
ಸೂರತ್(ನ.22): ಮುಷ್ತಾಕ್ ಅಲಿ ರಾಷ್ಟ್ರೀಯ ಟಿ20 ಟೂರ್ನಿಯ ಸೂಪರ್ ಲೀಗ್ನಲ್ಲಿ ಕರ್ನಾಟಕ ಶುಭಾರಂಭ ಮಾಡಿದೆ. ಗುರುವಾರ ಇಲ್ಲಿ ನಡೆದ ‘ಬಿ’ ಗುಂಪಿನ ಮೊದಲ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಕರ್ನಾಟಕ, ತಮಿಳುನಾಡು ತಂಡವನ್ನು 20 ಓವರ್ಗಳಲ್ಲಿ 7 ವಿಕೆಟ್ಗೆ 158 ರನ್ಗಳಿಗೆ ನಿಯಂತ್ರಿಸಿತು. ಸುಲಭ ಗುರಿ ಬೆನ್ನತ್ತಿದ ಹಾಲಿ ಚಾಂಪಿಯನ್ ತಂಡ, ಕೆ.ಎಲ್. ರಾಹುಲ್ ಹಾಗೂ ನಾಯಕ ಮನೀಶ್ ಪಾಂಡೆ ಅವರ ಅಜೇಯ ಅರ್ಧಶತಕಗಳ ನೆರವಿನಿಂದ 16.2 ಓವರಲ್ಲಿ ಗೆಲುವಿನ ದಡ ಸೇರಿತು.
ಮುಷ್ತಾಕ್ ಅಲಿ ಟಿ20: ಇಂದಿನಿಂದ ಟಿ20 ಸೂಪರ್ ಲೀಗ್
ಕರ್ನಾಟಕ ತಂಡಕ್ಕೆ ದೇವದತ್ ಪಡಿಕ್ಕಲ್ ಸ್ಫೋಟಕ ಆರಂಭ ಒದಗಿಸಿದರು. 20 ಎಸೆತಗಳಲ್ಲಿ 36 ರನ್ ಸಿಡಿಸಿ ಔಟಾದರು. ಮೊದಲ ವಿಕೆಟ್ಗೆ ರಾಹುಲ್ ಹಾಗೂ ದೇವದತ್ 7 ಓವರಲ್ಲಿ 70 ರನ್ ಜೊತೆಯಾಟವಾಡಿದರು. 2ನೇ ವಿಕೆಟ್ಗೆ ಜತೆಯಾದ ರಾಹುಲ್ ಹಾಗೂ ಪಾಂಡೆ, ತಮಿಳುನಾಡು ಬೌಲರ್ಗಳ ಮೇಲೆ ಸವಾರಿ ಮಾಡಿದರು. ರಾಹುಲ್ 46 ಎಸೆತಗಳಲ್ಲಿ 69 ರನ್ ಗಳಿಸಿದರೆ, ಪಾಂಡೆ 33 ಎಸೆತಗಳಲ್ಲಿ 52 ರನ್ ಸಿಡಿಸಿದರು.
ಮುಷ್ತಾಕ್ ಅಲಿ ಟಿ20: ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ
ಮೊದಲು ಬ್ಯಾಟ್ ಮಾಡಿದ ತಮಿಳುನಾಡು ಪರ ನಾಯಕ ದಿನೇಶ್ ಕಾರ್ತಿಕ್ 43 ರನ್ ಗಳಿಸಿದರು. ಕರ್ನಾಟಕ ಪರ ವಿ.ಕೌಶಿಕ್ 2, ರೋನಿತ್ ಮೋರೆ ತಲಾ 2 ವಿಕೆಟ್ ಕಿತ್ತರು. ಶುಕ್ರವಾರ ಕರ್ನಾಟಕ, ಜಾರ್ಖಂಡ್ ತಂಡವನ್ನು ಎದುರಿಸಲಿದೆ. ಶುಕ್ರವಾರ[ನ.22]ರಂದು 6.30ಕ್ಕೆ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡವು ಜಾರ್ಖಂಡ್ ತಂಡವನ್ನು ಎದುರಿಸಲಿದೆ.
ಸ್ಕೋರ್:
ತಮಿಳುನಾಡು 158/7
ಕರ್ನಾಟಕ 161/1
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.