ಆಸೀಸ್ ಎದುರು ಏಕದಿನ ತಂಡ ಕೂಡಿಕೊಂಡ ಟೀಂ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್

Suvarna News   | Asianet News
Published : Nov 27, 2020, 09:50 AM IST
ಆಸೀಸ್ ಎದುರು ಏಕದಿನ ತಂಡ ಕೂಡಿಕೊಂಡ ಟೀಂ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಯಾರ್ಕರ್ ಸ್ಪೆಷಲಿಸ್ಟ್ ಟಿ. ನಜರಾಜನ್  ಟೀಂ ಇಂಡಿಯಾ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಈ ಕುರಿಯಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಮುಂಬೈ(ನ.27): ಭಾರತ ಕ್ರಿಕೆಟ್ ತಂಡದ ಯುವ ವೇಗದ ಬೌಲರ್ ಟಿ. ನಟರಾಜನ್‌ರನ್ನಯ ಬಿಸಿಸಿಐ ಆಯ್ಕೆ ಸಮಿತಿ ಏಕದಿನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಈ ಮೊದಲು ನಟರಾಜನ್ ಕೇವಲ ಟಿ20 ಸರಣಿಗೆ ಮಾತ್ರ ತಂಡದಲ್ಲಿ ಸ್ಥಾನ ಪಡೆದಿದ್ದರು.

ಆದರೆ ಶುಕ್ರವಾರದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಯಾರ್ಕರ್ ಸ್ಪೆಷಲಿಸ್ಟ್ ನಟರಾಜನ್ ಅವರನ್ನು ಏಕದಿನ ತಂಡಕ್ಕೆ ಸೇರ್ಪಡೆಗೊಳಿಸಿರುವುದಾಗಿ ಬಿಸಿಸಿಐನ ಹಿರಿಯರ ಆಯ್ಕೆ ಸಮಿತಿ ಖಚಿತಪಡಿಸಿದೆ.

ಇದರೊಂದಿಗೆ ಟಿ. ನಟರಾಜನ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಟಿ. ನಟರಾಜನ್ ಡೆತ್‌ ಓವರ್‌ನಲ್ಲೇ 71 ಯಾರ್ಕರ್ ಎಸೆತಗಳನ್ನು ಹಾಕಿ ಗಮನ ಸೆಳೆದಿದ್ದರು. 

ಸ್ಟೀವ್ ಸ್ಮಿತ್‌ ಔಟ್‌ ಮಾಡೋದು ಹೇಗೆ? ಸಚಿನ್‌ ಕೊಟ್ರು ಉಪಯುಕ್ತ ಸಲಹೆ

ಮೊದಲ ಏಕದಿನ ಪಂದ್ಯದಲ್ಲಿ ಟಿ ನಟರಾಜನ್ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲವಾಗಿದ್ದಾರೆ. ಮುಂಬರುವ 2 ಏಕದಿನ ಪಂದ್ಯಗಳಲ್ಲಾದರೂ ಈ ವೇಗಿ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದನ್ನು ಕಾದುನೋಡಬೇಕಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ