ದಿಲ್ಲಿಯ ಪಾಕಿಸ್ತಾನ ಹಿಂದೂ ನಿರಾಶ್ರಿತ ಕ್ಯಾಂಪ್‌ಗೆ ಧವನ್ ಭೇಟಿ!

Published : Jul 04, 2020, 09:26 PM IST
ದಿಲ್ಲಿಯ ಪಾಕಿಸ್ತಾನ ಹಿಂದೂ ನಿರಾಶ್ರಿತ ಕ್ಯಾಂಪ್‌ಗೆ ಧವನ್ ಭೇಟಿ!

ಸಾರಾಂಶ

ಕೊರೋನಾ ವೈರಸ್‌ನಿಂದ ಹಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಕೂಡ ಕಾಡುತ್ತಿದೆ. ಇದರ ನಡುವೆ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ದೆಹಲಿಯಲ್ಲಿನ ಹಿಂದೂ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿ ನೆರವು ನೀಡಿದ್ದಾರೆ.

ದೆಹಲಿ(ಜೂ.04): ಕೊರೋನಾ ವೈರಸ್ ಸಂದರ್ಭದಲ್ಲಿ ಟೀಂ ಇಂಡಿಯಾ ಹಲವು ಕ್ರಿಕೆಟಿಗರು ನಿರ್ಗತಿಗರಿಗೆ, ಬಡವರಿಗೆ, ಅಗತ್ಯವಿದ್ದವರಿಗೆ ನೆರವಾಗುತ್ತಿದ್ದಾರೆ. ದಿನಸಿ ವಸ್ತು, ಮಾಸ್ಕ್, ಸೋಂಕಿತರ ಚಿಕಿತ್ಸೆ ನೆರವು, ಪ್ರಧಾನಿ ಪರಿಹಾರ ನಿಧಿಗೆ ನೆರವು ಸೇರಿದಂತೆ ಹಲವು ರೀತಿಯ ಸಹಾಯ ಮಾಡುತ್ತಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಹಲವರಿಗೆ ನೆರವಾಗಿದ್ದಾರೆ. ಇದೀಗ ದೆಹಲಯಲ್ಲಿನ ಹಿಂದೂ ನಿರಾಶ್ರಿತರ ಕ್ಯಾಂಪ್‌ಗೆ ಭೇಟಿ ನೀಡಿದ್ದಾರೆ.

4 ಸಾವಿರ ನಿರ್ಗತಿಕರಿಗೆ ಆರ್ಥಿಕ ನೆರವು ನೀಡಿದ ಸಚಿನ್ ತೆಂಡುಲ್ಕರ್!

ಪಾಕಿಸ್ತಾನದಲ್ಲಿ ದೌರ್ಜನ್ಯ, ಕಿರುಕುಳದಿಂದ ಭಾರತಕ್ಕೆ ಆಗಮಿಸಿದ ಹಿಂದೂ ನಿರಾಶ್ರಿತರು ಕೊರೋನಾ ಸಂದರ್ಭದಲ್ಲಿ ಹಲವು ಸಂಕಷ್ಟ ಅನುಭವಿಸುತ್ತಿದ್ದಾರೆ. ದೆಹಲಿ ಆದರ್ಶನಗರದಲ್ಲಿನ ಪಾಕಿಸ್ತಾನದ ಹಿಂದೂ ನಿರಾಶ್ರಿತ ಕ್ಯಾಂಪ್‌ಗೆ ತೆರಳಿದ ಧವನ್, ನಿರಾಶ್ರಿತರಿಗೆ ಶೌಚಾಲಯದ ವ್ಯವಸ್ಥೆ ಮಾಡಿದ್ದಾರೆ.

 

ಮಾಡ್ಯುಲರ್ ಟಾಯ್ಲೆಟ್ ಹಾಗೂ ನಿರಾಶ್ರಿತ ಕೇಂದ್ರದಲ್ಲಿರುವ ಮಕ್ಕಳಿಗೆ ಕ್ರಿಕೆಟ್ ಕಿಟ್ ವಿತರಿಸಿದ್ದಾರೆ. ಇಷ್ಟೇ ಅಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಮುಂಜಾಗ್ರತ ಕ್ರಮಗಳೊಂದಿಗೆ ಧವನ್ ನಿರಾಶ್ರಿತ ಕೇಂದ್ರಕ್ಕೆ ಧವನ್ ಭೇಟಿ ನೀಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!