
ಕೊಲಂಬೊ(ಜು.03): ಏಕದಿನ ಹಾಗೂ ಟಿ20 ಸರಣಿಯನ್ನು ಆಡಲು ಶ್ರೀಲಂಕಾಕ್ಕೆ ತೆರಳಲಿರುವ ಭಾರತ ತಂಡ ಶುಕ್ರವಾರದಿಂದ ಅಭ್ಯಾಸ ಆರಂಭಿಸಿತು. ಶಿಖರ್ ಧವನ್ ನೇತೃತ್ವದ ತಂಡಕ್ಕೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕ ರಾಹುಲ್ ದ್ರಾವಿಡ್ ಕೋಚ್ ಆಗಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡಕ್ಕಿದು ಕೊನೆಯ ಅಂತಾರಾಷ್ಟ್ರೀಯ ಸೀಮಿತ ಓವರ್ ಸರಣಿ ಇದಾಗಿದ್ದು, ಐಪಿಎಲ್ ತಾರೆಗಳು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಈ ಸರಣಿಯನ್ನು ಬಳಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಲಂಕಾ ವಿರುದ್ಧ ಭಾರತ 3 ಏಕದಿನ, 3 ಟಿ20 ಪಂದ್ಯಗಳನ್ನು ಆಡಲಿದೆ.
ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದರೆ, ಮತ್ತೊಂದೆಡೆ ಧವನ್ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಲಂಕಾಗೆ ಬಂದಿಳಿದು ಹೋಟೆಲ್ ಕ್ವಾರಂಟೈನ್ ಪೂರೈಸಿದೆ. ಜು.13ರಿಂದ ಏಕದಿನ ಸರಣಿ ಅರಂಭಗೊಳ್ಳಲಿದೆ. 3 ಪಂದ್ಯಗಳ ಏಕದಿನ ಸರಣಿಯ ಬಳಿಕ ಧವನ್ ಪಡೆ ಕೊನೆಯಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
ಲಂಕಾಗೆ ಬಂದಿಳಿದ ಟೀಂ ಇಂಡಿಯಾಗೆ ಕಠಿಣ ಕ್ವಾರಂಟೈನ್
ಶ್ರೀಲಂಕಾ ಪ್ರವಾಸಕ್ಕೆ ಮೂವರು ಕರ್ನಾಟಕದ ಆಟಗಾರರು ಆಯ್ಕೆಯಾಗಿದ್ದು, ಯುವ ಪ್ರತಿಭಾನ್ವಿತ ಆಟಗಾರ ದೇವದತ್ ಪಡಿಕ್ಕಲ್ ಹಾಗೂ ಅನುಭವಿ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಕನಸು ಕಾಣುತ್ತಿದ್ದಾರೆ. ಇನ್ನು ಮನೀಶ್ ಪಾಂಡೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.