ಮುಷ್ತಾಕ್‌ ಅಲಿ ಟ್ರೋಫಿ: ಪಂಜಾಬ್‌ಗೆ ಸಾಧಾರಣ ಗುರಿ ನೀಡಿದ ಕರ್ನಾಟಕ

Suvarna News   | Asianet News
Published : Jan 26, 2021, 01:47 PM IST
ಮುಷ್ತಾಕ್‌ ಅಲಿ ಟ್ರೋಫಿ: ಪಂಜಾಬ್‌ಗೆ ಸಾಧಾರಣ ಗುರಿ ನೀಡಿದ ಕರ್ನಾಟಕ

ಸಾರಾಂಶ

ಸಯ್ಯದ್ ಮುಷ್ತಾಕ್‌ ಅಲಿ ಟೂರ್ನಿಯಲ್ಲಿ ಪಂಜಾಬ್‌ ಫೈನಲ್‌ ಪ್ರವೇಶಿಸಲು ಕರ್ನಾಟಕ ತಂಡವು ಕೇವಲ 88 ರನ್‌ಗಳ ಸಾಧಾರಣ ಗುರಿ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಅಹಮದಾಬಾದ್‌(ಜ.26): ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಕೇವಲ 87 ರನ್‌ಗಳಿಗೆ ಸರ್ವಪತನ ಕಂಡಿದ್ದು, ಬಲಿಷ್ಠ ಪಂಜಾಬ್‌ಗೆ ಗೆಲ್ಲಲು ಸಾಧಾರಣ ಗುರಿ ನೀಡಿದೆ. ರಾಜ್ಯ ತಂಡದ ಬ್ಯಾಟ್ಸ್‌ಮನ್‌ಗಳ ದಯಾನೀಯ ಬ್ಯಾಟಿಂಗ್‌ ವೈಫಲ್ಯ ಹಾಗೂ ಪಂಜಾಬ್‌ ಬೌಲರ್‌ಗಳ ಶಿಸ್ತುಬದ್ದ ದಾಳಿ ಎದುರು ಹಾಲಿ ಚಾಂಪಿಯನ್‌ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಯಿತು.

ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಇಲ್ಲಿನ ಮೊಟೆರಾ ಕ್ರೀಡಾಂಗಣದಲ್ಲಿ ಪಂಜಾಬ್‌ ಬೌಲಿಂಗ್‌ ಎದುರು ಕರ್ನಾಟಕದ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಅಂದಹಾಗೆ 87 ರನ್‌ ಸಯ್ಯದ್‌ ಮುಷ್ತಾಕ್‌ ಅಲಿ ಟೂರ್ನಿಯಲ್ಲಿ ಕರ್ನಾಟಕ ದಾಖಲಿಸಿದ ಅತಿ ಕಡಿಮೆ ಮೊತ್ತ ಎನಿಸಿದೆ. ಪಡಿಕ್ಕಲ್(11), ಕರುಣ್‌ ನಾಯರ್(12), ಅನಿರುದ್ಧ್ ಜೋಶಿ(27), ಶ್ರೇಯಸ್‌ ಗೋಪಾಲ್‌(13) ಮಾತ್ರ ಎರಡಂಕಿ ಮೊತ್ತ ದಾಖಲಿಸಿದ್ದು ಬಿಟ್ಟರೆ, ಉಳಿದ್ಯಾವ ಆಟಗಾರರು ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ.

ಪಂಜಾಬ್‌ ಪರ ಸಿದ್ದಾರ್ಥ್‌ ಕೌಲ್‌ 3, ಸಂದೀಪ್ ಶರ್ಮಾ, ಆರ್ಶದೀಪ್‌ ಸಿಂಗ್ ಹಾಗೂ ರಮನ್ದೀಪ್‌ ಸಿಂಗ್‌ 2 ತಲಾ ವಿಕೆಟ್ ಪಡೆದರೆ, ಮಯಾಂಕ್‌ ಮಾರ್ಕಂಡೆ ತಲಾ ಒಂದು ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ: 87/10
ಅನಿರುದ್ಧ್ ಜೋಶಿ: 27
ಸಿದ್ದಾರ್ಥ್‌ ಕೌಲ್‌: 15/3
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 World Cup 2026: ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?