
ನವದೆಹಲಿ(ಎ.04): ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭುಜಕ್ಕೆ ಗಾಯಮಾಡಿಕೊಂಡ ಶ್ರೇಯಸ್ ಅಯ್ಯರ್ ಏಕದಿನ ಸರಣಿಯಿಂದ ಮಾತ್ರವಲ್ಲ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೂ ಹೊರಬಿದ್ದಿದ್ದರು. ನಾಯಕ ಸೇವೆ ಅಲಭ್ಯಗೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ತೀವ್ರ ಹಿನ್ನಡೆ ತಂದಿತ್ತು. ಇದೀಗ ಶ್ರೇಯಸ್ ಅಯ್ಯರ್ ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಗುಳಿದರೂ, ಐಪಿಎಲ್ ವೇತನ ಯಾವ ಕಡಿತವೂ ಇಲ್ಲದೆ ಸಿಗಲಿದೆ.
IPL 2021 ಟೂರ್ನಿ ಆರಂಭಕ್ಕೂ ಮುನ್ನವೇ ಡೆಲ್ಲಿಗೆ ಆಘಾತ; ನಾಯಕ ಸರಣಿಯಿಂದ ಔಟ್!
ಬಿಸಿಸಿಐ ವಿಮಾ ನಿಯಮದ ಪ್ರಕಾರ ಶ್ರೇಯಸ್ ಅಯ್ಯರ್ಗೆ ಸಂಪೂರ್ಣ ಐಪಿಎಲ್ ಸ್ಯಾಲರಿ ಸಿಗಲಿದೆ. ಕಾರಣ ಟೀಂ ಇಂಡಿಯಾ ಪ್ರತಿನಿಧಿಸುವ ವೇಳೆ, ಅಂತಾರಾಷ್ಟ್ರೀಯ ಪಂದ್ಯದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗ ಗಾಯಗೊಂಡು, ಐಪಿಎಲ್ ಟೂರ್ನಿಯಿಂದ ಹೊರಬಿದ್ದರೆ ಆತನಿಗೆ ನಿಗದಿತ ಐಪಿಎಲ್ ವೇತನವನ್ನು ಯಾವುದೇ ಕಡಿತ ಮಾಡದೆ ನೀಡಬೇಕಿದೆ.
2011ರಲ್ಲಿ ಬಿಸಿಸಿಐ ಜಾರಿಗೆ ತಂಡ ಆಟಗಾರರ ವಿಮೆ ಪಾಲಿಸಿ ಅಡಿಯಲ್ಲಿ ಈ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಬಿಸಿಸಿಐ ಕೇಂದ್ರ ಗುತ್ತಿಗೆ ಪಡೆದ ಆಟಗಾರ ರಾಷ್ಟ್ರೀಯ ಕರ್ತವ್ಯದಲ್ಲಿದ್ದ ವೇಳೆ ಗಾಯಗೊಂಡು, ಐಪಿಎಲ್ ಟೂರ್ನಿಯಿಂದ ಹೊರಗುಳಿದರೆ ಸಂಪೂರ್ಣ ಸ್ಯಾಲರಿ ಸಿಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ಗೆ ಥ್ಯಾಂಕ್ಯೂ ಎಂದ ನೂತನ ನಾಯಕ ರಿಷಭ್ ಪಂತ್
ಈ ನಿಯಮದ ಪ್ರಕಾರ ಶ್ರೇಯಸ್ ಅಯ್ಯರ್ ತಮ್ಮ 7 ಕೋಟಿ ರೂಪಾಯಿ ವೇತನವನ್ನು ಪಡೆಯಲಿದೆ. ಶ್ರೇಯಸ್ ಅಯ್ಯರ್ ಅನುಪಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಎಪ್ರಿಲ್ 9 ರಿಂದ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.