
ಕೊಲಂಬೊ(ಜೂ.29): ಶ್ರೀಲಂಕಾ ವಿರುದ್ದ ಸೀಮಿತ ಓವರ್ಗಳ ಸರಣಿಯನ್ನಾಡಲು ಕೊಲಂಬೊಗೆ ಬಂದಿಳಿದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಕಠಿಣ ಕ್ವಾರಂಟೈನ್ಗೆ ಒಳಗಾಗಿದೆ. ಲಂಕಾ ಎದುರಿನ ಸೀಮಿತ ಓವರ್ಗಳ ಸರಣಿ ಜುಲೈ 13ರಿಂದ ಆರಂಭವಾಗಲಿದೆ.
ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಶ್ರೀಲಂಕಾದ ಕೊಲೊಂಬೊಗೆ ಬಂದಿಳಿದಿದ್ದೇವೆ ಎಂದು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಭಾರತದ ಮೊದಲ ಆಯ್ಕೆಯ ಆಟಗಾರರೆಲ್ಲರೂ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಆರಂಭವಾಗಲಿರು ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಸರಣಿಯನ್ನಾಡಲಿದ್ದಾರೆ. ಹೀಗಾಗಿ ಶಿಖರ್ ಧವನ್ ನೇತೃತ್ವದಲ್ಲಿ ಹಿರಿ-ಕಿರಿಯ ಆಟಗಾರರನ್ನೊಳಗೊಂಡ ಭಾರತ ತಂಡ ಲಂಕಾ ಎದುರು ಸೀಮಿತ ಓವರ್ಗಳ ಸರಣಿಯನ್ನಾಡಲು ಲಂಕಾಗೆ ಬಂದಿಳಿದಿದೆ.
ಶ್ರೀಲಂಕಾಗಿಂದು ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ
ಲಂಕಾ ಸರಣಿಗೆ ಬಿಸಿಸಿಐ ಯುವ ಕ್ರಿಕೆಟಿಗರಾದ ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ನಿತೀಶ್ ರಾಣಾ, ಕೆ. ಗೌತಮ್ ಹಾಗೂ ಚೇತನ್ ಸಕಾರಿಯಾಗೆ ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇದೇ ವೇಳೆ ಇಬ್ಬರು ವಿಕೆಟ್ ಕೀಪರ್ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶನ್ ಕಿಶನ್ಗೂ ತಂಡದಲ್ಲಿ ಮಣೆ ಹಾಕಲಾಗಿದೆ.
ಶ್ರೀಲಂಕಾ ಕ್ರಿಕೆಟ್ ವೆಬ್ಸೈಟ್ ಮಾಹಿತಿಯ ಪ್ರಕಾರ ಟೀಂ ಇಂಡಿಯಾ ಕ್ರಿಕೆಟಿಗರು ಜೂನ್ 29ರಿಂದ ಜುಲೈ 01ರವರೆಗೆ ಹೋಟೆಲ್ ರೂಂ ಕ್ವಾರಂಟೈನ್ನಲ್ಲಿರಲಿದ್ದಾರೆ. ಆ ಬಳಿಕ ಜುಲೈ 02ರಿಂದ 04ರವರೆಗೆ ಹಂತ ಹಂತವಾಗಿ ಅಭ್ಯಾಸ ನಡೆಸಲು ಅವಕಾಶ ನೀಡಲಾಗುವುದು. ಇದಾದ ಬಳಿಕ ಜುಲೈ 05ರಿಂದ ಟೀಂ ಇಂಡಿಯಾ ಆಟಗಾರರು ದ್ವೀಪರಾಷ್ಟ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಅಭ್ಯಾಸ ನಡೆಸಬಹುದಾಗಿದೆ. ಸೀಮಿತ ಓವರ್ಗಳ ಸರಣಿಗೂ ಮುನ್ನ ಭಾರತ ಆಟಗಾರರು ತಮ್ಮಲ್ಲೇ 2 ತಂಡಗಳನ್ನಾಗಿ ವಿಭಾಗಿಸಿಕೊಂಡು ಅಭ್ಯಾಸ ಪಂದ್ಯಗಳನ್ನಾಡಲಿದ್ದಾರೆ.
ಶಿಖರ್ ಧವನ್ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭಾರತ ಕ್ರಿಕೆಟ್ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಧವನ್ಗೆ ಉಪನಾಯಕನಾಗಿ ವೇಗಿ ಭುವನೇಶ್ವರ್ ಕುಮಾರ್ ಸಾಥ್ ನೀಡಲಿದ್ದಾರೆ. ಇನ್ನು ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.