T20 World Cup 2024: ಮತ್ತೆ ಗುಡುಗಿದ ರೋಹಿತ್ ಶರ್ಮಾ; ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಭಾರತ

Published : Jun 28, 2024, 12:07 AM ISTUpdated : Jun 28, 2024, 12:14 AM IST
T20 World Cup 2024: ಮತ್ತೆ ಗುಡುಗಿದ ರೋಹಿತ್ ಶರ್ಮಾ; ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಭಾರತ

ಸಾರಾಂಶ

ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿರಾಟ್ ಕೊಹ್ಲಿ 9 ಎಸೆತಗಳಲ್ಲಿ 9 ರನ್‌ಗಳಿಸಿ ರೀಸ್ ಟಾಪ್ಲೆಗೆ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ ಕೇವಲ 40 ರನ್‌ಗಳಿಗೆ ಸೀಮಿತವಾಯಿತು. 

ಗಯಾನ: ಮಳೆ ಅಡಚಣೆಯ ನಡುವೆಯೂ ಸ್ಪೋಟಕ ಬ್ಯಾಟಿಂಗ್ ನಡೆಸಿದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಆಟದ ನೆರವಿನಿಂದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸವಾಲಿನ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದೆ.

ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿರಾಟ್ ಕೊಹ್ಲಿ 9 ಎಸೆತಗಳಲ್ಲಿ 9 ರನ್‌ಗಳಿಸಿ ರೀಸ್ ಟಾಪ್ಲೆಗೆ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ ಕೇವಲ 40 ರನ್‌ಗಳಿಗೆ ಸೀಮಿತವಾಯಿತು. 

T20 World Cup 2024 ಸೆಮಿಫೈನಲ್‌: ಭಾರತ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಮತ್ತೆ ಆಸರೆಯಾದ ರೋಹಿತ್-ಸೂರ್ಯ: ಕೇವಲ 40 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ಜೋಡಿ, ಆ ಬಳಿಕ ಮೈಚಳಿ ಬಿಟ್ಟು ಬ್ಯಾಟ್ ಬೀಸಿತು. ಅಂತಿಮವಾಗಿ ಈ ಜೋಡಿ ಮೂರನೇ ವಿಕೆಟ್‌ಗೆ 50 ಎಸೆತಗಳನ್ನು ಎದುರಿಸಿ 73 ರನ್‌ಗಳ ಜತೆಯಾಟವಾಡಿತು. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೇವಲ 39 ಎಸತೆಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 57 ರನ್ ಬಾರಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ 36 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 13 ಎಸೆತಗಳಲ್ಲಿ 23 ರನ್ ಸಿಡಿಸಿದರೆ, ರವೀಂದ್ರ ಜಡೇಜಾ ಅಜೇಯ 17 ಹಾಗೂ ಅಕ್ಷರ್ ಪಟೇಲ್ 10 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.

ಇಂಗ್ಲೆಂಡ್ ಕ್ರಿಕೆಟ್ ತಂಡದ ಪರ ಕ್ರಿಸ್ ಜೋರ್ಡನ್ 3 ವಿಕೆಟ್ ಪಡೆದರೆ, ರೀಸ್ ಟಾಪ್ಲೆ, ಜೋಫ್ರಾ ಆರ್ಚರ್, ಸ್ಯಾಮ್ ಕರ್ರನ್, ಆದಿಲ್ ರಶೀದ್ ತಲಾ ಒಂದೊಂದು ವಿಕೆಟ್ ಪಡೆದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌