿ ಸರಿ ಸುಮಾರು 6 ವರ್ಷಗಳೇ ಉರುಳಿ ಹೋಗಿವೆ. ಸಚಿನ್ ನಿವೃತ್ತಿ ಹೇಳಿದರೂ ಟೀಂ ಇಂಡಿಯಾದ ಪ್ರತಿ ಪಂದ್ಯದಲ್ಲಿ ಸಚಿನ್ ಸಚಿನ್ ಕೂಗು ಇದ್ದೇ ಇರುತ್ತೆ. ಈಗಲೂ ಸಚಿನ್ ಆಟವನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಾರೆ. ಹೀಗಿರುವಾಗ ಸಚಿನ್ ತೆಂಡುಲ್ಕರ್ ನಿವೃತ್ತಿಯಿಂದ ಹೊರಬಂದು ಮತ್ತೆ ಬ್ಯಾಟಿಂಗ್ ಮಾಡಿದರೆ ಹೇಗೆ? ಇದು ಕನಸಲ್ಲ, ನನಸು. ಸಚಿನ್ ಮತ್ತೆ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ. 

 

ಇದನ್ನೂ ಓದಿ: ಬುಶ್ ಫೈರ್ ಪಂದ್ಯ: ಗಿಲ್ಲಿ ಎದುರು ಪಾಂಟಿಂಗ್ ಪಡೆಗೆ ರೋಚಕ ಜಯ

ಆಸ್ಟ್ರೇಲಿಯಾದ ಕಾಡ್ಗಿಚ್ಚು ಪರಿಹಾರಕ್ಕೆ ಆಯೋಜಿಸಿದ ಪಂದ್ಯದ ಬ್ರೇಕ್ ವೇಳೆ ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್ ಮಾಡೋ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಎಲ್ಲಿಸ್ ಪೆರ್ರಿ ಎಸೆತ ಮೊದಲ ಎಸೆತವನ್ನು ಬೌಂಡರಿ ಸಿಡಿಸಿದರು. ಈ ಮೂಲಕ ಹಳೇ ಗತ ವೈಭವ ನೆನಪಿಸಿದರು. ಇದೀಗ ಸಚಿನ್ ಬೌಂಡರಿ ವಿಡೀಯೋ ವೈರಲ್ ಆಗಿದೆ.

ಇದನ್ನೂ ಓದಿ: ಟಿ20: ಆಸ್ಪ್ರೇಲಿಯಾ ವಿರುದ್ಧ ಗೆದ್ದ ಭಾರತ.

ಆಸ್ಟ್ರೇಲಿಯಾ ಕಾಡ್ಗಿಚ್ಚು ಪರಿಹಾರಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗರ ಪಂದ್ಯ ಆಯೋಜಿಸಿತ್ತು. ರಿಕಿ ಪಾಂಟಿಂಗ್ ನೇತೃತ್ವದ ತಂಡಕ್ಕೆ ಸಚಿನ್ ಕೋಚ್ ಆಗಿದ್ದರು. ಈ ಪಂದ್ಯಕ್ಕೂ ಮುನ್ನ ಆಸೀಸ್ ಮಹಿಳಾ ಆಟಗಾರ್ತಿ ಎಲ್ಲಿಸ್ ಪೆರ್ರಿ ಸಚಿನ್ ಬಳಿ ಮನವಿ ಮಾಡಿದ್ದರು. ತಾವು ನಿವೃತ್ತಿಯಿಂದ ಹೊರಬಂದು ಒಂದು ಓವರ್ ಬ್ಯಾಟಿಂಗ್ ಮಾಡಿದರೆ ಅದಕ್ಕಿಂತ ಹೆಚ್ಚು ಖುಷಿ ಮತ್ತೊಂದಿಲ್ಲ. ಪಾಂಟಿಂಗ್ ತಂಡಕ್ಕೆ ಕೋಚ್ ಆಗೋ ಮೂಲಕ ಬುಶ್ ಫೈರ್ ಪಂದ್ಯಕ್ಕೆ ಬೆಂಬಲ ಸೂಚಿಸಿರುವುದಕ್ಕೆ ಧನ್ಯವಾದ ಎಂದು ಪೆರ್ರಿಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿನ್ ತೆಂಡೂಲ್ಕರ್, ಉತ್ತಮ ಮನವಿ ಪೆರ್ರಿ. ನಾನೂ ಕೂಡ ಒಂದು ಓವರ್ ಬ್ಯಾಟಿಂಗ್ ಮಾಡಲು ಇಚ್ಚಿಸುತ್ತೇನೆ.  ಭುಜದ ನೋವಿರುವ ಕಾರಣ ವೈದ್ಯರು ಬ್ಯಾಟಿಂಗ್ ಮಾಡದಂತೆ ಸೂಚಿಸಿದ್ದರೆ. ಆದರೆ ವೈದ್ಯರ ಸಲಹೆ ದಿಕ್ಕರಿಸಿ ನಾನು ಆಡಲು ಇಚ್ಚಿಸುತ್ತೇನೆ ಎಂದುಸಚಿನ್ ಟ್ವೀಟ್ ಮಾಡಿದ್ದರು.

 

ಬುಶ್‌ಫೈರ್ ಪಂದ್ಯದಲ್ಲಿ ರಿಕಿ ಪಾಂಟಿಂಗ್ ತಂಡ ನಿಗದಿತ 10 ಓವರ್‌ಗೆ 5 ವಿಕೆಟ್ ಕಳೆದುಕೊಂಡು 104ರನ್ ಸಿಡಿಸಿತ್ತು. ಈ ಗುರಿ ಬೆನ್ನಟ್ಟಿದ ಗಿಲ್ ಕ್ರಿಸ್ಟ್ ತಂಡ ಕೇವಲ 1 ರನ್‌ಗಳಿಂದ ವಿರೋಚಿತ ಸೋಲು ಕಂಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ
Ind vs SA: ಶುಭ್‌ಮನ್ ಗಿಲ್ ಫುಲ್ ಫಿಟ್; ಈ ಡೇಟ್‌ಗೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಫಿಕ್ಸ್!