ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌: 5ನೇ ದಿನದಾಟ ಪಂದ್ಯ ನಡೆಯುತ್ತಾ?

Suvarna News   | Asianet News
Published : Jun 22, 2021, 01:39 PM IST
ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌: 5ನೇ ದಿನದಾಟ ಪಂದ್ಯ ನಡೆಯುತ್ತಾ?

ಸಾರಾಂಶ

* ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮಳೆ ಭೀತಿ * ಐದನೇ ದಿನದಾಟದ ಹವಾಮಾನ ವರದಿ ಬಹಿರಂಗ * ಐದನೇ ದಿನದಾಟ ಸಾಂಗವಾಗಿ ನಡೆಯುವುದು ಬಹುತೇಕ ಪಕ್ಕಾ

ಸೌಥಾಂಪ್ಟನ್‌(ಜೂ.22): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯಕ್ಕೆ ಮಳೆ ಬಿಟ್ಟೂ ಬಿಡದಂತೆ ಕಾಡುತ್ತಿದೆ. ಆದರೆ ಐದನೇ ದಿನದಾಟ ಯಾವುದೇ ಅಡಚಣೆಯಿಲ್ಲದೇ ನಡೆಯುವ ಸಾಧ್ಯತೆಯಿದೆ.

ಹೌದು, ಸದ್ಯ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ 4 ದಿನಗಳು ಮುಕ್ತಾಯವಾಗಿದ್ದು, ಈ ಪೈಕಿ ಎರಡು ದಿನಗಳ ಕಾಲ ಒಂದೇ ಒಂದು ಎಸೆತ ಕಾಣದೇ ಪಂದ್ಯ ರದ್ದಾಗಿದೆ. ಟೆಸ್ಟ್‌ ವಿಶ್ವಕಪ್‌ ಫೈನಲ್‌ನಲ್ಲಿ ಸರಿಯಾಗಿ ಭರ್ತಿ ಎರಡು ದಿನ ಕೂಡಾ ಪಂದ್ಯಾಟ ನಡೆದಿಲ್ಲ. ಸೌಥಾಂಪ್ಟನ್‌ನಲ್ಲಿ ಬೆಳಗಿನ ಹೊತ್ತಿಗೆ ಮೋಡ ಕವಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಬೀಳುವ ಸೂಚನೆಯಿದೆ. ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಯುಕೆ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 18(ಮೊದಲ ದಿನ)ರ ಶುಕ್ರವಾರ ಹಾಗೂ ಜೂನ್ 21(ನಾಲ್ಕನೇ ದಿನದಾಟ)ರ ಸೋಮವಾರ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಒಂದೇ ಒಂದು ಎಸೆತವೂ ಕಾಣದೇ ದಿನದಾಟ ರದ್ದಾಗಿತ್ತು. ಎರಡನೇ ದಿನದಾಟದಲ್ಲಿ ಕೇವಲ 64.4 ಓವರ್‌ ಬೌಲಿಂಗ್ ಮಾಡಲಷ್ಟೇ ಸಾಧ್ಯವಾಗಿತ್ತು. ಮೂರನೇ ದಿನ ಭಾರತ ವಿರುದ್ದ ಕೇನ್‌ ವಿಲಿಯಮ್ಸನ್‌ ಪಡೆ ಕೊಂಚ ಹಿಡಿತ ಸಾಧಿಸಿತ್ತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 217 ರನ್‌ಗಳಿಗೆ ಸರ್ವಪತನ ಕಂಡಿದ್ದರೆ, ಇತ್ತ ನ್ಯೂಜಿಲೆಂಡ್ ಮೂರನೇ ದಿನದಾಟದಂತ್ಯದ ವೇಳೆಗೆ ಕೇವಲ 2 ವಿಕೆಟ್ ಕಳೆದುಕೊಂಡು 101 ರನ್‌ ಕಲೆಹಾಕಿದೆ.

ಇಂಗ್ಲೆಂಡ್‌ನಲ್ಲಿ ಮಹತ್ವದ ಐಸಿಸಿ ಕ್ರಿಕೆಟ್‌ ಪಂದ್ಯಗಳನ್ನು ನಡೆಸಬಾರದು: ಕೆವಿನ್ ಪೀಟರ್‌ಸನ್

ಮಳೆ ಹಾಗೂ ತಾಂತ್ರಿಕ ಅಡಚಣೆಯಿಂದ ವ್ಯರ್ಥವಾದ ಓವರ್‌ಗಳನ್ನು ಸರಿದೂಗಿಸಲು ಐಸಿಸಿ ಮೇ 23ನೇ ದಿನವನ್ನು ಮೀಸಲು ದಿನವಾಗಿ ಇಟ್ಟಿದೆ. ಹೀಗಾಗಿ ಇನ್ನೆರಡು ದಿನ ಮಳೆ ಅಡಚಣೆ ಮಾಡದಿದ್ದರೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸ್ಪಷ್ಟ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!