
ಪುಣೆ: ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, ಇದೀಗ ಪುಣೆ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಮತ್ತೊಮ್ಮೆ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ. ಶುಭ್ಮನ್ ಗಿಲ್ ವಿಕೆಟ್ ಪತನದ ಬಳಿಕ ಕ್ರೀಸ್ಗಿಳಿದ ವಿರಾಟ್ ಕೊಹ್ಲಿ, 9 ಎಸೆತಗಳನ್ನು ಎದುರಿಸಿ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಹಾದಿ ಹಿಡಿದರು. ವಿರಾಟ್ ಕೊಹ್ಲಿ ಔಟ್ ಆದ ರೀತಿಯನ್ನು ಗಮನಿಸಿದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ, ರನ್ ಮಷೀನ್ಗೆ ಕಿವಿಮಾತು ಹೇಳಿದ್ದಾರೆ.
ಸಾಕಷ್ಟು ಸಮಯದಿಂದಲೂ ವಿರಾಟ್ ಕೊಹ್ಲಿ, ಸ್ಪಿನ್ ಬೌಲಿಂಗ್ ದಾಳಿ ಎದುರಿಸಲು ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಇದನ್ನು ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಚೆನ್ನಾಗಿಯೇ ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು. ಹೀಗಾಗಿ ವಿರಾಟ್ ಕೊಹ್ಲಿ ಕೇವಲ ನೆಟ್ ಪ್ರಾಕ್ಟೀಸ್ ಮಾಡಿದರಷ್ಟೇ ಸಾಲದು. ಬದಲಾಗಿ ದೇಶಿ ಕ್ರಿಕೆಟ್ ಆಡಲು ಇದು ಸಕಾಲ ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.
ಸ್ಯಾಂಟ್ನರ್ ದಾಳಿಗೆ ಟೀಂ ಇಂಡಿಯಾ ತಬ್ಬಿಬ್ಬು; ಕಿವೀಸ್ಗೆ ಮೊದಲ ಇನ್ನಿಂಗ್ಸ್ ಮುನ್ನಡೆ
"ಕೇವಲ ನೆಟ್ ಪ್ರಾಕ್ಟೀಸ್ ಮಾಡುವುದಕ್ಕಿಂತ, ದೇಶಿ ಕ್ರಿಕೆಟ್ನಲ್ಲಿ ಒಂದೆರಡು ಇನ್ನಿಂಗ್ಸ್ ಆಡಿದ್ದರೂ, ವಿರಾಟ್ ಕೊಹ್ಲಿಗೆ ತುಂಬಾನೇ ಪ್ರಯೋಜನವಾಗುತ್ತಿತ್ತು. ಮ್ಯಾನೇಜ್ಮೆಂಟ್ ಒಪ್ಪಿದ್ದರೇ, ಅವರು ಈ ಮೊದಲೇ ದೇಶಿ ಕ್ರಿಕೆಟ್ ಪಂದ್ಯಗಳನ್ನಾಡಿದರೆ, ಅವರಿಗೆ ಅನುಕೂಲವಾಗುತ್ತಿತ್ತು. ಸ್ಪಿನ್ನರ್ಗಳ ಎದುರು ವಿರಾಟ್ ಕೊಹ್ಲಿ ರನ್ ಗಳಿಸಲು ಪರದಾಡುತ್ತಿರುವುದಕ್ಕೆ ಇದೊಂದೇ ಕಾರಣ ಎಂದು ಹೇಳಲಾರೆ" ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.
"ಅವರು ಬ್ಯಾಟಿಂಗ್ ಮಾಡಲು ಕ್ರೀಸ್ಗಿಳಿದಾಗ, ಪಿಚ್ ಕೂಡಾ ಸ್ಪಿನ್ನರ್ಗಳಿಗೆ ಸಹಕಾರಿಯಾಗಿ ವರ್ತಿಸುತ್ತಿತ್ತು. ಆಧುನಿಕ ಕ್ರಿಕೆಟ್ನಲ್ಲಿ ಸ್ಪಿನ್ನರ್ಗಳ ತಂತ್ರಗಾರಿಕೆಯನ್ನು ಅರಿಯಲು ದಿಗ್ಗಜ ಬ್ಯಾಟರ್ಗಳಾದವರು ಸಿದ್ದರಿರಬೇಕಾಗುತ್ತದೆ" ಎಂದು ಕುಂಬ್ಳೆ ಹೇಳಿದ್ದಾರೆ.
ಹಾಲ್ ಆಫ್ ಫೇಮ್ ಗೌರವ ಪಡೆದ ಎಬಿಡಿ: ಮತ್ತೊಮ್ಮೆ ಕನ್ನಡಿಗರ ಹೃದಯಗೆದ್ದ ಮಿಸ್ಟರ್ 360!
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ಗಳ ವೈಫಲ್ಯದಿಂದಾಗಿ 8 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಬ್ಯಾಟರ್ಗಳು ಪರದಾಟ ನಡೆಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.