
ಕೊಲಂಬೊ(ಜು.17): ಭಾರತ ವಿರುದ್ಧದ 3 ಏಕದಿನ, 3 ಟಿ20 ಪಂದ್ಯಗಳ ಸರಣಿಗೆ ಶ್ರೀಲಂಕಾ ಕೊನೆಗೂ 24 ಸದಸ್ಯರ ತಂಡವನ್ನು ಪ್ರಕಟಿಸಿದೆ. ದಸುನ್ ಶನಕ ತಂಡದ ನಾಯಕರಾಗಿ ನೇಮಕಗೊಂಡಿದ್ದು, ಕಳೆದ 4 ವರ್ಷಗಳಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ನಾಯಕನಾಗುತ್ತಿರುವ 10ನೇ ಆಟಗಾರ ಎನಿಸಿದ್ದಾರೆ.
ಭಾನುವಾರ(ಜು.18) ಮೊದಲ ಏಕದಿನ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ಪ್ರವಾಸದಿಂದ ವಾಪಸಾದ ಬಳಿಕ ಲಂಕಾ ತಂಡದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಲಂಕಾ ಕ್ರಿಕೆಟ್ ಮಂಡಳಿ ಒಟ್ಟು 3 ತಂಡಗಳನ್ನು ಸಿದ್ಧಪಡಿಸಿತ್ತು. ಅಂತಿಮವಾಗಿ ಸರಣಿ ಆರಂಭಕ್ಕೆ ಕೇವಲ 2 ದಿನ ಬಾಕಿ ಇರುವಾಗ ತಂಡವನ್ನು ಪ್ರಕಟಿಸಿದೆ.
ಕುಸಾಲ್ ಪೆರೆರಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ದಸುನ್ ಶನಕ ಅವರಿಗೆ ನಾಯಕತ್ವ ಪಟ್ಟ ಕಟ್ಟಿದ ಬೆನ್ನಲ್ಲೇ ಬಲಗೈ ಗಾಯದ ಕಾರಣದಿಂದಾಗಿ ಕುಸಾಲ್ ಪೆರೆರಾ ಭಾರತ ವಿರುದ್ದದ ಸೀಮಿತ ಓವರ್ಗಳ ಸರಣಿಯಿಂದ ಹೊರಬಿದ್ದಿದ್ದಾರೆ. ಇನ್ನು ವೇಗಿ ಬಿನುರಾ ಫರ್ನಾಂಡೋ ಕೂಡಾ ಭಾರತ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.
#BreakingNews ಇಂಡೋ-ಲಂಕಾ ವೇಳಾಪಟ್ಟಿಯಲ್ಲಿ ಮತ್ತೆ ಕೊಂಚ ಬದಲಾವಣೆ..!
ಭಾರತ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 18ರಿಂದ ಆರಂಭವಾಗಲಿದೆ. ಏಕದಿನ ಸರಣಿಯು ಜುಲೈ 18, 20 ಹಾಗೂ 23ರಂದು ನಡೆದರೆ, ಟಿ20 ಸರಣಿಯು ಜುಲೈ 25, 27 ಹಾಗೂ 29ರಂದು ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.