ರೋಹಿತ್ ಶರ್ಮಾ ಬದಲು ಸೂರ್ಯಕುಮಾರ್ ಯಾದವ್‌ಗೆ ಚಾನ್ಸ್‌ ನೀಡಲು ಒತ್ತಾಯ

Kannadaprabha News   | Asianet News
Published : Nov 14, 2020, 09:42 AM IST
ರೋಹಿತ್ ಶರ್ಮಾ ಬದಲು ಸೂರ್ಯಕುಮಾರ್ ಯಾದವ್‌ಗೆ ಚಾನ್ಸ್‌ ನೀಡಲು ಒತ್ತಾಯ

ಸಾರಾಂಶ

ರೋಹಿತ್ ಶರ್ಮಾ ಫಿಟ್ನೆಸ್ ವಿಚಾರ ಇನ್ನು ಗೊಂದಲದ ಗೂಡಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಲಿ ಎನ್ನುವ ಕೂಗು ಕೇಳಿ ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ನ.14): ಆಸ್ಪ್ರೇಲಿಯಾ ಟೆಸ್ಟ್‌ ಸರಣಿಗೆ ಆಯ್ಕೆಯಾಗಿರುವ ರೋಹಿತ್‌ ಶರ್ಮಾ ಫಿಟ್ನೆಸ್‌ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ರೋಹಿತ್‌ ಫಿಟ್ನೆಸ್‌ ಬಗ್ಗೆ ಬಿಸಿಸಿಐ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೂ ರೋಹಿತ್‌ರನ್ನು ಆಸ್ಪ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್‌ ಸರಣಿಗೆ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಂಜ್ರೇಕರ್‌ ಪ್ರಶ್ನಿಸಿದ್ದಾರೆ. 

ಆಸೀಸ್‌ ಸರಣಿಗೆ ಮೊದಲು ಆಯ್ಕೆ ಮಾಡಿದ ತಂಡದಲ್ಲಿ ರೋಹಿತ್‌ಗೆ ಸ್ಥಾನ ನೀಡದಿರುವುದು ಆರಂಭದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಕ್ರಿಕೆಟ್‌ ಮಂಡಳಿ ರೋಹಿತ್‌ ಗಾಯದ ಕಾರಣವನ್ನು ಮುಂದಿಟ್ಟಿತ್ತು. ಆ ಬಳಿಕ ಮತ್ತೆ ಪರಿಷ್ಕೃತ ಆಟಗಾರರ ಪಟ್ಟಿಯಲ್ಲಿ ರೋಹಿತ್‌ಗೆ ಟೆಸ್ಟ್‌ ತಂಡದಲ್ಲಿ ಅವಕಾಶ ನೀಡಿತು. ಆಟಗಾರರ ಆಯ್ಕೆಗೆ ಐಪಿಎಲ್‌ ಟೂರ್ನಿಯನ್ನೇ ಮಾನದಂಡ ವಾಗಿರಿಸಿಕೊಂಡಿದ್ದರೆ ಮುಂಬೈ ತಂಡದ ಸೂರ್ಯಕುಮಾರ್‌ ಯಾದವ್‌ ಅತ್ಯದ್ಭುತ ಪ್ರದರ್ಶನ ತೋರಿದ್ದರು. ಸೂರ್ಯರನ್ನು ಆಸೀಸ್‌ ಸರಣಿಗೆ ಯಾವ ಕಾರಣಕ್ಕೆ ಆಯ್ಕೆ ಮಾಡಲಿಲ್ಲ ಎಂದು ಮಂಜ್ರೇಕರ್‌ ಪ್ರಶ್ನೆ ಮಾಡಿದ್ದಾರೆ. ಈ ನಡುವೆ ಸೂರ್ಯಕುಮಾರ್‌ ಬ್ಯಾಟಿಂಗ್‌ ವೈಖರಿಯನ್ನು ಹರ್ಭಜನ್‌ ಸಿಂಗ್‌ ಹೊಗಳಿದ್ದಾರೆ. ಸೂರ್ಯ, ಭಾರತದ ಎಬಿ ಡಿವಲಿಯರ್ಸ್‌ ಎಂದು ಹರ್ಭಜನ್‌ ಹೇಳಿದ್ದಾರೆ.

ಆಸ್ಪ್ರೇಲಿಯಾ ಸರಣಿಗೆ ಟೀಂ ಇಂಡಿಯಾ ರೆಟ್ರೋ ಜೆರ್ಸಿ

ರೋಹಿತ್‌ರನ್ನು ಸೀಮಿತ ಓವರ್‌ಗಳ ಪಂದ್ಯಕ್ಕೆ ಆಯ್ಕೆ ಮಾಡದಿರುವ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಸದ್ಯ ರೋಹಿತ್‌ ಶೇ.70 ರಷ್ಟು ಫಿಟ್ನೆಸ್‌ ಹೊಂದಿದ್ದಾರೆ. ಆಸೀಸ್‌ ವಿರುದ್ಧದ ಟೆಸ್ಟ್‌ ಸರಣಿ ವೇಳೆಗೆ ರೋಹಿತ್‌ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ