ಮುಷ್ತಾಕ್‌ ಅಲಿ ಟಿ20: ಬರೋಡಾ ಮಣಿಸಿ ತಮಿಳುನಾಡು ಚಾಂಪಿಯನ್‌

Suvarna News   | Asianet News
Published : Feb 01, 2021, 08:32 AM IST
ಮುಷ್ತಾಕ್‌ ಅಲಿ ಟಿ20: ಬರೋಡಾ ಮಣಿಸಿ ತಮಿಳುನಾಡು ಚಾಂಪಿಯನ್‌

ಸಾರಾಂಶ

ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬಲಿಷ್ಠ ತಂಡವನ್ನು ಅನಾಯಾಸವಾಗಿ ಮಣಿಸಿದ ದಿನೇಶ್ ಕಾರ್ತಿಕ್ ನೇತೃತ್ವದ ತಮಿಳುನಾಡು ತಂಡ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಅಹಮದಾಬಾದ್(ಫೆ.01)‌: ಸಯ್ಯದ್‌ ಮುಷ್ತಾಕ್‌ ಅಲಿ ರಾಷ್ಟ್ರೀಯ ಟಿ20 ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ನೇತೃತ್ವದ ತಮಿಳುನಾಡು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 

ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ತಮಿಳುನಾಡು, ಬರೋಡಾ ವಿರುದ್ಧ 7 ವಿಕೆಟ್‌ಗಳಿಂದ ಜಯಿಸಿತು. ತಂಡಕ್ಕಿದು 2ನೇ ಟ್ರೋಫಿ. 2006-07ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ತಂಡ ಚಾಂಪಿಯನ್‌ ಆಗಿತ್ತು. ಎರಡೂ ಬಾರಿ ದಿನೇಶ್‌ ಕಾರ್ತಿಕ್‌ ಅವರೇ ತಂಡದ ನಾಯಕ ಅನ್ನುವುದು ವಿಶೇಷ. 

ಮುಷ್ತಾಕ್ ಅಲಿ ಟ್ರೋಫಿ ಫೈನಲ್: ಪ್ರಶಸ್ತಿಗಾಗಿಂದು ತಮಿಳುನಾಡು, ಬರೋಡಾ ಫೈಟ್‌

ಮೊದಲು ಬ್ಯಾಟ್‌ ಮಾಡಿದ ಬರೋಡಾ ತಂಡ ಎಂ ಸಿದ್ದಾರ್ಥ್‌ ಮಾರಕ ದಾಳಿಗೆ ತತ್ತರಿಸಿ 36 ರನ್‌ಗಳಿಸುವಷ್ಟರಲ್ಲಿ 6 ವಿಕೆಟ್‌ ಕಳೆದುಕೊಂಡುಕೊಂಡು.  ವಿಷ್ಣು (49) ಹೋರಾಟದಿಂದ 9 ವಿಕೆಟ್‌ಗೆ 120 ರನ್‌ ಕಲೆಹಾಕಿತು. ಸಿದ್ದಾರ್ಥ್‌ ಕೇವಲ 20 ರನ್‌ ನೀಡಿ 4 ವಿಕೆಟ್ ಪಡೆದರೆ, ಎಂ ಮೊಹಮ್ಮದ್, ಸೋನು ಯಾದವ್‌, ಬಾಬಾ ಅಪರಾಜಿತ್ ತಲಾ ಒಂದೊಂದು ವಿಕೆಟ್ ಪಡೆದರು.

ಇನ್ನು ಸಾಧಾರಣ ಗುರಿ ಬೆನ್ನತ್ತಿದ ತಮಿಳುನಾಡು ತಂಡ ಕೇವಲ 3 ವಿಕೆಟ್‌ ಕಳೆದುಕೊಂಡು ಇನ್ನೂ ಎರಡು ಓವರ್‌ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಕಳೆದ ಆವೃತ್ತಿಯ ಮುಷ್ತಾಕ್ ಅಲಿ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ತಮಿಳುನಾಡು ತಂಡ ಈ ಬಾರಿ ಕಪ್ ಜಯಿಸುವಲ್ಲಿ ಯಶಸ್ವಿಯಾಗಿದೆ. 

ಸ್ಕೋರ್‌: 
ಬರೋಡಾ 120/9 
ತಮಿಳುನಾಡು 123/3
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ