ಮುಷ್ತಾಕ್ ಅಲಿ ಟ್ರೋಫಿ: ಜಯದ ವಿಶ್ವಾಸದಲ್ಲಿ ಕರ್ನಾಟಕ

Published : Jan 14, 2021, 09:11 AM IST
ಮುಷ್ತಾಕ್ ಅಲಿ ಟ್ರೋಫಿ: ಜಯದ ವಿಶ್ವಾಸದಲ್ಲಿ ಕರ್ನಾಟಕ

ಸಾರಾಂಶ

ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಮೂರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡವು ತ್ರಿಪುರಾವನ್ನು ಎದುರಿಸಲು ಸಜ್ಜಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಬೆಂಗಳೂರು(ಜ.14): ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ನಾಕೌಟ್ ಹಂತಕ್ಕೇರಬೇಕಿದ್ದರೆ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಉಳಿದ ಮೂರು ಪಂದ್ಯಗಳನ್ನು ಜಯಿಸಬೇಕಿದೆ.

ಗುರುವಾರ ಇಲ್ಲಿನ ಕೆಎಸ್‌ಸಿಎ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ತ್ರಿಪುರಾ ವಿರುದ್ದದ 'ಎ' ಗುಂಪಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಜತೆಗೆ 2 ಅಂಕಗಳೊಂದಿಗೆ ನೆಟ್ ರನ್‌ರೇಟ್ ಉತ್ತಮಗೊಳಿಸಿಕೊಳ್ಳಲು ಕರುಣ್ ನಾಯರ್ ನೇತೃತ್ವದ ಕರ್ನಾಟಕ ತಂಡ ಎದುರು ನೋಡುತ್ತಿದೆ.

ಮುಷ್ತಾಕ್ ಅಲಿ ಟ್ರೋಫಿ: ಪಂಜಾಬ್‌ ಎದುರು ಕರ್ನಾಟಕಕ್ಕೆ ಹೀನಾಯ ಸೋಲು

ಮೊದಲ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ವಿರುದ್ದ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ತಂಡ ಆ ಬಳಿಕ ಪಂಜಾಬ್ ಎದುರು ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಕರುಣ್ ನಾಯರ್ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಲಯ ಕಂಡುಕೊಂಡಿಲ್ಲ. ಹೀಗಾಗಿ ರಾಜ್ಯ ತಂಡದ ನಾಯಕನ ಮೇಲೆ ಸಾಕಷ್ಟು ಒತ್ತಡವಿದೆ.

ನಾಯಕನ ಫಾರ್ಮ್‌ ಕೊರತೆ ಜತೆಗೆ ಕೆ.ಎಲ್‌. ರಾಹುಲ್‌, ಮನೀಶ್ ಪಾಂಡೆ, ಮಯಾಂಕ್ ಅಗರ್‌ವಾಲ್ ಅವರಂತಹ ಸ್ಟಾರ್ ಆಟಗಾರರ ಅನುಪಸ್ಥಿತಿ ಕೂಡಾ ಕರ್ನಾಟಕ ತಂಡವನ್ನು ಬಹುವಾಗಿ ಕಾಡಲಾರಂಭಿಸಿದೆ. ಹೀಗಾಗಿ ಈ ಎಲ್ಲಾ ಸವಾಲುಗಳನ್ನು ಕರ್ನಾಟಕ ತಂಡ ಯಾವ ರೀತಿ ಎದುರಿಸಲಿದೆ ಎನ್ನುವ ಕುತೂಹಲ ಜೋರಾಗಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಚ್‌ನಲ್ಲಿ ಕೂತು ಬೇರೆಯವರ ಆಟ ನೋಡೋದು ಸುಲಭ ಅಲ್ಲ -ಒಂದೂವರೆ ವರ್ಷದ ತಪ್ಪಸ್ಸಿಗೆ ಪಡಿಕ್ಕಲ್ ಭಾವುಕ
ಮಹಾತ್ಮನಿಗೆ ಐಸಿಸಿ ವಿಶೇಷ ಗೌರವ.. 2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ನಿಗದಿ..!