ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ, ಪವಾರ್ ಬಳಿಕ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ!

Published : Feb 07, 2021, 07:21 PM IST
ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ, ಪವಾರ್ ಬಳಿಕ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ!

ಸಾರಾಂಶ

ಭಾರತ ರತ್ನ ಸಚಿನ್ ತೆಂಡುಲ್ಕರ್ ಮೇಲೆ ಕಾಂಗ್ರೆಸ್ ತಿರುಗಿ ಬಿದ್ದಿದೆ. ದೇಶ ಮೊದಲು ಎಂದಿದ್ದೇ ಸಚಿನ್ ತಪ್ಪು. ಇಷ್ಟಕ್ಕೆ ಸುಮ್ಮನಾಗದ ನಾಯಕರು ಸಚಿನ್ ಮೇಲೆ ಮುಗಿ ಬೀಳುತ್ತಲೇ ಇದ್ದರು. ಎನ್‌ಸಿಪಿ ನಾಯಕ ಶರದ್ ಪವಾರ್ ಸಚಿನ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ಸಚಿನ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ನವದೆಹಲಿ(ಫೆ.07): ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಇದೀಗ ಕಾಂಗ್ರೆಸ್ ಹಾಗೂ ಕೆಲವರಿಗೆ ಶತ್ರುವಾಗಿ ಪರಿಣಮಿಸಿದ್ದಾರೆ. ರೈತ ಪ್ರತಿಭಟನೆ ಹೆಸರಿನಲ್ಲಿ ವಿದೇಶಿ ಸೆಲೆಬ್ರೆಟಿಗಳು ಭಾರತದ ವಿರುದ್ಧ ಷಡ್ಯಂತ್ರ ಪ್ರಯತ್ನಕ್ಕೆ ಸಚಿನ್ ತೆಂಡುಲ್ಕರ್ ತಿರುಗೇಟು ನೀಡಿದ್ದರು. ಭಾರತದ ಆತಂಕರಿಕ ವಿಚಾರಕ್ಕೆ ಕೈಹಾಕಬೇಡಿ ಎಂದು ಟ್ವೀಟ್ ಮಾಡಿದ್ದರು. ಇದು ಕಾಂಗ್ರೆಸ್, ಎನ್‌ಸಿ ಸೇರಿದಂತೆ ಹಲವರಿಗೆ ನುಂಗಲಾರದ ತುತ್ತಾಗಿ ಪರಿಣಿಸಿದೆ.

ಸಚಿನ್ ತೆಂಡುಲ್ಕರ್‌ಗೆ ಎಚ್ಚರಿಕೆ ನೀಡಿದ ಶರದ್ ಪವಾರ್‌ಗೆ ಭಾರತೀಯರಿಂದ ಮಂಗಳಾರತಿ!

ಸಚಿನ್ ತೆಂಡುಲ್ಕರ್ ಇತರ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದರಬೇಕು ಎಂದು ಸಚಿನ್ ಟ್ವೀಟ್ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪಂಜಾಬ್ ಕಾಂಗ್ರೆಸ್ ಸಂಸದ ಜಸ್ಬೀರ್ ಗಿಲ್ ಸಚಿನ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ ಎಂದಿದ್ದಾರೆ.

ದೇಶ ಮೊದಲು ಎಂದ ಸಚಿನ್ ತೆಂಡುಲ್ಕರ್‌ಗೆ ಭಾರಿ ಬೆಂಬಲ!

ಇಷ್ಟಕ್ಕೆ ಸುಮ್ಮನಾಗದ ಜಸ್ಬೀರ್, ಒಂದಕ್ಕೊಂದು ಸಂಬಂಧವಿಲ್ಲದ ಹೇಳಿಕೆ ನೀಡಿದ್ದಾರೆ. ಸಚಿನ್ ತೆಂಡುಲ್ಕರ್ ಕೇಂದ್ರ ಸರ್ಕಾರದ ಪರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಸಚಿನ್‌ಗೆ ಕೇಂದ್ರದಿಂದ ಕೆಲ ಸಹಾಯದ ಅಗತ್ಯವಿದೆ. ಹಾಗಾಗಿ ಈ ರೀತಿ ಟ್ವೀಟ್ ಮಾಡುತ್ತಿದ್ದಾರೆ. ಸಚಿನ್ ಪುತ್ರ ಐಪಿಎಲ್‌‍ಗೆ ಆಯ್ಕೆಯಾಗಬೇಕಿದೆ. ಹೀಗಾಗಿ ತನ್ನ ಕೈಲಾದ ಸಹಾಯವನ್ನು ಕೇಂದ್ರಕ್ಕೆ ಮಾಡುತ್ತಿದ್ದಾರೆ ಎಂದು ಜಸ್ಬೀರ್ ಹೇಳಿದ್ದಾರೆ.

ಈ ರೀತಿ ತನ್ನ ವೈಯುಕ್ತಿಕ ಅವಶ್ಯಕತೆಗೆ ಕೇಂದ್ರದ ಪರವಾಗಿ ಟ್ವೀಟ್ ಮಾಡುವ ಸಚಿನ್ ತೆಂಡುಲ್ಕರ್ ಭಾರತ ರತ್ನಕ್ಕೆ ಅರ್ಹರೇ ಎಂದು ನೀವೇ ತೀರ್ಮಾನಿಸಿ. ನನ್ನ ಪ್ರಕಾರ ಅಲ್ಲ ಎಂದು ಜಸ್ಬೀರ್ ಹೇಳಿದ್ದಾರೆ.

ಆದರೆ ಸಚಿನ್ ಟ್ವೀಟ್ ಬೆನ್ನಲ್ಲೇ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಸಚಿನ್ ಜೊತೆ ನಾವಿದ್ದೇವೆ. ಸಚಿನ್ ವಿರುದ್ಧ ತಿರುಗಿಬಿದ್ದ ನಾಯಕರಿಗೆ ಭಾರತೀಯರು ಮಂಗಳಾರತಿ ಮಾಡುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Virat Kohli: ವಿರಾಟ್‌ ಕೊಹ್ಲಿಗೆ ಬೌಲಿಂಗ್‌ ಮಾಡಿದ ಉತ್ತರ ಕನ್ನಡದ ಸಿದ್ದಾಪುರ ಹುಡುಗ; ವಿಶೇಷ ವಿಷಯ ಬಿಚ್ಚಿಟ್ರು!
IPL 2026 Final: ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌! ಮೇ 31ರ ಫೈನಲ್‌ ಮ್ಯಾಚ್ ಎಲ್ಲಿ?