T20 World Cup: ಟೀಂ ಇಂಡಿಯಾ ಮೆಂಟರಿಂಗ್‌ಗೆ 1 ರೂಪಾಯಿ ಚಾರ್ಜ್ ಮಾಡಿಲ್ಲ ಧೋನಿ!

Published : Oct 12, 2021, 08:58 PM IST
T20 World Cup: ಟೀಂ ಇಂಡಿಯಾ ಮೆಂಟರಿಂಗ್‌ಗೆ 1 ರೂಪಾಯಿ ಚಾರ್ಜ್ ಮಾಡಿಲ್ಲ ಧೋನಿ!

ಸಾರಾಂಶ

T20 World Cup ಟೂರ್ನಿಗೆ ಟೀಂ ಇಂಡಿಯಾ ತಯಾರಿ ಆರಂಭ ತಂಡಕ್ಕೆ ಮೆಂಟರ್ ಆಗಿ ಎಂ.ಎಸ್.ಧೋನಿ ನೇಮಕ ಮಾಡಿರುವ ಬಿಸಿಸಿಐ ತಂಡಕ್ಕೆ ಮೆಂಟರಿಂಗ್ ಮಾಡಲು ಧೋನಿ 1 ರೂಪಾಯಿ ಚಾರ್ಜ್ ಮಾಡಿಲ್ಲ  

ಮುಂಬೈ(ಅ.12): ಟೀಂ ಇಂಡಿಯಾವನ್ನು ಎಂ.ಎಸ್.ಧೋನಿ(MS Dhoni) ಅದೆಷ್ಟು ಪ್ರೀತಿಸುತ್ತಾರೆ ಅನ್ನೋದು ಬಿಡಿಸಿ ಹೇಳಬೇಕಾಗಿಲ್ಲ. ಇದೀಗ ಧೋನಿಗೆ ತಂಡದ ಮೇಲಿರುವ ಪ್ರೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಟಿ20 ವಿಶ್ವಕಪ್ ಟೂರ್ನಿಗೆ(T20 World Cup) ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ(Team India) ಎಂ.ಎಸ್.ಧೋನಿಯನ್ನು ಮೆಂಟರ್(Mentor) ಆಗಿ ಬಿಸಿಸಿಐ ನೇಮಕ ಮಾಡಿದೆ. ಆದರೆ ಧೋನಿ ತನ್ನ ಜವಾಬ್ದಾರಿ ನಿರ್ವಹಿಸಲು ಒಂದು ರೂಪಾಯಿ ಹಣ ಚಾರ್ಜ್ ಮಾಡಿಲ್ಲ.

IPL 2021: ಡೆಲ್ಲಿ ವಿರುದ್ಧ ಧೋನಿ ಸ್ಫೋಟ ಕಂಡ ಕೊಹ್ಲಿ ಹೇಳಿದ್ದು ಒಂದೇ ಮಾತು!

ಟಿ20 ವಿಶ್ವಕಪ್ ಟೂರ್ನಿಗಾಗಿ  ಧೋನಿ ಉಚಿತವಾಗಿ ಟೀಂ ಇಂಡಿಯಾಗೆ ಮೆಂಟರಿಂಗ್ ಮಾಡಲಿದ್ದಾರೆ. ಇದಕ್ಕಾಗಿ ಧೋನಿ ಯಾವುದೇ ಚಾರ್ಜ್ ಮಾಡುತ್ತಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ(Sourav Ganguly) ಹೇಳಿದ್ದಾರೆ. ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಸೈನ್ಯಕ್ಕೆ ಧೋನಿ ಮೆಂಟರ್ ಮಾಡಲಿದ್ದಾರೆ. 

MS ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನ ಶ್ರೇಷ್ಠ ನಾಯಕ: ರವಿಶಾಸ್ತ್ರಿ

ಗಂಗೂಲಿಗೂ ಮೊದಲು ಬಿಸಿಸಿಐ(BCCI) ಕಾರ್ಯದರ್ಶಿ ಜಯ್ ಶಾ ಕೂಡ ಸ್ಪಷ್ಟಪಡಿಸಿದ್ದರು. ಧೋನಿ ಯಾವುದೇ ಫೀಸ್ ತೆಗೆದುಕೊಳ್ಳದೆ ಟೀಂ ಇಂಡಿಯಾಗೆ ಮೆಂಟರಿಂಗ್ ಮಾಡಲಿದ್ದಾರೆ. ದೇಶ ಹಾಗೂ ಟೀಂ ಇಂಡಿಯಾದಲ್ಲಿನ ಪ್ರೀತಿಯಿಂದ ಧೋನಿ ಉಚಿತವಾಗಿ ಮೆಂಟರಿಂಗ್ ಮಾಡುತ್ತಿದ್ದಾರೆ ಎಂದು ಜಯ್ ಶಾ ಹೇಳಿದ್ದಾರೆ.

 

T20 World Cup ಧೋನಿಯನ್ನು ಮೆಂಟರ್ ಮಾಡಿದ್ದೇಕೆ; ಗುಟ್ಟು ಬಿಚ್ಚಿಟ್ಟ ದಾದಾ

ಟಿ20 ವಿಶ್ವಕಪ್, ಏಕದಿನ ವಿಶ್ವಪೃಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ರಚಿಸಿರುವ ಧೋನಿ ಇದೀಗ ಮೆಂಟರ್ ಆಗಿ ಟೀಂ ಇಂಡಿಯಾಗೆ ಪ್ರಶಸ್ತಿ ಗೆಲ್ಲಿಸಿಕೊಡುವ ಮಹತ್ತರ ಜವಾಬ್ದಾರಿ ಹೊತ್ತಿದ್ದಾರೆ. 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಂ ಇಂಡಿಯಾ ಯಾವುದೇ ಐಸಿಸಿ ಪ್ರಶಸ್ತಿ ಗೆದ್ದಿಲ್ಲ. ನಿರಾಸೆ ಅನುಭವಿಸಿದ್ದೇ ಹೆಚ್ಚು.

ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ, 4ನೇ ಚಾಂಪಿಯನ್ ಪಟ್ಟ ಕಿರೀಟ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಫೈನಲ್ ತಲುಪಿರುವ ಚೆನ್ನೈ ತಂಡ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?