ಊರ್ವಶಿ ಕರೀತಾ ಇದಾಳೆ ಎಂದು ಪಂತ್ ಕಾಲೆಳೆದ ಫ್ಯಾನ್ಸ್‌..! ರಿಷಭ್ ನೀಡಿದ ಖಡಕ್ ರಿಪ್ಲೇ ವೈರಲ್‌..!

Published : Nov 08, 2022, 05:39 PM IST
ಊರ್ವಶಿ ಕರೀತಾ ಇದಾಳೆ ಎಂದು ಪಂತ್ ಕಾಲೆಳೆದ ಫ್ಯಾನ್ಸ್‌..! ರಿಷಭ್ ನೀಡಿದ ಖಡಕ್ ರಿಪ್ಲೇ ವೈರಲ್‌..!

ಸಾರಾಂಶ

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮೀಸ್‌ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾ ಸೆಮೀಸ್‌ಗೂ ಮುನ್ನ ರಿಷಭ್ ಪಂತ್ ಕಾಲೆಳೆದ ಕ್ರಿಕೆಟ್ ಫ್ಯಾನ್ಸ್‌ ಕಾಲೆಳೆದ ಫ್ಯಾನ್ಸ್‌ಗೆ ಮುಟ್ಟಿನೋಡಿಕೊಳ್ಳುವಂತ ಉತ್ತರ ನೀಡಿದ ಪಂತ್

ಬೆಂಗಳೂರು(ನ.08): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. ಇನ್ನೊಂದೆಡೆ , ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್, ಸೂಕ್ತ ಅವಕಾಶಕ್ಕಾಗಿ ಎದುರು ನೋಡುತ್ತಿದ್ದು, ಕೇವಲ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿದು, ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಇದೆಲ್ಲದರ ನಡುವೆ ಕೆಲ ಕ್ರಿಕೆಟ್ ಅಭಿಮಾನಿಗಳು, ರಿಷಭ್ ಪಂತ್ ಅವರನ್ನು ಕಾಲೆಳೆಯುವ ಪ್ರಯತ್ನ ನಡೆಸಿದ್ದು, ಇದಕ್ಕೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರವನ್ನು ಪಂತ್ ನೀಡಿದ್ದಾರೆ.

ಹೌದು, ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಕೆಲದಿನಗಳ ಹಿಂದಷ್ಟೇ ಸುದ್ದಿವಾಹಿನಿಗಳ ಹೆಡ್‌ಲೈನ್‌ ಆಗಿದ್ದನ್ನು ಬಹುತೇಕ ಯಾವ ಕ್ರಿಕೆಟ್ ಅಭಿಮಾನಿಯೂ ಮರೆತಂತೆ ಇಲ್ಲ. ಇದರ ಭಾಗವಾಗಿಯೇ ಕೆಲ ಕ್ರಿಕೆಟ್ ಅಭಿಮಾನಿಗಳು ರಿಷಭ್ ಪಂತ್ ಅವರನ್ನು ಕಾಲೆಳೆದಿದ್ದಾರೆ. ಕಳೆದ ವಾರಾಂತ್ಯದಲ್ಲಿ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಿನ ಪಂದ್ಯದ ವೇಳೆ ಬೌಂಡರಿ ಗೆರೆ ಹೊರಗೆ ಬ್ಯಾಟ್ ಹಿಡಿದು ಹೋಗುತ್ತಿದ್ದ ರಿಷಭ್ ಪಂತ್ ಅವರನ್ನು ಉದ್ದೇಶಿಸಿ ಕೆಲ ಅಭಿಮಾನಿಗಳು, ನಿಮ್ಮನ್ನು ಊರ್ವಶಿ ಕರೆಯುತ್ತಿದ್ದಾಳೆ ಎಂದು ಕಾಲೆಳೆದಿದ್ದಾರೆ. ಇದು ಪದೇ ಪದೇ ಪುನರಾವರ್ತನೆಯಾದಾಗ ಸುಮ್ಮನಾಗದ ರಿಷಭ್ ಪಂತ್, ಹಾಗಿದ್ರೆ ಹೋಗಿ ಭೇಟಿಯಾಗಿ ಎಂದು ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದ್ದಾರೆ. 

ನೆನಪಿದೆಯಾ ಊರ್ವಶಿ-ಪಂತ್ ವಿವಾದ: ಕೆಲದಿನಗಳ ಹಿಂದಿನ ಸಂದರ್ಶನವೊಂದರಲ್ಲಿ ಬಾಲಿವುಡ್ ನಟಿ ಊರ್ವಶಿ ರೌಟೇಲಾ,  'Mr RP' ನನ್ನನ್ನು ಹೋಟೆಲ್‌ನಲ್ಲಿ ಭೇಟಿಯಾಗಲು ಗಂಟೆಗಟ್ಟಲೇ ಕಾದಿದ್ದರು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ರಿಷಭ್ ಪಂತ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ, ಜನರು ಪ್ರಚಾರಕ್ಕಾಗಿ ಏನೇನೆಲ್ಲಾ ಹೇಳುತ್ತಾರಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನನ್ನನ್ನ ಬಿಟ್ಟು ಬಿಡು ಅಕ್ಕಾ ಎಂದು ಪೋಸ್ಟ್​ ಹಾಕಿ 10 ನಿಮಿಷಗಳ ಬಳಿಕ ಸ್ಟೋರಿ ಡಿಲಿಟ್ ಮಾಡಿದ್ದರು. 

T20 World Cup: ಮಳೆಯಿಂದ 2 ಸೆಮೀಸ್ ಪಂದ್ಯಗಳು ರದ್ದಾದ್ರೆ, ಯಾವ ತಂಡಗಳಿಗಿವೆ ಫೈನಲ್‌ಗೇರುವ ಅವಕಾಶ?

ಇದು ಊರ್ವಶಿಯನ್ನು ಮತ್ತಷ್ಟು ರೊಚ್ಚಿಗೇಳುವಂತೆ ಮಾಡಿತ್ತು. ತಮ್ಮ ಬ್ಯಾಟ್​ ಬಾಲ್​ ಅಷ್ಟೇ ಆಡಬೇಕು. ನಾನೇನು ಮುನ್ನಿ ಅಲ್ಲ. ನಿನ್ನಂತಹ ಚಿಕ್ಕ ಹುಡುಗನೊಂದಿಗೆ ಪ್ರೀತಿ ಪ್ರೇಮದಲ್ಲಿ ಬಿದ್ದು  ಹಾಳಾಗಲು. ರಕ್ಷಾ ಬಂಧನದ ಶುಭಾಶಯಗಳು ಆರ್​ಪಿ ತಮ್ಮ. ಒಬ್ಬಂಟಿ ಹುಡುಗಿಯ ಲಾಭ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಡಿ ಎಂದು ಪಂತ್‌ಗೆ ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪಂತ್ ಹಾಗೂ ಊರ್ವಶಿ ರೌಟೇಲಾ ನಡುವೇ ಏನೋ ನಡಿತಾ ಇದೆ ಎನ್ನುವ ಚರ್ಚೆ ಆರಂಭವಾಯಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್