T20 World Cup 2024: ಇಂದು ಭಾರತ vs ಬಾಂಗ್ಲಾ ಸೂಪರ್‌-8 ಕದನ

Published : Jun 22, 2024, 10:34 AM ISTUpdated : Jun 22, 2024, 10:57 AM IST
T20 World Cup 2024: ಇಂದು ಭಾರತ vs ಬಾಂಗ್ಲಾ ಸೂಪರ್‌-8 ಕದನ

ಸಾರಾಂಶ

ಆರಂಭಿಕ ಪಂದ್ಯದಲ್ಲಿ ಆಫ್ಘನ್ನರನ್ನು ಮಣಿಸಿರುವ ಭಾರತಕ್ಕೆ 2ನೇ ಗುಂಪಿನ ಕೊನೆ ಪಂದ್ಯದಲ್ಲಿ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಹೀಗಾಗಿ ಆಸೀಸ್‌ ಸವಾಲಿಗೂ ಮುನ್ನವೇ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಲು ಭಾರತ ಎದುರು ನೋಡುತ್ತಿದೆ.

ನಾರ್ತ್‌ ಸೌಂಡ್‌(ಆ್ಯಂಟಿಗಾ): ಅಫ್ಘಾನಿಸ್ತಾನ ವಿರುದ್ಧ ಅಮೋಘ ಗೆಲುವಿನ ಉತ್ಸಾಹದಲ್ಲಿರುವ ಮಾಜಿ ಚಾಂಪಿಯನ್‌ ಟೀಂ ಇಂಡಿಯಾ, ಸೂಪರ್‌-8ರ ಘಟ್ಟದಲ್ಲಿ ಸತತ 2ನೇ ಗೆಲುವಿನ ಕಾತರದಲ್ಲಿದೆ. ತಂಡ ಶನಿವಾರ ಬಾಂಗ್ಲಾದೇಶ ವಿರುದ್ಧ ಸೆಣಸಾಡಲಿದ್ದು, ಈ ಪಂದ್ಯದಲ್ಲೂ ಗೆದ್ದರೆ ಸೆಮಿಫೈನಲ್‌ ಹಾದಿ ಸುಗಮಗೊಳ್ಳಲಿದೆ.

ಆರಂಭಿಕ ಪಂದ್ಯದಲ್ಲಿ ಆಫ್ಘನ್ನರನ್ನು ಮಣಿಸಿರುವ ಭಾರತಕ್ಕೆ 2ನೇ ಗುಂಪಿನ ಕೊನೆ ಪಂದ್ಯದಲ್ಲಿ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಹೀಗಾಗಿ ಆಸೀಸ್‌ ಸವಾಲಿಗೂ ಮುನ್ನವೇ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಲು ಭಾರತ ಎದುರು ನೋಡುತ್ತಿದೆ.

ಆಗಸ್ಟ್ 15ರಿಂದ ಬೆಂಗಳೂರಿನಲ್ಲಿ ಮಹಾರಾಜ ಟ್ರೋಫಿ ಟಿ20 ಹಬ್ಬ

ಭಾರತ ಟೂರ್ನಿಯ ಆರಂಭಕ್ಕೂ ಮುನ್ನ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಇಬ್ಬರೂ ತಮ್ಮ ಮೇಲೆ ಭರವಸೆ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ರೋಹಿತ್‌ ಐರ್ಲೆಂಡ್‌ ವಿರುದ್ಧ ಏಕೈಕ ಅರ್ಧಶತಕ ಬಾರಿಸಿದ್ದರೆ, ಉಳಿದ 3 ಪಂದ್ಯದಲ್ಲೂ ದೊಡ್ಡ ಇನ್ನಿಂಗ್ಸ್‌ ಕಟ್ಟಿಲ್ಲ. ಕೊಹ್ಲಿ 4 ಪಂದ್ಯದಲ್ಲಿ 29 ರನ್‌ ಗಳಿಸಿದ್ದಾರೆ. ಹೀಗಾಗಿ ಬಾಂಗ್ಲಾ ವಿರುದ್ಧವಾದರೂ ಇಬ್ಬರು ದಿಗ್ಗಜರ ಬ್ಯಾಟ್‌ನಿಂದ ರನ್‌ ಹರಿಯಬಹುದೇ ಎಂಬ ಕುತೂಹಲವಿದೆ.

ಬದಲಾವಣೆ ನಿರೀಕ್ಷೆ: ಕೊಹ್ಲಿಯನ್ನು ಆರಂಭಿಕನಾಗಿ ಆಡಿರುವ ನಿರ್ಧಾರ ಈ ಬಾರಿ ಕೈ ಹಿಡಿದಿಲ್ಲ. ಹೀಗಾಗಿ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ನೀಡಿ, ಕೊಹ್ಲಿಯನ್ನು 3ನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಯೂ ಇದೆ. ಶಿವಂ ದುಬೆ ಸತತ ವೈಫಲ್ಯ ಅನುಭವಿಸಿಸುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ. ಸಂಜು ಸ್ಯಾಮ್ಸನ್‌ ಕೂಡಾ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ಸೂರ್ಯಕುಮಾರ್‌, ರಿಷಭ್‌ ಪಂತ್‌, ಹಾರ್ದಿಕ್ ಪಾಂಡ್ಯ ಮೇಲೆ ತಂಡ ಭಾರಿ ನಿರೀಕ್ಷೆ ಇಟ್ಟುಕೊಂಡಿದೆ.

T20 World Cup 2024: ಬುಮ್ರಾ ಮಾರಕ ದಾಳಿಗೆ ಆಫ್ಘನ್ ಧೂಳೀಪಟ, ಟೀಂ ಇಂಡಿಯಾಗೆ ಸುಲಭ ಜಯ

ಕಳೆದ ಪಂದ್ಯದಲ್ಲಿ ಸಿರಾಜ್‌ರನ್ನು ಹೊರಗಿಟ್ಟು ಕುಲ್ದೀಪ್‌ಗೆ ಅವಕಾಶ ಮಾಡಿಕೊಡಲಾಗಿತ್ತು. ಬಾಂಗ್ಲಾ ವಿರುದ್ಧ ಪಂದ್ಯದಲ್ಲೂ ಕುಲ್ದೀಪ್‌ರನ್ನೇ ಮುಂದುವರಿಸುವ ಸಾಧ್ಯತೆಯಿದೆ. ಬೂಮ್ರಾ ಅಭೂತಪೂರ್ವ ಲಯದಲ್ಲಿದ್ದು, ಅವರನ್ನು ಎದುರಿಸುವುದೇ ಬಾಂಗ್ಲಾ ಬ್ಯಾಟರ್‌ಗಳಿಗೆ ಪ್ರಮುಖ ಸವಾಲಾಗಿ ಪರಿಣಮಿಸಿದೆ.

ಪುಟಿದೇಳುವ ಗುರಿ: ಆಸ್ಟ್ರೇಲಿಯಾ ವಿರುದ್ಧ ಸೂಪರ್‌-8 ಹಂತದ ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದ ಬಾಂಗ್ಲಾ ಮೊದಲ ಗೆಲುವಿನ ಕಾತರದಲ್ಲಿದೆ. ತಂಡ ಭಾರತ ವಿರುದ್ಧವೂ ಸೋತರೆ ಸೆಮಿಫೈನಲ್‌ ರೇಸ್‌ನಿಂದ ಬಹುತೇಕ ಹೊರಗುಳಿಯಲಿದೆ. ಅಭ್ಯಾಸ ಪಂದ್ಯದಲ್ಲೂ ಭಾರತ ವಿರುದ್ಧ ಪರಾಭವಗೊಂಡಿದ್ದ ತಂಡ ಈಗ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ.

ಅನುಭವಿಗಳಾದ ಶಕೀಬ್‌ ಅಲ್‌ ಹಸನ್‌, ಮಹ್ಮೂದುಲ್ಲಾ, ತಸ್ಕೀನ್‌ ಅಹ್ಮದ್‌, ನಾಯಕ ನಜ್ಮುಲ್‌ ಹೊಸೈನ್‌ ತಂಡದ ಆಧಾರಸ್ತಂಭಗಳಾಗಿದ್ದು, ಮುಸ್ತಾಫಿಜುರ್‌, ರಿಶಾದ್‌ ಹಸನ್‌ ಹಾಗೂ ತೌಹೀದ್‌ ಪ್ರದರ್ಶನವೂ ತಂಡಕ್ಕೆ ನಿರ್ಣಾಯಕ ಎನಿಸಿಕೊಂಡಿದೆ.

ಒಟ್ಟು ಮುಖಾಮುಖಿ: 13

ಭಾರತ: 12

ಬಾಂಗ್ಲಾದೇಶ: 01

ಸಂಭವನೀಯ ಆಟಗಾರರ ಪಟ್ಟಿ

ಭಾರತ: ರೋಹಿತ್‌(ನಾಯಕ), ವಿರಾಟ್‌, ರಿಷಭ್‌ ಪಂತ್‌, ಸೂರ್ಯಕುಮಾರ್‌, ದುಬೆ/ಸ್ಯಾಮ್ಸನ್‌, ಹಾರ್ದಿಕ್‌, ಜಡೇಜಾ, ಅಕ್ಷರ್‌, ಬೂಮ್ರಾ, ಕುಲ್ದೀಪ್‌, ಅರ್ಶ್‌ದೀಪ್‌.

ಬಾಂಗ್ಲಾದೇಶ: ತಂಜೀದ್‌, ಲಿಟನ್‌, ನಜ್ಮುಲ್‌(ನಾಯಕ), ಶಕೀಬ್‌, ತೌಹೀದ್‌, ಮಹ್ಮೂದುಲ್ಲಾ, ಮಹೆದಿ, ರಿಶಾದ್‌, ತಸ್ಕೀನ್‌, ತಂಜೀಮ್‌, ಮುಸ್ತಾಫಿಜುರ್‌.

ಪಂದ್ಯ: ರಾತ್ರಿ 8 ಗಂಟೆಗೆ, ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಹಾಟ್‌ಸ್ಟಾರ್‌.

ಪಿಚ್‌ ರಿಪೋರ್ಟ್‌: ಆ್ಯಂಟಿಗಾ ಪಿಚ್‌ ಕಡಿಮೆ ಮೊತ್ತದ ಪಂದ್ಯಗಳಿಗೆ ಹೆಸರುವಾಸಿ. ಇಲ್ಲಿ ಈ ಬಾರಿ ವಿಶ್ವಕಪ್‌ನ 6 ಪಂದ್ಯಗಳ 12 ಇನ್ನಿಂಗ್ಸ್‌ಗಳ ಪೈಕಿ ಕೇವಲ 2 ಬಾರಿ 160+ ರನ್‌ ದಾಖಲಾಗಿವೆ. ಸ್ಪಿನ್ನರ್‌ಗಳೂ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.

ಪಂದ್ಯಕ್ಕೆ ಮಳೆ ಭೀತಿ

ಭಾರತ-ಬಾಂಗ್ಲಾ ನಡುವಿನ ಪಂದ್ಯಕ್ಕೆ ಮಳೆ ಭೀತಿ ಇದೆ. ಶುಕ್ರವಾರದ ಆಸ್ಟ್ರೇಲಿಯಾ-ಬಾಂಗ್ಲಾ ಪಂದ್ಯ ಕೂಡಾ ಮಳೆಯಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಶನಿವಾರವೂ ಶೇ.40ರಷ್ಟು ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?