ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಶ್ರೇಯಸ್ ಅಯ್ಯರ್, ಸನಾತನಿಯೋ, ಅಲ್ವೋ ಚರ್ಚೆ!

Published : Dec 11, 2025, 11:42 AM IST
Shreyas Iyer

ಸಾರಾಂಶ

ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್, ಟೀಂ ಇಂಡಿಯಾಗೆ ಮರಳಲು ಮನೆಯಲ್ಲಿ ಹೋಮ ಹವನ ಮಾಡಿಸಿದ್ದಾರೆ. ಆದರೆ, ಚೇರ್ ಮೇಲೆ ಕುಳಿತು ಪೂಜೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ಕಮ್‌ಬ್ಯಾಕ್ ಯಾವಾಗ ಎಂಬ ಕುತೂಹಲ ಹೆಚ್ಚಿಸಿದೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ಗಾಯದ ಸಮಸ್ಯೆಯಿಂದಾಗಿ ಕಳೆದ ಕೆಲ ತಿಂಗಳಿನಿಂದ ಮೈದಾನದಿಂದ ಹೊರಗುಳಿದಿದ್ದಾರೆ. 30 ವರ್ಷದ ಶ್ರೇಯಸ್ ಅಯ್ಯರ್, ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಬಾರಿಸಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಮೈದಾನ ತೊರೆದ ಶ್ರೇಯಸ್ ಅಯ್ಯರ್ ಅವರಿಗೆ ಡ್ರೆಸ್ಸಿಂಗ್‌ ರೂಂನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ತುರ್ತು ಚಿಕಿತ್ಸೆಗಾಗಿ ಸಿಡ್ನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ನಿರ್ಲಕ್ಷ್ಯ ಮಾಡಿದ್ದರೂ ಗಾಯದ ತೀವ್ರತೆ ಮಾರಣಾಂತಿಕವಾಗಿತ್ತು ಎಂದೆಲ್ಲಾ ವರದಿಯಾಗಿತ್ತುಯ.

ಸದ್ಯ ಶ್ರೇಯಸ್ ಅಯ್ಯರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ತಮ್ಮ ಮನೆಯಲ್ಲಿ ಹೋಮ ಹವನ ಮಾಡಿಸುವ ಮೂಲಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. ತಮ್ಮ ತಾಯಿಯ ಜತೆಗೂಡಿ ಶ್ರೇಯಸ್ ಅಯ್ಯರ್, ಪುರೋಹಿತರ ಮಾರ್ಗದರ್ಶನದಲ್ಲಿ ಮನೆಯಲ್ಲಿ ಪೂಜಾ ಕಾರ್ಯ ನಡೆಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಅಯ್ಯರ್; ಶುರುವಾಯ್ತು ಹೊಸ ಚರ್ಚೆ!

ಗಾಯದ ಬಳಿಕ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಅವರ ಪೂಜೆಯ ಕುರಿತಂತೆ ನೆಟ್ಟಿಗರು ಪರ-ವಿರೋಧ ಚರ್ಚೆ ಆರಂಭಿಸಿದ್ದಾರೆ. ಹಲವರು ಶ್ರೇಯಸ್ ಅವರ ಈ ಪೂಜಾ ಪದ್ದತಿಯನ್ನು ಮೆಚ್ಚಿಕೊಂಡಿದ್ದು, ಆದಷ್ಟು ಬೇಗ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿ ಎಂದು ಶುಭಹಾರೈಸಿದ್ದಾರೆ. ಇನ್ನು ಕೆಲವರು ಚೇರ್ ಮೇಲೆ ಕೂತು ಪೂಜೆ ಮಾಡಿಸಿದ ಶ್ರೇಯಸ್ ಅಯ್ಯರ್ ನಿಜವಾದ ಸನಾತನಿಯಲ್ಲ. ಸನಾತನಿಯಾದವರು ನೆಲದ ಮೇಲೆ ಕೂತು ಪೂಜೆ ಮಾಡಿಸುತ್ತಾರೆ. ಶ್ರೇಯಸ್ ಅಯ್ಯರ್ ಅವರು ಮಾಡಿದ ಕ್ರಮ ಸರಿಯಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ ಆರಂಭಿಸಿದ್ದಾರೆ.

 

ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಯಾವಾಗ?

ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದರು. ಇನ್ನು ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಯಲ್ಲೂ ಶ್ರೇಯಸ್ ಅಯ್ಯರ್ ಸ್ಥಾನ ಪಡೆಯುವುದು ಅನುಮಾನ ಎನಿಸಿದೆ. ಹೀಗಾದಲ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯುವುದು ಕೂಡಾ ಅನುಮಾನ ಎನಿಸಿದೆ. ಇನ್ನು 19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಐಪಿಎಲ್‌ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರೇಯಸ್ ಅಯ್ಯರ್:

ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್‌ಗೇರಿಸಿದ್ದ ನಾಯಕ ಶ್ರೇಯಸ್ ಅಯ್ಯರ್, ಇದೇ ಡಿಸೆಂಬರ್ 16ರಂದು ಅಬುದಾಬಿಯಲ್ಲಿ ನಡೆಯಲಿರುವ 19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜಿನಲ್ಲಿ ಪಂಜಾಬ್ ಫ್ರಾಂಚೈಸಿಯ ಜತೆ ಹರಾಜಿನ ಟೇಬಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದು ಫ್ರಾಂಚೈಸಿ ಪರ ಆಕ್ಷನ್ ಟೇಬಲ್‌ನಲ್ಲಿ ಗರಿಷ್ಠ 8 ಮಂದಿ ಕಾಣಿಸಿಕೊಳ್ಳಲು ಅವಕಾಶವಿದೆ. ಈಗಾಗಲೇ ಶ್ರೇಯಸ್ ಅಯ್ಯರ್ ಹರಾಜಿನ ಟೇಬಲ್‌ನಲ್ಲಿ ಪಂಜಾಬ್ ಪರ ಇರಲಿದ್ದಾರೆ ಎಂದು ಫ್ರಾಂಚೈಸಿಯು ಈಗಾಗಲೇ ಖಚಿತಪಡಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?
ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!