ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ ಆರಂಭಿಕ ಆಘಾತ

Published : Jan 26, 2021, 12:44 PM IST
ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ ಆರಂಭಿಕ ಆಘಾತ

ಸಾರಾಂಶ

ಸಯ್ಯದ್‌ ಮುಷ್ತಾಕ್ ಅಲಿ ಟಿ20 ಟೂರ್ನಿಯ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಹಮದಾಬಾದ್‌(ಜ.26): ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಆರಂಭಿಕ ಆಘಾತ ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಲಿಳಿದ ಕರ್ನಾಟಕ ತಂಡವು 26 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಅದೃಷ್ಟದ ಮೇಲೆ ನಾಕೌಟ್‌ ಹಂತ ಪ್ರವೇಶಿಸಿದ್ದ ಕರ್ನಾಟಕ ತಂಡ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಹೀಗಿದ್ದು ಉತ್ತಮ ಆರಂಭ ಪಡೆಯುವಲ್ಲಿ ಕರ್ನಾಟಕ ತಂಡ ವಿಫಲವಾಗಿದೆ. ಮೊದಲ 5 ಓವರ್‌ ಮುಕ್ತಾಯದ ವೇಳೆಗೆ ಕರ್ನಾಟಕ ತಂಡ 4 ವಿಕೆಟ್‌ ಕಳೆದುಕೊಂಡು 32 ರನ್‌ ಬಾರಿಸಿದೆ.

ಲಂಕಾ ವಿರುದ್ಧ ಇಂಗ್ಲೆಂಡ್‌ 2-0 ಸರಣಿ ಕ್ಲೀನ್‌ ಸ್ವೀಪ್‌

ಕರ್ನಾಟಕ ಪರ ನಾಯಕ ಕರುಣ್ ನಾಯರ್ 12 ರನ್‌ ಗಳಿಸಿ ಸಂದೀಪ್ ಶರ್ಮಾಗೆ ವಿಕೆಟ್ ಒಪ್ಪಿಸಿದರೆ, ಪಡಿಕ್ಕಲ್(11) ಹಾಗೂ ಪವನ್ ದೇಶ್‌ಪಾಂಡೆ(0) ಅವರನ್ನು ಒಂದೇ ಓವರ್‌ನಲ್ಲಿ ಸಿದ್ದಾರ್ಥ್‌ ಕೌಲ್‌ ಪೆವಿಲಿಯನ್ನಿಗಟ್ಟಿದ್ದಾರೆ. ಇನ್ನು ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಶರತ್ ಬಿ.ಆರ್‌(02) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಚ್‌ನಲ್ಲಿ ಕೂತು ಬೇರೆಯವರ ಆಟ ನೋಡೋದು ಸುಲಭ ಅಲ್ಲ -ಒಂದೂವರೆ ವರ್ಷದ ತಪ್ಪಸ್ಸಿಗೆ ಪಡಿಕ್ಕಲ್ ಭಾವುಕ
ಮಹಾತ್ಮನಿಗೆ ಐಸಿಸಿ ವಿಶೇಷ ಗೌರವ.. 2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ನಿಗದಿ..!