ಲಂಕಾ ಎದುರು ಟಿ20 ಸರಣಿ ಜಯಿಸುತ್ತಾ ಶಿಖರ್ ಧವನ್ ಪಡೆ..?

Suvarna News   | Asianet News
Published : Jul 29, 2021, 05:57 PM IST
ಲಂಕಾ ಎದುರು ಟಿ20 ಸರಣಿ ಜಯಿಸುತ್ತಾ ಶಿಖರ್ ಧವನ್ ಪಡೆ..?

ಸಾರಾಂಶ

* ಇಂಡೋ-ಲಂಕಾ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭ * 3 ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಜಯಿಸಿರುವ ಉಭಯ ತಂಡಗಳು * ಟೀಂ ಇಂಡಿಯಾದಲ್ಲಿಂದು ಒಂದು ಬದಲಾವಣೆ ಸಾಧ್ಯತೆ 

ಕೊಲಂಬೊ(ಜು.29): ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು(ಜು.28) ಸಂಜೆ 8 ಗಂಟೆಗೆ ಇಲ್ಲಿನ ಆರ್‌. ಪ್ರೇಮದಾಸ ಸ್ಟೇಡಿಯಂನಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ. 

ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿದ್ದು ಟೀಂ ಇಂಡಿಯಾ, ಎರಡನೇ ಪಂದ್ಯಕ್ಕೆ ಸಜ್ಜಾಗುವ ಮುನ್ನ ಕೋವಿಡ್ ಶಾಕ್ ನೀಡಿದ್ದರಿಂದ 8 ಆಟಗಾರರು ಐಸೋಲೇಷನ್‌ಗೆ ಒಳಗಾಗಿದ್ದರು. ಹೀಗಿದ್ದೂ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟಿಗರು ಕೆಚ್ಚೆದೆಯ ಪ್ರದರ್ಶನ ತೋರುವ ಮೂಲಕ ರೋಚಕ ಸೋಲು ಅನುಭವಿಸಿದ್ದರು. ಹೀಗಾಗಿ ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇಂದು ನಡೆಯಲಿರುವ ನಿರ್ಣಾಯಕ ಪಂದ್ಯ ಯಾರ ಪಾಲಾಗಲಿದೆ ಎನ್ನುವ ಕುತೂಹಲ ಜೋರಾಗಿದೆ.

2ನೇ ಟಿ20: ಭಾರತಕ್ಕೆ ವಿರೋಚಿತ ಸೋಲು: ಸರಣಿ ಸಮಬಲ ಸಾಧಿಸಿದ ಲಂಕಾ

ಟಿ20 ವಿಶ್ವಕಪ್‌ ಟೂರ್ನಿ ಮುನ್ನ ಭಾರತ ಕ್ರಿಕೆಟ್ ತಂಡವು ಆಡಲಿರುವ ಕಟ್ಟ ಕಡೆಯ ಟಿ20 ಪಂದ್ಯ ಇದಾಗಿರುವುದರಿಂದ ಉತ್ತಮ ಪ್ರದರ್ಶನ ತೋರಲು ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಎದುರು ನೋಡುತ್ತಿದೆ. ಇನ್ನು ಎರಡನೇ ಟಿ20 ಪಂದ್ಯದಲ್ಲಿ ನವದೀಪ್ ಸೈನಿ ಗಾಯಗೊಂಡಿದ್ದು, ಸೈನಿ ಬದಲಿಗೆ ಇಂದಿನ ಪಂದ್ಯಕ್ಕೆ ಸಂದೀಪ್‌ ವಾರಿಯರ್‌ ತಂಡ ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಕಳೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಇನ್ನು ಪಡಿಕ್ಕಲ್ ಹಾಗೂ ಋತುರಾಜ್‌ ಗಾಯಕ್ವಾಡ್ ಎರಡನೇ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಹೀಗಾಗಿ ನಿರ್ಣಾಯಕ ಪಂದ್ಯ ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯತೆಯಿದೆ.

ಪಂದ್ಯ ಆರಂಭ: ಸಂಜೆ: 08 ಗಂಟೆಗೆ
ಸ್ಥಳ: ಕೊಲಂಬೊ
ನೇರ ಪ್ರಸಾರ: ಸೋನಿ ಟೆನ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೆ ವೇಳಾಪಟ್ಟಿ ಫಿಕ್ಸ್; ಫ್ರಾಂಚೈಸಿಗಳಿಗೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌! ಬೆಂಗಳೂರಲ್ಲಿ ಉದ್ಘಾಟನಾ ಮ್ಯಾಚ್?
ಮೆಸ್ಸಿಯ ದೆಹಲಿ ಡೈರಿ: ಮುಂಬರುವ ಟಿ20 ವಿಶ್ವಕಪ್‌ಗೆ ಆಹ್ವಾನಿಸಿದ ಐಸಿಸಿ ಅಧ್ಯಕ್ಷ ಜಯ್ ಶಾ!