
ನವದೆಹಲಿ(ಜ.26): ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಶುಭಸಂದರ್ಭದಲ್ಲಿ ದೇಶದ ಜನತೆಗೆ ಹಾಗೂ ಅಭಿಮಾನಿಗಳಿಗೆ ಕ್ರೀಡಾತಾರೆಯರು ಗಣರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ.
ದೇಶದ ಮಾಜಿ, ಹಾಲಿ ಹಾಗೂ ಹಿರಿ-ಕಿರಿಯ ಕ್ರೀಡಾತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಈಗ ನಾವೇನು ಮಾಡುತ್ತೇವೆ ಎನ್ನುವುದರ ಮೇಲೆ ನಮ್ಮ ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ನಾವೆಲ್ಲ ಸೇರಿ ದೇಶವನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಇನ್ನಷ್ಟು ಎತ್ತರಕ್ಕೇರುವಂತೆ ಮಾಡೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
72ನೇ ಗಣರಾಜ್ಯೋತ್ಸವ, ರಾಜಪಥದಲ್ಲಿ ಸರಳ ಆಚರಣೆ!
ವಿರಾಟ್ ಕೊಹ್ಲಿ ಮಾತ್ರವಲ್ಲದೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್, ಸುರೇಶ್ ರೈನಾ, ಕ್ರೀಡಾ ಸಚಿವ ಕಿರಣ್ ರಿಜಿಜು, ಖ್ಯಾತ ಕುಸ್ತಿಪಟು ಭಜರಂಗ್ ಫೂನಿಯಾ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮುಂತಾದವರು ಶುಭ ಕೋರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.