
ಪುಣೆ(ಜ.10): ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭದಲ್ಲಿ ಅಬ್ಬರಿಸಿ ಬಳಿಕ ದಿಢೀರ್ ವಿಕೆಟ್ ಕಳೆದುಕೊಂಡಿತು. ಹೀಗಾಗಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 201 ರನ್ ಸಿಡಿಸಿದೆ. ಈ ಮೂಲಕ ಶ್ರೀಲಂಕಾಗೆ 202 ರನ್ ಟಾರ್ಗೆಟ್ ನೀಡಿದೆ.
ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ಅತ್ಯುತ್ತಮ ಆರಂಭದ ನೀಡಿದರೂ, ಮಧ್ಯಮ ಕ್ರಮಾಂಕದ ಕುಸಿತ ತಂಡದ ಬೃಹತ್ ಮೊತ್ತದ ಮೇಲೆ ಹೊಡೆತ ನೀಡಿತು. ಧವನ್ ಹಾಗೂ ರಾಹುಲ್ ಮೊದಲ ವಿಕೆಟ್ಗೆ 97 ರನ್ ಜೊತೆಯಾಟ ನೀಡಿದರು. ಇಷ್ಟೇ ಅಲ್ಲ ಆರಂಭಿಕರಿಬ್ಬರೂ ಅರ್ಧಶತಕ ಸಿಡಿಸಿ ಮಿಂಚಿದರು.
ಧವನ್ 52 ರನ್ ಸಿಡಿಸಿ ಔಟಾದರೆ, ರಾಹುಲ್ 54 ರನ್ ಚಚ್ಚಿದರು. ಸಂದಕನ್ ಮೋಡಿಗೆ ಬಲಿಯಾದ ಆರಂಭಿಕರು ನಿರಾಸೆಯೊಂದಿಗೆ ಪೆವಿಲಿಯನ್ಗೆ ಹೆಜ್ಜೆ ಹಾಕಿದರು. ಇನ್ನು ಬ್ಯಾಟಿಂಗ್ ಆರ್ಡರ್ನಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಸಂಜು ಸಾಮ್ಸನ್ ಸಿಕ್ಸರ್ ಮೂಲಕ 6 ರನ್ ಸಿಡಿಸಿದರು. ಆದರೆ ಮರು ಎಸೆತದಲ್ಲೇ ಔಟಾದರು.
ಶ್ರೇಯಸ್ ಅಯ್ಯರ್ ಕೇವಲ 4 ರನ್ಗೆ ಸುಸ್ತಾದರು. ಮನೀಶ್ ಪಾಂಡೆ ಹಾಗೂ ವಿರಾಟ್ ಕೊಹ್ಲಿ ಜೊತೆಯಾಟ ಹೆಚ್ಚು ಹೊತ್ತು ಇರಲಿಲ್ಲ. ಕೊಹ್ಲಿ 26 ರನ್ ಸಿಡಿಸಿ ಔಟಾದರು. ಅಂತಿಮ ಹಂತದಲ್ಲಿ ಪಾಂಡೆ ಹಾಗೂ ಶಾರ್ದೂಲ್ ಠಾಕೂರ್ ಅಬ್ಬರಿಸಿದರು.
ಪಾಂಡೆ ಅಜೇಯ 31 ರನ್ ಸಿಡಿಸಿದರೆ, ಠಾಕೂರ್ ಅಜೇಯ 22 ರನ್ ಸಿಡಿಸಿದರು. ಈ ಮೂಲಕ ಭಾರತ 6 ವಿಕೆಟ್ ನಷ್ಟಕ್ಕೆ 201 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.