
ಮುಂಬೈ(ಏ.22): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 16ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿಗಿವೆ. ಟಾಸ್ ಗೆದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದರು.
ಬ್ಯಾಟಿಂಗ್ ಗೆ ಇಳಿದ ರಾಜಸ್ಥಾನಕ್ಕೆ ಆರ್ ಸಿಬಿ ಬೌಲರ್ ಗಳು ಆರಂಭಿಕ ಆಘಾತ ನೀಡಿದ್ದರು. ಆದರೆ ಶಿವಂ ದುಬೆ (46) ಮತ್ತು ಪರಾಗ್(25) ಒಳ್ಳೆಯ ಜತೆಯಾಟ ಕಟ್ಟಿಕೊಟ್ಟರು.
ದೊಡ್ಡ ಮೊತ್ತದ ದಂಡ ಕಟ್ಟಿದ ಕೆಕೆಆರ್ ನಾಯಕ
ಕೊನೆಯಲ್ಲಿ ಅಬ್ಬರಿಸಿದ ತೆವಾಟಿಯಾ ಮತ್ತು ಮೋರಿಸ್ ತಂಡದ ಮೊತ್ತವನ್ನು ಹೆಚ್ಚಿಸಿದರು. ನಲವತ್ತು ರನ್ ಗಳಿಸಿ ಹತ್ತೊಂಭತ್ತನೇ ಓವರ್ ಕೊನೆ ಎಸೆತದಲ್ಲಿ ತೆವಾಟಿಯಾ ಔಟ್ ಆದರು . ರಾಜಸ್ಥಾನ 178 ರನ್ ಟಾರ್ಗೆಟ್ ಸೆಟ್ ಮಾಡಿದೆ. ಸಂಜು ಸಾಮ್ಸನ್, ಬಟ್ಲರ್ ಸಂಪೂರ್ಣ ವಿಫಲರಾದರು.
ಒಂದು ಹಂತದಲ್ಲಿ ರಾಜಸ್ಥಾನ 43 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಇತ್ತು. ಈ ವೇಳೆ ದುಬೆ ಮತ್ತು ಪರಾಗ್ ಆಶ್ರಯವಾದರು. ಹರ್ಷಲ್ ಪಟೇಲ್ ವಿಕೆಟ್ ಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡರು.
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಮತ್ತೊಂದು ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಆಡಿದ 3 ಪಂದ್ಯಗಳ ಪೈಕಿ ಒಂದು ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.