T20 World Cup ಜಿಂಬಾಬ್ವೆ ಸವಾಲು ಗೆದ್ದು ಸೆಮೀಸ್‌ಗೇರಲು ಟೀಂ ಇಂಡಿಯಾ ಕಾತರ

Published : Nov 06, 2022, 08:00 AM IST
T20 World Cup ಜಿಂಬಾಬ್ವೆ ಸವಾಲು ಗೆದ್ದು ಸೆಮೀಸ್‌ಗೇರಲು ಟೀಂ ಇಂಡಿಯಾ ಕಾತರ

ಸಾರಾಂಶ

ಮೆಲ್ಬರ್ನ್‌ ಮೈದಾನದಲ್ಲಿಂದು ಭಾರತಕ್ಕೆ ಜಿಂಬಾಬ್ವೆ ಸವಾಲು ಜಿಂಬಾಬ್ವೆ ಮಣಿಸಿ ಸೆಮೀಸ್‌ಗೇರುವ ವಿಶ್ವಾಸದಲ್ಲಿ ಟೀಂ ಇಂಡಿಯಾ ಫಾರ್ಮ್‌ಗೆ ಮರಳಲು ನಾಯಕ ರೋಹಿತ್ ಶರ್ಮಾ ಕಾತರ

ಮೆಲ್ಬರ್ನ್‌(ನ.06): ಈ ಬಾರಿಯ ಟಿ20 ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಭಾರತ, ಟೂರ್ನಿಯಲ್ಲಿ ಇನ್ನೂ ಸೆಮಿಫೈನಲ್‌ ಪ್ರವೇಶ ಖಚಿತಪಡಿಸಿಕೊಂಡಿಲ್ಲ. ಭಾನುವಾರ ಗುಂಪು ಹಂತದ ಕೊನೆ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಸೆಣಸಲಿದ್ದು, ಗೆದ್ದು ನಾಕೌಟ್‌ಗೇರಲು ಕಾತರಿಸುತ್ತಿದೆ.

ಮೇಲ್ನೋಟಕ್ಕೆ ಭಾರತವೇ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡರೂ, ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದ್ದ ಜಿಂಬಾಬ್ವೆ ಎಷ್ಟುಅಪಾಯಕಾರಿ ಎಂಬುದು ರೋಹಿತ್‌ ಬಳಗಕ್ಕೆ ಅರಿವಿದೆ. ಕೆ.ಎಲ್‌.ರಾಹುಲ್‌ ಲಯಕ್ಕೆ ಮರಳಿದ್ದು ಸಂತಸದ ಸುದ್ದಿ. ಆದರೆ ನಾಯಕ ರೋಹಿತ್‌ ಇನ್ನಷ್ಟೇ ದೊಡ್ಡ ಇನ್ನಿಂಗ್ಸ್‌ ಆಡಬೇಕಿದೆ. ಅಭೂತಪೂರ್ವ ಲಯದಲ್ಲಿರುವ ವಿರಾಟ್‌ ಕೊಹ್ಲಿ-ಸೂರ‍್ಯಕುಮಾರ್‌ ಜೋಡಿ ಮತ್ತೊಂದು ಆಕರ್ಷಕ ಆಟಕ್ಕೆ ಸಜ್ಜಾಗಿದ್ದಾರೆ. ಇದರ ಜೊತೆಗೆ ಹಾರ್ದಿಕ್‌ ಪಾಂಡ್ಯ, ದಿನೇಶ್‌ ಕಾರ್ತಿಕ್‌ ಕೂಡಾ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿದೆ. ವಿಫಲರಾಗುತ್ತಿರುವ ಕಾರ್ತಿಕ್‌ ಬದಲು ರಿಷಭ್‌ ಪಂತ್‌ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಆರ್‌.ಅಶ್ವಿನ್‌ ಬದಲು ಯಜುವೇಂದ್ರ ಚಹಲ್‌ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಇನ್ನು, ವೇಗದ ಬೌಲಿಂಗ್‌ನಲ್ಲಿ ಭುವನೇಶ್ವರ್‌, ಆಶ್‌ರ್‍ದೀಪ್‌, ಶಮಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಜಿಂಬಾಬ್ವೆ ವಿರುದ್ಧವೂ ಮಿಂಚಲು ಎದುರು ನೋಡುತ್ತಿದ್ದಾರೆ.

T20 World Cup ಭಾರತ ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ, ಸೆಮಿಫೈನಲ್ ಲೆಕ್ಕಾಚಾರ!

ಮತ್ತೊಂದೆಡೆ ಜಿಂಬಾಬ್ವೆ ಹಲವು ತಾರಾ ಆಟಗಾರರನ್ನು ಹೊಂದಿದ್ದು, ಸಿಕಂದರ್‌ ರಾಜಾ, ಶೀನ್‌ ವಿಲಿಯಮ್ಸ್‌ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಭಾರತದ ಬ್ಯಾಟಿಂಗ್‌ ಪಡೆಯನ್ನು ಕಟ್ಟಿಹಾಕುವ ಜವಾಬ್ದಾರಿ ಬೌಲರ್‌ಗಳ ಮೇಲಿದೆ. ಆಲ್ರೌಂಡ್‌ ಪ್ರದರ್ಶನ ತೋರಿದರಷ್ಟೇ ಭಾರತಕ್ಕೆ ಸೋಲುಣಿಸುವ ಅವಕಾಶವಿದೆ.

ಸಂಭವನೀಯ ಆಟಗಾರರ ಪಟ್ಟಿ

ಭಾರತ: ಕೆ ಎಲ್ ರಾಹುಲ್‌, ರೋಹಿತ್‌ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್‌, ಹಾರ್ದಿಕ್‌ ಪಾಂಡ್ಯ, ದಿನೇಶ್ ಕಾರ್ತಿಕ್‌, ರವಿಚಂದ್ರನ್ ಅಶ್ವಿನ್‌, ಮೊಹಮ್ಮದ್ ಶಮಿ, ಭುವನೇಶ್ವರ್‌ ಕುಮಾರ್, ಅಶ್‌ರ್‍ದೀಪ್‌ ಸಿಂಗ್.

ಜಿಂಬಾಬ್ವೆ: ವೆಸ್ಲೆ ಮಧೆವೆರೆ, ಕ್ರೆಗ್‌ ಎರ್ವಿನ್‌(ನಾಯಕ), ಮಿಲ್ಟನ್‌ ಶುಂಭಾ, ಶೀನ್ ವಿಲಿಯಮ್ಸ್‌, ಸಿಕಂದರ್ ರಾಜಾ, ರೇಗಿಸ್ ಚಕಬ್ವಾ, ರೆಯನ್ ಬರ್ಲ್‌, ಎವಾನ್ಸ್‌, ಎನ್‌ಗರಾವ, ಮುಜರಬಾನಿ, ಚಟಾರ

ಪಂದ್ಯ: ಮಧ್ಯಾಹ್ನ 1.30ಕ್ಕೆ, 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಪಿಚ್‌ ರಿಪೋರ್ಚ್‌

ಮೆಲ್ಬರ್ನ್‌ ಕ್ರೀಡಾಂಗಣದಲ್ಲಿ ಟೂರ್ನಿಯಲ್ಲಿ 4 ಪಂದ್ಯಗಳಿಗೆ ಮಳೆ ಅಡ್ಡಿಪಡಿಸಿತ್ತು, 3 ಪಂದ್ಯ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಭಾನುವಾರದ ಪಂದ್ಯಕ್ಕೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆಯಾದರೂ ಕೆಲ ಓವರ್‌ಗಳು ಕಡಿತಗೊಂಡು ಪಂದ್ಯ ನಡೆಯಲಿದೆ ಎನ್ನಲಾಗುತ್ತಿದೆ. ಟಾಸ್‌ ನಿರ್ಣಾಯಕ ಪಾತ್ರ ವಹಿಸಬಹುದು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ